AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಪ್ರೀತ್ ಬುಮ್ರಾ ಓರ್ವ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್; ತಪ್ಪಿಗೆ ಕ್ಷಮೆ ಕೇಳಿದ ನಟ

‘ಪೆದ್ದಿ’ ಸಿನಿಮಾದ ಮ್ಯೂಸಿಕ್ ಲಾಂಚ್ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಅಭಿಮಾನಿಗಳ ಎದುರು ಮಾತನಾಡುವಾಗ ರಾಮ್ ಚರಣ್ ಅವರು ಈ ತಪ್ಪು ಮಾಡಿದ್ದಾರೆ. ವಿಡಿಯೋ ವೈರಲ್ ಆದ ಕೂಡಲೇ ಅವರು ಕ್ಷಮೆ ಕೇಳಿದ್ದಾರೆ. ಅಲ್ಲದೇ, ಜಸ್ಪ್ರೀತ್ ಬುಮ್ರಾ ಅವರ ಸಾಧನೆ ಬಗ್ಗೆ ತಮಗೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಓರ್ವ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್; ತಪ್ಪಿಗೆ ಕ್ಷಮೆ ಕೇಳಿದ ನಟ
Jasprit Bumrah, Ram Charan
ಮದನ್​ ಕುಮಾರ್​
|

Updated on: May 24, 2026 | 8:51 AM

Share

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರು ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾದ ಗ್ರ್ಯಾಂಡ್ ಮ್ಯೂಸಿಕ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ನಟಿ ಜಾನ್ವಿ ಕಪೂರ್ ಸೇರಿದಂತೆ ಚಿತ್ರತಂಡದ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ನಡೆದ ಲಘು ಸಂವಾದದಲ್ಲಿ ರಾಮ್ ಚರಣ್ ಅವರು ಭಾರತೀಯ ಕ್ರಿಕೆಟರ್​ಗಳ ಬಗ್ಗೆ ಮಾತನಾಡುವಾಗ ಒಂದು ತಪ್ಪು ಆಗಿದೆ. ಜಸ್ಪ್ರೀತ್ ಬುಮ್ರಾ (Jasprit Bumrah) ಅವರನ್ನು ಓರ್ವ ಫುಟ್​ಬಾಲ್ ಆಟಗಾರ ಎಂದು ರಾಮ್ ಚರಣ್ ಕರೆದಿದ್ದಾರೆ!

ವೇದಿಕೆಯಲ್ಲಿ ಭಾರತೀಯ ಕ್ರಿಕೆಟಿಗರನ್ನು ಕೆಲವು ಪದಗಳಲ್ಲಿ ಬಣ್ಣಿಸಲು ರಾಮ್ ಚರಣ್ ಅವರಿಗೆ ಹೇಳಲಾಯಿತು. ಈ ವೇಳೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವೃತ್ತಿಜೀವನವನ್ನು ‘ದೀರ್ಘಾವಧಿಯ ಲೆಂಜೆಂಡರಿ ಪಯಣ’ ಎಂದು ಕರೆದ ರಾಮ್ ಚರಣ್ ಅವರು, ಎಂ.ಎಸ್. ಧೋನಿ ಅವರನ್ನು ‘ಶಾಂತ ಮತ್ತು ಕೂಲ್’ ಎಂದು ಬಣ್ಣಿಸಿದರು. ಇನ್ನು, ರೋಹಿತ್ ಶರ್ಮಾ ಅವರನ್ನು ‘ಎಲ್ಲರ ನೆಚ್ಚಿನ ವ್ಯಕ್ತಿ’ ಎಂದ ಹೇಳಿದರು. ವಿರಾಟ್ ಕೊಹ್ಲಿ ಹೆಸರು ಬರುತ್ತಿದ್ದಂತೆ ‘ಬೆಂಕಿ’ ಎಂದು ಹೊಗಳಿಸಿದರು. ಆದರೆ ಬುಮ್ರಾ ಹೆಸರು ಬಂದಾಗ ತಪ್ಪು ಮಾಡಿದರು.

ಭಾರತದ ಖ್ಯಾತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಹೆಸರು ಬಂದಾಗ, ರಾಮ್ ಚರಣ್ ಅವರು ತಾವು ಬುಮ್ರಾ ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡರು. ಆದರೆ ತೀವ್ರ ಉತ್ಸಾಹದಲ್ಲಿ ಕ್ರಿಕೆಟ್ ಮತ್ತು ಫುಟ್‌ಬಾಲ್ ಕ್ರೀಡೆಯ ನಡುವೆ ಅವರು ಗೊಂದಲ ಮಾಡಿಕೊಂಡರು. ಬುಮ್ರಾ ಅವರನ್ನು ಫುಟ್‌ಬಾಲರ್ ಎಂದು ಕರೆದರು. ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ರಾಮ್ ಚರಣ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ತಪ್ಪಿಗಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ‘ಉಫ್… ನನಗೆ ಕೆಲವೊಮ್ಮೆ ಹೆಸರುಗಳನ್ನು ನೆನಪಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ, ಮರೆತುಹೋಗುತ್ತದೆ. ಜಸ್ಪ್ರೀತ್ ಬುಮ್ರಾ ಅವರಲ್ಲಿ ಈ ಗೊಂದಲಕ್ಕಾಗಿ ಕ್ಷಮೆ ಕೇಳುತ್ತೇನೆ. ಅಷ್ಟು ದೊಡ್ಡ ಜನಸಂದಣಿ ಮತ್ತು ಕಾರ್ಯಕ್ರಮದ ಉತ್ಸಾಹದ ನಡುವೆ ನಡೆದ ಸಹಜ ತಪ್ಪು ಇದು’ ಎಂದು ರಾಮ್ ಚರಣ್ ಬರೆದುಕೊಂಡಿದ್ದಾರೆ. ಅಲ್ಲದೆ ಬುಮ್ರಾ ಅವರ ಸಾಧನೆಗಳ ಬಗ್ಗೆ ತಮಗೆ ಅಪಾರ ಗೌರವವಿದ್ದು, ಅವರು ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡುತ್ತಿರುವುದನ್ನು ತಾವು ಸದಾ ಪ್ರಶಂಸಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಅವಧಿ 3 ಗಂಟೆ 9 ನಿಮಿಷ? ಹಲವು ಪದಗಳು ಮ್ಯೂಟ್

‘ಪೆದ್ದಿ’ ಸಿನಿಮಾದಲ್ಲಿ ಕ್ರೀಡೆಯ ಕುರಿತ ಕಥೆ ಇದೆ. ಕುಸ್ತಿ ಮತ್ತು ಕ್ರಿಕೆಟ್ ಆಟಗಾರನಾಗಿ ರಾಮ್ ಚರಣ್ ಅವರು ನಟಿಸಿದ್ದಾರೆ. ಆ ಕಾರಣದಿಂದಲೇ ‘ಪೆದ್ದಿ’ ಆಡಿಯೋ ರಿಲೀಸ್ ವೇದಿಕೆಯಲ್ಲಿ ಕ್ರಿಕೆಟ್ ಬಗ್ಗೆ ಅವರಿಗೆ ಪ್ರಶ್ನೆ ಕೇಳಲಾಗಿತ್ತು. ಈ ಸಿನಿಮಾ ಜೂನ್ 4ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More