‘ಪೆದ್ದಿ’ ನೋಡಿ ಹಾಡಿಹೊಗಳಿದ ಅಲ್ಲು ಅರ್ಜುನ್; ರಾಮ್ ಚರಣ್, ಜಾನ್ವಿಗೆ ವಿಶೇಷ ಪ್ರೀತಿ

ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ 300 ಕೋಟಿ ರೂ. ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ನಾಯಕಿ ಜಾನ್ವಿ ಕಪೂರ್ ಪಾತ್ರದ ಕುರಿತ ವಿವಾದಗಳ ನಡುವೆಯೂ, ಅಲ್ಲು ಅರ್ಜುನ್ ರಾಮ್ ಚರಣ್ ನಟನೆ ಹಾಗೂ ಜಾನ್ವಿ ಕಪೂರ್‌ಗೆ ಬೆಂಬಲ ಸೂಚಿಸಿದ್ದಾರೆ. ಚರಣ್ ಅವರ ರಗಡ್ ನಟನೆ ಮತ್ತು ಬುಚ್ಚಿ ಬಾಬು ಸನಾ ನಿರ್ದೇಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿವಾದಿತ ದೃಶ್ಯಗಳನ್ನು ತೆಗೆದುಹಾಕುವುದಾಗಿ ನಿರ್ದೇಶಕರು ಭರವಸೆ ನೀಡಿದ್ದಾರೆ.

‘ಪೆದ್ದಿ’ ನೋಡಿ ಹಾಡಿಹೊಗಳಿದ ಅಲ್ಲು ಅರ್ಜುನ್; ರಾಮ್ ಚರಣ್, ಜಾನ್ವಿಗೆ ವಿಶೇಷ ಪ್ರೀತಿ
Ram Charan

Updated on: Jun 09, 2026 | 1:12 PM

ತೆಲುಗು ನಟ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಆದರೆ, ನಾಯಕಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಇತ್ತೀಚಿನ ಸುದ್ದಿಗೋಷ್ಠಿಗಳಲ್ಲಿ ಸ್ವತಃ ಚಿತ್ರತಂಡ ಜಾನ್ವಿ ಹೆಸರನ್ನು ಪ್ರಸ್ತಾಪಿಸಲು ಹಿಂಜರಿಯುತ್ತಿದೆ. ಇಂತಹ ಮುಜುಗರದ ಸನ್ನಿವೇಶದ ನಡುವೆಯೇ, ಚರಣ್ ಅವರ ಸೋದರಸಂಬಂಧಿ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪೆದ್ದಿ’ ಚಿತ್ರವನ್ನು ವೀಕ್ಷಿಸಿ ಇಡೀ ಚಿತ್ರತಂಡವನ್ನು ಹೊಗಳಿದ್ದಾರೆ.

ಸೋಮವಾರ ರಾತ್ರಿ ಸಿನಿಮಾ ವೀಕ್ಷಿಸಿದ ಅಲ್ಲು ಅರ್ಜುನ್, ತಮ್ಮ ಟ್ವಿಟರ್ ಖಾತೆಯಲ್ಲಿ ಚಿತ್ರದ ಬಗ್ಗೆ ಪ್ರಶಂಸೆಯ ಮಹಾಪೂರವನ್ನೇ ಹರಿಸಿದ್ದಾರೆ. ‘ರಾಮ್ ಚರಣ್ ನಟನೆ ನನ್ನ ಮನಸ್ಸು ಗೆದ್ದಿದೆ. ಅತ್ಯಂತ ರಗಡ್ ಆದ ನಟನೆ, ಅದ್ಭುತವಾದ ಬಾಡಿ ಟ್ರಾನ್ಸ್‌ಫಾರ್ಮೇಷನ್ ಹಾಗೂ ಅವರ ಗ್ರೇಸ್‌ಫುಲ್ ಡ್ಯಾನ್ಸ್ ಮೂವ್ಸ್ ಅದ್ಭುತವಾಗಿವೆ. ಪ್ರತಿಯೊಂದು ಹಂತದಲ್ಲೂ ಚರಣ್ ಅಬ್ಬರಿಸಿದ್ದಾರೆ. ನನ್ನ ಸಹೋದರನ ಸಾಧನೆ ಕಂಡು ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅಲ್ಲು ಅರ್ಜುನ್ ಟ್ವೀಟ್

ಇದೇ ವೇಳೆ ವಿವಾದದ ಸುಳಿಗೆ ಸಿಲುಕಿರುವ ನಾಯಕಿ ಜಾನ್ವಿ ಕಪೂರ್ ಅವರಿಗೂ ಅಲ್ಲು ಅರ್ಜುನ್ ವಿಶೇಷವಾಗಿ ಬೆಂಬಲ ನೀಡಿದ್ದಾರೆ. ‘ಚಿತ್ರದ ನಾಯಕಿ ಜಾನ್ವಿ ಕಪೂರ್ ಅವರಿಗೆ ನನ್ನ ಪ್ರೀತಿ. ಜಗಪತಿ ಬಾಬು ಸೇರಿದಂತೆ ಚಿತ್ರದ ಉಳಿದ ಕಲಾವಿದರು ಹಾಗೂ ತಂತ್ರಜ್ಞರ ಕೆಲಸ ಅದ್ಭುತವಾಗಿದೆ. ರಾಮ್ ಚರಣ್ ಅವರನ್ನು ಇಷ್ಟು ಎತ್ತರಕ್ಕೆ ಬಿಂಬಿಸಿದ ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್?

300 ಕೋಟಿ ಕ್ಲಬ್ ಸೇರಿದ ‘ಪೆದ್ದಿ’:

ಚಿತ್ರದಲ್ಲಿ ಮಹಿಳಾ ಪಾತ್ರವನ್ನು ವಸ್ತುವಿನಂತೆ ಬಿಂಬಿಸಲಾಗಿದೆ ಎಂಬ ವಿವಾದದ ಬೆನ್ನಲ್ಲೇ, ನಿರ್ದೇಶಕ ಬುಚ್ಚಿ ಬಾಬು ಈಗಾಗಲೇ ಪ್ರೇಕ್ಷಕರ ಕ್ಷಮೆ ಕೇಳಿದ್ದು, ವಿವಾದಿತ ದೃಶ್ಯಗಳನ್ನು ಕತ್ತರಿಸುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಪರ-ವಿರೋಧದ ಚರ್ಚೆಗಳ ನಡುವೆಯೂ ‘ಪೆದ್ದಿ’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 300 ಕೋಟಿ ರೂಪಾಯಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮುಖ್ಯವಾಗಿ ತೆಲುಗು ರಾಜ್ಯಗಳಲ್ಲಿ ಚಿತ್ರಕ್ಕೆ ಅಭೂತಪೂರ್ವ ರೆಸ್ಪಾನ್ಸ್ ಸಿಗುತ್ತಿದ್ದು, ಹಿಂದಿ, ತಮಿಳು ಹಾಗೂ ಕನ್ನಡ ಆವೃತ್ತಿಗಳಲ್ಲಿ ಸಾಧಾರಣ ಪ್ರದರ್ಶನ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Tue, 9 June 26

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us