AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ
ಆಸಿಫ್​ ಬಸ್ರಾ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 5:24 PM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ. ಇದನ್ನು ನೋಡಿದವರೆಲ್ಲರೂ ಅದ್ಭುತವಾಗಿದೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಆಪ್ತಸಮಾಲೋಚಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಸಿಫ್​ ಬಸ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೆಬ್​ ಸೀರಿಸ್​ ನೋಡಿದ ಅನೇಕರು ಅವರನ್ನು ನೆನಪಿಸಿಕೊಂಡಿದ್ದಾರೆ.

ವೆಬ್​ ಸೀರಿಸ್​ನ ಮುಖ್ಯ ಪಾತ್ರಗಳಾದ ಶ್ರೀಕಾಂತ್​ ಮತ್ತು ಸುಚಿತ್ರಾ ಇಬ್ಬರಿಗೂ ಕೌನ್ಸಿಲರ್​ ಆಗಿ ಕಾಣಿಸಿಕೊಂಡಿದ್ದು ಇದೇ ಆಸಿಫ್​ ಬಸ್ರಾ. ಸುಚಿತ್ರಾ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಕೌನ್ಸಿಲ್​ ಮಾಡುವ ಕೆಲಸವನ್ನು ಆಸಿಫ್​ ಮಾಡುತ್ತಾರೆ. ತೆರೆಮೇಲೆ ಕೌನ್ಸಿಲರ್​ ಆಗಿ ಬುದ್ಧಿವಾದ ಹೇಳಿದ್ದ ಅವರು ನಿಜಜೀವನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಪಾತ್ರ ಮೆಚ್ಚಿಕೊಂಡಿರುವ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ.

ದಿ ಫ್ಯಾಮಿಲಿ ಮ್ಯಾನ್​ 2 ಅದ್ಭುತ ಯಶಸ್ಸು ಕಂಡಿದೆ. ಆದರೆ, ಇದನ್ನು ನೋಡೋಕೆ ಆಸಿಫ್ ಅವರೇ ಇಲ್ಲವಲ್ಲ ಎಂದು ಕೆಲವರು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಒಂದು ಅದ್ಭುತ ನಟನನ್ನು ನಾವು ಕಳೆದುಕೊಂಡೆವು ಎಂದು ವೆಬ್​ ಸೀರಿಸ್​ ನೋಡಿದಮೇಲೆ ನಮಗನ್ನಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು