AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ
ಆಸಿಫ್​ ಬಸ್ರಾ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 5:24 PM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ. ಇದನ್ನು ನೋಡಿದವರೆಲ್ಲರೂ ಅದ್ಭುತವಾಗಿದೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಆಪ್ತಸಮಾಲೋಚಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಸಿಫ್​ ಬಸ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೆಬ್​ ಸೀರಿಸ್​ ನೋಡಿದ ಅನೇಕರು ಅವರನ್ನು ನೆನಪಿಸಿಕೊಂಡಿದ್ದಾರೆ.

ವೆಬ್​ ಸೀರಿಸ್​ನ ಮುಖ್ಯ ಪಾತ್ರಗಳಾದ ಶ್ರೀಕಾಂತ್​ ಮತ್ತು ಸುಚಿತ್ರಾ ಇಬ್ಬರಿಗೂ ಕೌನ್ಸಿಲರ್​ ಆಗಿ ಕಾಣಿಸಿಕೊಂಡಿದ್ದು ಇದೇ ಆಸಿಫ್​ ಬಸ್ರಾ. ಸುಚಿತ್ರಾ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಕೌನ್ಸಿಲ್​ ಮಾಡುವ ಕೆಲಸವನ್ನು ಆಸಿಫ್​ ಮಾಡುತ್ತಾರೆ. ತೆರೆಮೇಲೆ ಕೌನ್ಸಿಲರ್​ ಆಗಿ ಬುದ್ಧಿವಾದ ಹೇಳಿದ್ದ ಅವರು ನಿಜಜೀವನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಪಾತ್ರ ಮೆಚ್ಚಿಕೊಂಡಿರುವ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ.

ದಿ ಫ್ಯಾಮಿಲಿ ಮ್ಯಾನ್​ 2 ಅದ್ಭುತ ಯಶಸ್ಸು ಕಂಡಿದೆ. ಆದರೆ, ಇದನ್ನು ನೋಡೋಕೆ ಆಸಿಫ್ ಅವರೇ ಇಲ್ಲವಲ್ಲ ಎಂದು ಕೆಲವರು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಒಂದು ಅದ್ಭುತ ನಟನನ್ನು ನಾವು ಕಳೆದುಕೊಂಡೆವು ಎಂದು ವೆಬ್​ ಸೀರಿಸ್​ ನೋಡಿದಮೇಲೆ ನಮಗನ್ನಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!