Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

The Kerala Story Movie: ‘ನಾನು ಯಾವುದೇ ಸಿನಿಮಾ ಬ್ಯಾನ್ ಮಾಡಲು ಬಯಸಲ್ಲ. ಚಿತ್ರವನ್ನು ಮತ್ತು ಚಿತ್ರದ ಉದ್ದೇಶ ಏನು ಎಂಬುದನ್ನು ಜನರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ ಕಮಲ್ ಹಾಸನ್.  

‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್
ಅದಾ ಶರ್ಮಾ-ಕಮಲ್ ಹಾಸನ್
Follow us
ರಾಜೇಶ್ ದುಗ್ಗುಮನೆ
|

Updated on: Jun 03, 2023 | 10:32 AM

ಕಮಲ್ ಹಾಸನ್ (Kamal Haasan) ಅವರು ಚಿತ್ರರಂಗದಲ್ಲಿ ನಡೆಯುವ ಅನೇಕ ಆಗುಹೋಗುಗಳ ಬಗ್ಗೆ ಮಾತನಾಡುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story Movie) ಬಗ್ಗೆ ಅಪಸ್ವರ ತೆಗೆದಿದ್ದರು. ಈ ಬಾರಿ ಅವರು ಮತ್ತೆ ಅದೇ ವಿಚಾರ ಹೇಳಿದ್ದಾರೆ. ಆದರೆ, ಹೇಳುವ ವಿಧಾನ ಬದಲಿಸಿದ್ದಾರೆ. ‘ಎಲ್ಲರೂ ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ನೋಡಬೇಕು’ ಎಂದು ಹೇಳಿದ್ದಾರೆ. ಅವರು ಈ ರೀತಿ ಹೇಳುವುದಕ್ಕೂ ಒಂದು ಕಾರಣ ಇದೆ. ಅವರು ಯಾವ ಅರ್ಥದಲ್ಲಿ ಇದನ್ನು ಹೇಳಿದ್ದಾರೆ ಎಂಬುದಕ್ಕೆ ಈ ಸ್ಟೋರಿಯಲ್ಲಿದೆ ಉತ್ತರ.

‘ಇಂಡಿಯಾ ಟುಡೇ ಕಾನ್​​ಕ್ಲೇವ್ ಸೌತ್ 2023’ನಲ್ಲಿ ಭಾಗಿ ಆಗಿ ಕಮಲ್ ಹಾಸನ್ ಮಾತನಾಡಿದ್ದಾರೆ. ‘ನಾನು ಯಾವುದೇ ಸಿನಿಮಾ ಬ್ಯಾನ್ ಮಾಡಲು ಬಯಸಲ್ಲ. ಚಿತ್ರವನ್ನು ಮತ್ತು ಚಿತ್ರದ ಉದ್ದೇಶ ಏನು ಎಂಬುದನ್ನು ಜನರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ ಕಮಲ್ ಹಾಸನ್.

‘ವಿಶ್ವರೂಪಂ ಸಿನಿಮಾ ತಮಿಳುನಾಡಿನಲ್ಲಿ ಬ್ಯಾನ್ ಆಯಿತು. ಇದನ್ನು ಏಕೆ ನಿಷೇಧಿಸಲಾಯಿತು ಎಂಬ ಬಗ್ಗೆ ಜನರಿಗೆ ಇನ್ನೂ ತಿಳಿದಿಲ್ಲ. ಆ ಬಳಿಕ ರಾಜ್ ಕಮಲ್ ಫಿಲ್ಮ್ಸ್​ ಮತ್ತು ತಮಿಳುನಾಡು ಸರ್ಕಾರದ ನಡುವೆ ಕಾನೂನಾತ್ಮಕ ಹೋರಾಟ ಆಯಿತು. ನಾವು ಪ್ರಕರಣವನ್ನು ಗೆದ್ದು ತಮಿಳುನಾಡಿನಲ್ಲಿ ಸಿನಿಮಾ ಬಿಡುಗಡೆ ಮಾಡಿದೆವು. ನಾನು ಯಾವುದೇ ಸಿನಿಮಾನ ನಿಷೇಧಿಸಬೇಕು ಎಂದು ಪ್ರತಿಪಾದಿಸುವುದಿಲ್ಲ’ ಎಂದಿದ್ದಾರೆ ಅವರು.

‘ದಿ ಕೇರಳ ಸ್ಟೋರಿ’ ಚಿತ್ರವನ್ನು ಅವರು ನೋಡುವಂತೆ ಜನರ ಬಳಿ ಕೇಳಿದ್ದಾರೆ. ‘ನಮ್ಮ ದೇಶದಲ್ಲಿ ಯಾರು ಬೇಕಾದರೂ ಮುಕ್ತವಾಗಿ ಮಾತನಾಡಬಹುದು. ದಿ ಕೇರಳ ಸ್ಟೋರಿ ಅಂಥ ಚಿತ್ರಗಳನ್ನು ಜನರು ಸತ್ಯ ಎಂದು ಭಾವಿಸಿ ಹೋಗಿ ವೀಕ್ಷಿಸಬಾರದು. ಈ ರೀತಿಯ ಚಿತ್ರಗಳನ್ನು ಜನರು ನೋಡಬೇಕು ಮತ್ತು ಆ ಬಳಿಕ ಆಲೋಚಿಸಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ

‘ದಿ ಕೇರಳ ಸ್ಟೋರಿ’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರದ ಕುರಿತು ಈ ಸಿನಿಮಾ ಇದೆ. ಆರಂಭದಲ್ಲಿ ಈ ಚಿತ್ರ 32 ಸಾವಿರ ಜನರ ಕಥೆ ಎಂದು ನಿರ್ದೇಶಕ ಸುದಿಪ್ತೋ ಸೇನ್ ಹೇಳಿದ್ದರು. ಕೇಸ್ ದಾಖಲಾದ ಬಳಿಕ ಇದನ್ನು 3 ಎಂದು ಬದಲಾಯಿಸಿದ್ದರು. ಅದಾ ಶರ್ಮಾ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ ಇದನ್ನೂ ಓದಿ:

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!