AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​

ನಟಿ ಪಾಯಲ್​ ವಾಗ್ವಾದಕ್ಕೆ ಇಳಿಯುವವರ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇವರಿಂದ ಈ ಅಪಾರ್ಟ್​ಮೆಂಟ್​ನ ಸಾಕಷ್ಟು ನಿವಾಸಿಗಳು ತೊಂದರೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​
ಪಾಯಲ್
ರಾಜೇಶ್ ದುಗ್ಗುಮನೆ
|

Updated on: Jun 25, 2021 | 5:18 PM

Share

ಅನೇಕರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್​ ನಟಿ ಪಾಯಲ್​ ರೋಹಟ್ಗಿ ಅವರನ್ನು ಗುಜರಾತ್​ನ ಅಹ್ಮದಾಬಾದ್ ಪೊಲೀಸರು ಬಂಧಿಸಿ, ವಿಚಾರಣೆ ಆರಂಭಿಸಿದ್ದಾರೆ. ಈ ಮೊದಲು ಕೂಡ ಪಾಯಲ್​ ಸಾಕಷ್ಟು ವಿವಾದಗಳ ಮೂಲಕ ಸುದ್ದಿಯಾಗಿದ್ದರು. ಈಗ ಅವರು ಜೈಲು ಮೆಟ್ಟಿಲು ಹತ್ತುವಂತಾಗಿದೆ.  

ವೃತ್ತಿಯಲ್ಲಿ ವೈದ್ಯರಾಗಿರುವ ಪರಾಗ್​ ಶಾ ಎಂಬುವವರು ಪೊಲೀಸ್​ ಠಾಣೆಯಲ್ಲಿ ಪಾಯಲ್​ ವಿರುದ್ಧ ದೂರು ದಾಖಲು ಮಾಡಿದ್ದರು. ಅಹ್ಮದಾಬಾದ್​ನ ಹೌಸಿಂಗ್​ ಸೊಸೈಟಿಯೊಂದರಲ್ಲಿ ಪರಾಗ್​ ಸದಸ್ಯರಾಗಿದ್ದಾರೆ. ಈ ಹೌಸಿಂಗ್​ ಸೊಸೈಟಿ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಪರಾಗ್​ ವಿರುದ್ಧ ಹಾಗೂ ಆ ಸೊಸೈಟಿಯ ಮುಖ್ಯಸ್ಥರ ವಿರುದ್ಧ ಪಾಯಲ್ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆ. ಅಲ್ಲದೆ, ಬೆದರಿಕೆ ಹಾಕಿದ್ದಾರೆ. ನಂತರ ಈ ಪೋಸ್ಟ್​ಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ವರದಿಗಳ ಪ್ರಕಾರ, ನಟಿ ಪಾಯಲ್​ ವಾಗ್ವಾದಕ್ಕೆ ಇಳಿಯುವವರ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇವರಿಂದ ಈ ಅಪಾರ್ಟ್​ಮೆಂಟ್​ನ ಸಾಕಷ್ಟು ನಿವಾಸಿಗಳು ತೊಂದರೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ನೆರೆ ಹೊರೆಯ ನಿವಾಸಿಗಳ ಜತೆ ಜಗಳವಾಡಿದ, ಬೆದರಿಕೆ ಹಾಕಿದ ಹಾಗೂ ಕೆಟ್ಟ ಶಬ್ದಗಳ ಬಳಕೆ ಆರೋಪದ ಮೇಲೆ ಈಗ ನಟಿಯನ್ನು ಬಂಧಿಸಲಾಗಿದೆ. ಅರೆಸ್ಟ್​ ಮಾಡಿದ ನಂತರದಲ್ಲಿ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಇವರನ್ನು ಕೊವಿಡ್​ ಪರೀಕ್ಷೆಗೂ ಒಳಪಡಿಸಲಾಗುತ್ತಿದೆ.

ಪಾಯಲ್​ ಈ ರೀತಿ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲಲ್ಲ. ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ 2019ರಲ್ಲಿ ಪಾಯಲ್​ ವಿರುದ್ಧ ಪ್ರಕರಣ ದಾಖಲಾಗಿತ್ತು. ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದ ಇವರು, ಸಾಕಷ್ಟು ಬಾರಿ ಕೀಳಾಗಿ ಮಾತನಾಡಿದ್ದಿದೆ. ಇದರಿಂದ ಅವರ ಟ್ವಿಟರ್​ ಖಾತೆಯನ್ನು ಟ್ವಿಟರ್​ ಇಂಡಿಯಾ ಡಿಲೀಟ್​ ಮಾಡಿದೆ.

‘36 ಚೈನಾ ಟೌನ್’​, ‘ಅಗ್ಲಿ ಔರ್​ ಪಗ್ಲಿ’, ‘ಹೇ ಬೇಬಿ’ ಸೇರಿ ಸಾಕಷ್ಟು ಚಿತ್ರಗಳಲ್ಲಿ ಪಾಯಲ್​  ನಟಿಸಿದ್ದಾರೆ. 2008ರಲ್ಲಿ ಬಿಗ್​ ಬಾಸ್​ಗೂ ಕೂಡ ಬಂದಿದ್ದರು. ವ್ರೆಸ್ಲರ್​ ಸಂಗ್ರಾಮ್​ ಸಿಂಗ್​ ಜತೆ ಇವರು ಬಹುಕಾಲದಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ