AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ

ಸೋನು ಸೂದ್​ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ.

Sonu Sood: ಸೋನು ಸೂದ್​ ಕಾಲಿಗೆ ಬೀಳಲು ಮುಂದಾದ ಜನ; ಕೈ ಮುಗಿದು ದೊಡ್ಡವರಾದ ರಿಯಲ್​ ಹೀರೋ
ಸೋನು ಸೂದ್​ - ಕಾಲಿಗೆ ಬಿದ್ದು ನಮಸ್ಕರಿಸಲು ಬಂದ ಜನ
ಮದನ್​ ಕುಮಾರ್​
|

Updated on: May 24, 2021 | 9:32 AM

Share

ನಟ ಸೋನು ಸೂದ್​ ಮಾಡುತ್ತಿರುವ ಕೆಲಸಗಳಿಗೆ ಬೆಲೆ ಕಟ್ಟಲಾಗದು. ಕಳೆದ ವರ್ಷ ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಅವರು ಜನರ ಸೇವೆಯಲ್ಲಿ ನಿರತರಾಗಿದ್ದಾರೆ. ದೇಶದಲ್ಲಿ ಕೊವಿಡ್​ 2ನೇ ಅಲೆ ಜೋರಾದ ನಂತರವಂತೂ ಈ ರಿಯಲ್ ಹೀರೋ ಸಮಾಜಮುಖಿ ಕಾರ್ಯಗಳು ಹೆಚ್ಚಾಗಿವೆ. ಅನೇಕರಿಗೆ ಅವರು ಆಸ್ಪತ್ರೆ ಬೆಡ್​ ವ್ಯವಸ್ಥೆ ಮಾಡಿಸಿದ್ದಾರೆ. ಆಕ್ಸಿಜನ್​ ಸಿಲಿಂಡರ್​ಗಳು ದೊರೆಯುವಂತೆ ಮಾಡಿದ್ದಾರೆ. ಚಿಕಿತ್ಸೆಗೆ ಹಣ ಇಲ್ಲದವರಿಗೆ ಆರ್ಥಿಕ ನೆರವು ನೀಡಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಪ್ರತಿದಿನ ಸಾವಿರಾರು ಜನರು ಸೋನು ಸೂದ್​ ಬಳಿ ಸಹಾಯಕ್ಕಾಗಿ ಕೈ ಚಾಚುತ್ತಾರೆ. ಅಲ್ಲದೆ, ಕೆಲವರು ಮನೆ ಎದುರು ಹೋಗಿ ಮನವಿ ಮಾಡಿಕೊಳ್ಳುತ್ತಾರೆ.

ಸೋನು ಸೂದ್​ ಬಳಿ ಕಷ್ಟ ಹೇಳಿಕೊಂಡರೆ ಅದಕ್ಕೆ ಖಂಡಿತ ಪರಿಹಾರ ಸಿಗುತ್ತದೆ ಎಂಬ ಭರವಸೆ ಜನರಲ್ಲಿ ಮೂಡಿದೆ. ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ಅವರನ್ನು ಜನರು ದೇವರ ರೀತಿ ನೋಡುತ್ತಾರೆ. ತಮಗೆ ಜನಿಸಿದ ಮಕ್ಕಳಿಗೆ ಸೋನು ಸೂದ್​ ಎಂದು ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದವರೂ ಇದ್ದಾರೆ.

ಮುಂಬೈನಲ್ಲಿರುವ ಸೋನು ಸೂದ್​ ಮನೆಯ ಎದುರು ಇತ್ತೀಚೆಗೆ ಕೆಲವರು ಬಂದು ಸಹಾಯ ಕೇಳಿದ್ದಾರೆ. ತಮ್ಮ ಕಷ್ಟಕ್ಕೆ ಸ್ಪಂದಿಸಿದ ನಟನ ಕಾಲಿಗೆ ಬೀಳಲು ಅವರೆಲ್ಲ ಮುಂದಾಗಿದ್ದಾರೆ. ವಯಸ್ಸಿನಲ್ಲಿ ಹಿರಿಯರಾದವರು ಕೂಡ ಭಾವುಕರಾಗಿ ಸೋನು ಪಾದ ಮುಟ್ಟಿ ನಮಸ್ಕರಿಸಲು ಬಂದಿದ್ದಾರೆ. ಆದರೆ ಅದಕ್ಕೆ ಸೋನು ಅವಕಾಶ ನೀಡಿಲ್ಲ. ವಿನಯವಂತಿಕೆಯಿಂದ ಹಿಂದೆ ಸರಿದು, ಎಲ್ಲರಿಗೂ ಕೈ ಮುಗಿದಿದ್ದಾರೆ ರಿಯಲ್​ ಹೀರೋ.

ಒಂದೆಡೆ ಸೋನು ಸೂದ್​ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಇನ್ನೊಂದೆಡೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಕೂಡ ಏರಿಕೆ ಆಗುತ್ತಿದೆ. ಸೋನು ಸೂದ್​ ಹೆಸರಿನಲ್ಲಿ ಹಣ ಮಾಡಲು ಕೂಡ ಕೆಲವು ಕಿಡಿಗೇಡಿಗಳು ಮುಂದಾಗಿದ್ದಾರೆ. ಸೋನು ಸೂದ್​ ಫೌಂಡೇಶನ್​ಗೆ ಹಣ ದೇಣಿಗೆ ನೀಡಿ ಎಂದು ನಕಲಿ ಗೂಗಲ್​ ಪೇ ನಂಬರ್​ ಇರುವ ಪೋಸ್ಟರ್​ಗಳು ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಹರಿದಾಡಿದ್ದವು. ಅವುಗಳ ಸ್ಕ್ರೀನ್​ ಶಾಟ್​ ಹಂಚಿಕೊಂಡ ಸೋನು ಸೂದ್​, ಇದೆಲ್ಲವೂ ಫೇಕ್​ ಎಂಬುದನ್ನು ಸ್ಪಷ್ಟಪಡಿಸಿದ್ದರು. ಈ ವಿಚಾರದಲ್ಲಿ ಜನರು ಜಾಗರೂಕತೆ ವಹಿಸಲೇಬೇಕು.

ಇದನ್ನೂ ಓದಿ:

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ