AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹಲವರು ಚಿತ್ರವನ್ನು ಹಳೆಯ ಕಮರ್ಷಿಯಲ್ ಅಂಶಗಳ ಸಂಗ್ರಹ ಎಂದರೆ, ಮತ್ತೆ ಕೆಲವರು ವಿಂಟೇಜ್ ಶೈಲಿಯನ್ನು ಮೆಚ್ಚಿದ್ದಾರೆ.

‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?
ಉಸ್ತಾದ್ ಭಗತ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Mar 19, 2026 | 11:26 AM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇಂದು (ಮಾರ್ಚ್ 19) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿ ಇರೋದ್ರಿಂದ ಸದ್ಯದ ಮಟ್ಟಿಗೆ ಇದು ಅವರ ಕೊನೆಯ ಸಿನಿಮಾ ಆಗಿರಲಿದೆ. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ಸಿನಿಮಾ ನೋಡಿದ ಅನೇಕರು ಚಿತ್ರದ ವಿಮರ್ಶೆ ತಿಳಿಸುತ್ತಿದ್ದಾರೆ. ಕೆಲವರು ಸಿನಿಮಾನ ಇಷ್ಟಪಟ್ಟರೆ, ಇನ್ನೂ ಕೆಲವರು ಚಿತ್ರ ಹಳೆಯ ಕಮರ್ಷಿಯಲ್ ಅಂಶಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪವನ್ ಕಲ್ಯಾಣ್ ಅವರು ‘ಉತ್ಸಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಭಗತ್ ಸಿಂಗ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ತಮಿಳಿನ ‘ಥೇರಿ’ ಚಿತ್ರದ ರಿಮೇಕ್. ಎಂದು ಹೇಳಲಾಗಿತ್ತು. ಆದರೆ, ಇದು ರಿಮೇಕ್ ಅಲ್ಲ ಎಂದು ನಿರ್ದೇಶಕ ಹರೀಶ್ ಶಂಕರ್ ಅವರು ಹೇಳಿದ್ದಾರೆ. ಚಿತ್ರ ನೋಡಿದ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀಲೀಲಾ ಜೊತೆ ಕಾಣಿಸಿಕೊಳ್ಳುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್: ಕಾರಣ?

‘ಇದು ಔಟ್​​​ಡೇಟೆಡ್ ಆಯ್ತು ಎಂದೆನಿಸಿದೆ. ವಿಂಟೇಜ್ ಸ್ವ್ಯಾಗ್ ಹಾಗೂ ಎನರ್ಜಿ ಇದೆ. ಥಮನ್ ಬಿಜಿಎಂ, ದೇವಿಶ್ರೀ ಪ್ರಸಾದ್ ಹಾಡು ಗಮನ ಸೆಳೆದಿದೆ’ ಎಂದು ಕೆಲವರು ಹೇಳಿದ್ದಾರೆ. ‘ ಇದು ಸಂಪೂರ್ಣವಾಗಿ ಹಳೆಯ ಕಮರ್ಷಿಯಲ್ ಸಿನಿಮಾ. ಇಂತಹ ಕಮರ್ಷಿಯಲ್ ಚಿತ್ರಕ್ಕೆ ಸಾಮಾನ್ಯ ಬರವಣಿಗೆಯ ಅಗತ್ಯವಿರುವುದಿಲ್ಲ. ಆದರೆ ಕನಿಷ್ಠ ಸ್ವಲ್ಪ ತಾಜಾತನವಾದರೂ ಬೇಕು. ಆರಂಭದಿಂದ ಕೊನೆಯವರೆಗೂ ಸಿನಿಮಾ ಹಳೆಯದಾಗಿದೆ ಎಂದು ಭಾಸವಾಗುತ್ತದೆ’ ಎಂದಿದ್ದಾರೆ ಕೆಲವರು.

ಪವನ್ ಕಲ್ಯಾಣ್ ಅವರು ಇತ್ತೀಚೆಗೆ ನಿರಂತರವಾಗಿ ಸೋಲು ಕಾಣುತ್ತಿದ್ದಾರೆ. ಅವರಿಗೆ ದೊಡ್ಡ ಮಟ್ಟದಲ್ಲಿ ಗೆಲುವು ಸಿಕ್ಕಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈಗ ಉಸ್ತಾದ್ ಭಗತ್ ಸಿಂಗ್ ಚಿತ್ರವೂ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು
ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು
ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ
ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ
ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ
ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?