AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​

ನಟಿ ಪಾಯಲ್​ ವಾಗ್ವಾದಕ್ಕೆ ಇಳಿಯುವವರ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇವರಿಂದ ಈ ಅಪಾರ್ಟ್​ಮೆಂಟ್​ನ ಸಾಕಷ್ಟು ನಿವಾಸಿಗಳು ತೊಂದರೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​
ಪಾಯಲ್
ರಾಜೇಶ್ ದುಗ್ಗುಮನೆ
|

Updated on: Jun 25, 2021 | 5:18 PM

Share

ಅನೇಕರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್​ ನಟಿ ಪಾಯಲ್​ ರೋಹಟ್ಗಿ ಅವರನ್ನು ಗುಜರಾತ್​ನ ಅಹ್ಮದಾಬಾದ್ ಪೊಲೀಸರು ಬಂಧಿಸಿ, ವಿಚಾರಣೆ ಆರಂಭಿಸಿದ್ದಾರೆ. ಈ ಮೊದಲು ಕೂಡ ಪಾಯಲ್​ ಸಾಕಷ್ಟು ವಿವಾದಗಳ ಮೂಲಕ ಸುದ್ದಿಯಾಗಿದ್ದರು. ಈಗ ಅವರು ಜೈಲು ಮೆಟ್ಟಿಲು ಹತ್ತುವಂತಾಗಿದೆ.  

ವೃತ್ತಿಯಲ್ಲಿ ವೈದ್ಯರಾಗಿರುವ ಪರಾಗ್​ ಶಾ ಎಂಬುವವರು ಪೊಲೀಸ್​ ಠಾಣೆಯಲ್ಲಿ ಪಾಯಲ್​ ವಿರುದ್ಧ ದೂರು ದಾಖಲು ಮಾಡಿದ್ದರು. ಅಹ್ಮದಾಬಾದ್​ನ ಹೌಸಿಂಗ್​ ಸೊಸೈಟಿಯೊಂದರಲ್ಲಿ ಪರಾಗ್​ ಸದಸ್ಯರಾಗಿದ್ದಾರೆ. ಈ ಹೌಸಿಂಗ್​ ಸೊಸೈಟಿ ವಾಟ್ಸ್​ಆ್ಯಪ್​ ಗ್ರೂಪ್​ನಲ್ಲಿ ಪರಾಗ್​ ವಿರುದ್ಧ ಹಾಗೂ ಆ ಸೊಸೈಟಿಯ ಮುಖ್ಯಸ್ಥರ ವಿರುದ್ಧ ಪಾಯಲ್ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆ. ಅಲ್ಲದೆ, ಬೆದರಿಕೆ ಹಾಕಿದ್ದಾರೆ. ನಂತರ ಈ ಪೋಸ್ಟ್​ಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

ವರದಿಗಳ ಪ್ರಕಾರ, ನಟಿ ಪಾಯಲ್​ ವಾಗ್ವಾದಕ್ಕೆ ಇಳಿಯುವವರ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇವರಿಂದ ಈ ಅಪಾರ್ಟ್​ಮೆಂಟ್​ನ ಸಾಕಷ್ಟು ನಿವಾಸಿಗಳು ತೊಂದರೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ನೆರೆ ಹೊರೆಯ ನಿವಾಸಿಗಳ ಜತೆ ಜಗಳವಾಡಿದ, ಬೆದರಿಕೆ ಹಾಕಿದ ಹಾಗೂ ಕೆಟ್ಟ ಶಬ್ದಗಳ ಬಳಕೆ ಆರೋಪದ ಮೇಲೆ ಈಗ ನಟಿಯನ್ನು ಬಂಧಿಸಲಾಗಿದೆ. ಅರೆಸ್ಟ್​ ಮಾಡಿದ ನಂತರದಲ್ಲಿ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಇವರನ್ನು ಕೊವಿಡ್​ ಪರೀಕ್ಷೆಗೂ ಒಳಪಡಿಸಲಾಗುತ್ತಿದೆ.

ಪಾಯಲ್​ ಈ ರೀತಿ ವಿವಾದ ಸೃಷ್ಟಿಸುತ್ತಿರುವುದು ಇದೇ ಮೊದಲಲ್ಲ. ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ 2019ರಲ್ಲಿ ಪಾಯಲ್​ ವಿರುದ್ಧ ಪ್ರಕರಣ ದಾಖಲಾಗಿತ್ತು. ಟ್ವಿಟರ್​ನಲ್ಲಿ ಆ್ಯಕ್ಟಿವ್​ ಆಗಿದ್ದ ಇವರು, ಸಾಕಷ್ಟು ಬಾರಿ ಕೀಳಾಗಿ ಮಾತನಾಡಿದ್ದಿದೆ. ಇದರಿಂದ ಅವರ ಟ್ವಿಟರ್​ ಖಾತೆಯನ್ನು ಟ್ವಿಟರ್​ ಇಂಡಿಯಾ ಡಿಲೀಟ್​ ಮಾಡಿದೆ.

‘36 ಚೈನಾ ಟೌನ್’​, ‘ಅಗ್ಲಿ ಔರ್​ ಪಗ್ಲಿ’, ‘ಹೇ ಬೇಬಿ’ ಸೇರಿ ಸಾಕಷ್ಟು ಚಿತ್ರಗಳಲ್ಲಿ ಪಾಯಲ್​  ನಟಿಸಿದ್ದಾರೆ. 2008ರಲ್ಲಿ ಬಿಗ್​ ಬಾಸ್​ಗೂ ಕೂಡ ಬಂದಿದ್ದರು. ವ್ರೆಸ್ಲರ್​ ಸಂಗ್ರಾಮ್​ ಸಿಂಗ್​ ಜತೆ ಇವರು ಬಹುಕಾಲದಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ಪಾರ್ಟಿಗಳೆಂದರೆ ಅಕ್ಷಯ್​ ಕುಮಾರ್​​ಗೆ ಅಲರ್ಜಿ? ಇದರ ಹಿಂದಿದೆ ಇಂಟರೆಸ್ಟಿಂಗ್​ ವಿಚಾರ

ಬಾಲಿವುಡ್​ನಲ್ಲಿ ಲಿಂಗ ತಾರತಮ್ಯ; ಸ್ಟಾರ್​ ನಟರಿಂದ ವಿದ್ಯಾ ಬಾಲನ್​ಗೆ ಈ ಒಂದು ಕಷ್ಟ ತಪ್ಪಿರಲಿಲ್ಲ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ