AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ

ಸೋನು ಸೂದ್​ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ.

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ
ಸೋನು ಸೂದ್​ - ಕಾಲಿಗೆ ಬಿದ್ದು ನಮಸ್ಕರಿಸಲು ಬಂದ ಜನ
ಮದನ್​ ಕುಮಾರ್​
|

Updated on: May 24, 2021 | 9:32 AM

Share

ನಟ ಸೋನು ಸೂದ್​ ಮಾಡುತ್ತಿರುವ ಕೆಲಸಗಳಿಗೆ ಬೆಲೆ ಕಟ್ಟಲಾಗದು. ಕಳೆದ ವರ್ಷ ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಅವರು ಜನರ ಸೇವೆಯಲ್ಲಿ ನಿರತರಾಗಿದ್ದಾರೆ. ದೇಶದಲ್ಲಿ ಕೊವಿಡ್​ 2ನೇ ಅಲೆ ಜೋರಾದ ನಂತರವಂತೂ ಈ ರಿಯಲ್ ಹೀರೋ ಸಮಾಜಮುಖಿ ಕಾರ್ಯಗಳು ಹೆಚ್ಚಾಗಿವೆ. ಅನೇಕರಿಗೆ ಅವರು ಆಸ್ಪತ್ರೆ ಬೆಡ್​ ವ್ಯವಸ್ಥೆ ಮಾಡಿಸಿದ್ದಾರೆ. ಆಕ್ಸಿಜನ್​ ಸಿಲಿಂಡರ್​ಗಳು ದೊರೆಯುವಂತೆ ಮಾಡಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲದವರಿಗೆ ಆರ್ಥಿಕ ನೆರವು ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಪ್ರತಿದಿನ ಸಾವಿರಾರು ಜನರು ಸೋನು ಸೂದ್​ ಬಳಿ ಸಹಾಯಕ್ಕಾಗಿ ಕೈ ಚಾಚುತ್ತಾರೆ. ಅಲ್ಲದೆ, ಕೆಲವರು ಮನೆ ಎದುರು ಹೋಗಿ ಮನವಿ ಮಾಡಿಕೊಳ್ಳುತ್ತಾರೆ.

ಸೋನು ಸೂದ್​ ಬಳಿ ಕಷ್ಟ ಹೇಳಿಕೊಂಡರೆ ಅದಕ್ಕೆ ಖಂಡಿತ ಪರಿಹಾರ ಸಿಗುತ್ತದೆ ಎಂಬ ಭರವಸೆ ಜನರಲ್ಲಿ ಮೂಡಿದೆ. ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ಅವರನ್ನು ಜನರು ದೇವರ ರೀತಿ ನೋಡುತ್ತಾರೆ. ತಮಗೆ ಜನಿಸಿದ ಮಕ್ಕಳಿಗೆ ಸೋನು ಸೂದ್​ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದವರೂ ಇದ್ದಾರೆ.

ಮುಂಬೈನಲ್ಲಿರುವ ಸೋನು ಸೂದ್​ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ. ವಯಸ್ಸಿನಲ್ಲಿ ಹಿರಿಯರಾದವರು ಕೂಡ ಭಾವುಕರಾಗಿ ಸೋನು ಪಾದ ಮುಟ್ಟಿ ನಮಸ್ಕರಿಸಲು ಬಂದಿದ್ದಾರೆ. ಆದರೆ ಅದಕ್ಕೆ ಸೋನು ಅವಕಾಶ ನೀಡಿಲ್ಲ. ವಿನಯವಂತಿಕೆಯಿಂದ ಹಿಂದೆ ಸರಿದು, ಎಲ್ಲರಿಗೂ ಕೈ ಮುಗಿದಿದ್ದಾರೆ ರಿಯಲ್​ ಹೀರೋ.

ಒಂದೆಡೆ ಸೋನು ಸೂದ್​ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಇನ್ನೊಂದೆಡೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಕೂಡ ಏರಿಕೆ ಆಗುತ್ತಿದೆ. ಸೋನು ಸೂದ್​ ಹೆಸರಿನಲ್ಲಿ ಹಣ ಮಾಡಲು ಕೂಡ ಕೆಲವು ಕಿಡಿಗೇಡಿಗಳು ಮುಂದಾಗಿದ್ದಾರೆ. ಸೋನು ಸೂದ್​ ಫೌಂಡೇಶನ್​ಗೆ ಹಣ ದೇಣಿಗೆ ನೀಡಿ ಎಂದು ನಕಲಿ ಗೂಗಲ್​ ಪೇ ನಂಬರ್​ ಇರುವ ಪೋಸ್ಟರ್​ಗಳು ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಹರಿದಾಡಿದ್ದವು. ಅವುಗಳ ಸ್ಕ್ರೀನ್​ ಶಾಟ್​ ಹಂಚಿಕೊಂಡ ಸೋನು ಸೂದ್​, ಇದೆಲ್ಲವೂ ಫೇಕ್​ ಎಂಬುದನ್ನು ಸ್ಪಷ್ಟಪಡಿಸಿದ್ದರು. ಈ ವಿಚಾರದಲ್ಲಿ ಜನರು ಜಾಗರೂಕತೆ ವಹಿಸಲೇಬೇಕು.

ಇದನ್ನೂ ಓದಿ:

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು