AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ. ರಣವೀರ್ ಸಿಂಗ್ ಅವರ 'ಧುರಂಧರ್ 2' ಪ್ರಪಂಚದಾದ್ಯಂತ ಅಬ್ಬರಿಸುತ್ತಿದ್ದು, ತೆಲುಗು ಪ್ರದೇಶಗಳಲ್ಲೂ ಪ್ರದರ್ಶನ ಕಾಣುತ್ತಿದೆ. ಇದು 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ ಸವಾಲು ಒಡ್ಡಿದೆ. ರಾಜಕೀಯ ಬ್ಯುಸಿ ನಡುವೆಯೂ ಪವನ್ ಕಲ್ಯಾಣ್ ಈ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.

‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?
ಪವನ್
ರಾಜೇಶ್ ದುಗ್ಗುಮನೆ
|

Updated on: Mar 20, 2026 | 9:07 AM

Share

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಇಡೀ ವಿಶ್ವಾದ್ಯಂತ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಗಳ ಎದುರು ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಹಾಗೂ ತೆಲುಗಿನಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ‘ಲವ್ ಮಾಕ್ಟೇಲ್ 3’ ಸಿನಿಮಾ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದರೆ, ಉಸ್ತಾದ್ ಭಗತ್ ಸಿಂಗ್ ಸಿನಿಮಾ ತೆಲುಗಿನಲ್ಲಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ವಿವರ ಸಿಕ್ಕಿದೆ.

ಪವನ್ ಕಲ್ಯಾಣ್ ಅವರು ಸದ್ಯ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, ಒಪ್ಪಿಕೊಂಡ ಸಿನಿಮಾಗಳನ್ನು ಮಾಡಿ ಮುಗಿಸೋ ಚಾಲೆಂಜ್ ಅವರಿಗೆ ಇತ್ತು. ಈ ಕಾರಣದಿಂದ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಶೂಟ್​​ನ ಪೂರ್ಣಗೊಳಿಸಿದ್ದಾರೆ. ಈ ಚಿತ್ರ ಮೊದಲ ದಿನ 31 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಚಿತ್ರದ ಗ್ರಾಸ್ ಕಲೆಕ್ಷನ್ 37 ಕೋಟಿ ರೂಪಾಯಿ ಆಗಿದೆ ಎಂದು ವರದಿ ಆಗಿದೆ.

ಪವನ್ ಕಲ್ಯಾಣ್ ಅವರು ತಮ್ಮ ಆ್ಯಕ್ಷನ್ ಮೂಲಕ ಮೆಚ್ಚುಗೆ ಪಡೆದವರು. ಈಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಪೊಲೀಸ್ ಪಾತ್ರದ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಈ ಸಿನಿಮಾ ಆದರೂ ಗೆಲ್ಲುತ್ತದೆಯೇ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಕೆಲವೇ ದಿನದಲ್ಲಿ ಇದಕ್ಕೆ ಉತ್ತರ ಸಿಗಲಿದೆ.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ ಹಿಂದಿ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿದೆ. ಆಂಧ್ರದಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಇದು ‘ಉಸ್ತಾದ್ ಭಗತ್ ಸಿಂಗ್’ ಚಿತ್ರಕ್ಕೆ ಸಣ್ಣ ಹೊಡೆತ ಕೊಡುತ್ತಿದೆ. ಆದರೆ, ಇದನ್ನು ಮೆಟ್ಟಿ ನಿಲ್ಲುವ ಕೆಲಸವನ್ನು ‘ಉಸ್ತಾದ್ ಭಗತ್ ಸಿಂಗ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೈವಾರಾಧನೆಯಲ್ಲಿ 'ಮಡಿ' ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!
ದೈವಾರಾಧನೆಯಲ್ಲಿ 'ಮಡಿ' ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!
ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ!
ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ!
ಅಮೆರಿಕದ ಯುದ್ಧವಿಮಾನದ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನದ ಮೇಲೆ ಇರಾನ್ ದಾಳಿ; ಇಲ್ಲಿದೆ ವಿಡಿಯೋ
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!