ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಕದ್ದು ತಂದ ಮೊಸರನ್ನು ‘ವಲಿಮೈ’ ನಿರ್ಮಾಪಕ ಬೋನಿ ಕಪೂರ್​ ಅವರ ಕಾರಿನ ಮೇಲೆ ಸುರಿಯಲಾಗಿದೆ. ಅಜಿತ್​ ಅಭಿಮಾನಿಗಳು ಈ ಎಡವಟ್ಟು ಮಾಡಿದ್ದಾರೆ.

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ
ಬೋನಿ ಕಪೂರ್​ ಕಾರು, ಅಜಿತ್​ ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Feb 25, 2022 | 10:09 AM

ದಕ್ಷಿಣ ಭಾರತದಲ್ಲಿ ಅಭಿಮಾನಿಗಳು ಸ್ಟಾರ್​ ನಟರನ್ನು ಯಾವ ರೀತಿ ಆರಾಧಿಸುತ್ತಾರೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿಲ್ಲ. ಯಾವುದೇ ಸ್ಟಾರ್​ ನಟನ ಸಿನಿಮಾ ರಿಲೀಸ್​ ಆದರೂ ಚಿತ್ರಮಂದಿರದ ಮುಂದೆ ಫ್ಯಾನ್ಸ್​ ಹಬ್ಬ ಮಾಡುತ್ತಾರೆ. ಹೀರೋ ಕಟೌಟ್​ಗೆ ಹಾಲಿನ ಅಭಿಷೇಕ ಮಾಡುತ್ತಾರೆ. ಆದರೆ ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ ಮಾಡಿದ್ದರ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಈಗ ಅದೂ ಕೂಡ ನಡೆದುಹೋಗಿದೆ. ಹೌದು, ಕಾಲಿವುಡ್​ ಖ್ಯಾತ ನಟ ಅಜಿತ್​ ಕುಮಾರ್ (Ajith Kumar)​ ಅವರ ಅಭಿಮಾನಿಗಳು ಇಂಥ ಕೆಲಸ ಮಾಡಿದ್ದಾರೆ. ಈ ಸಿನಿಮಾಗೆ ಬಾಲಿವುಡ್​ನ ಜನಪ್ರಿಯ ನಿರ್ಮಾಪಕ ಬೋನಿ ಕಪೂರ್​ ಅವರು ಬಂಡವಾಳ ಹೂಡಿದ್ದಾರೆ. ಗುರುವಾರ (ಫೆ.24) ‘ವಲಿಮೈ’ (Valimai Movie) ಸಿನಿಮಾ ಬಿಡುಗಡೆ ಆಗಿದೆ. ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿದುಕೊಳ್ಳಲು ಚಿತ್ರಮಂದಿರಕ್ಕೆ ಬಂದಿದ್ದ ಬೋನಿ ಕಪೂರ್​ (Boney Kapoor) ಅವರ ಕಾರಿನ ಮೇಲೆ ಅಭಿಮಾನಿಗಳು ಮೊಸರಿನ ಅಭಿಷೇಕ ಮಾಡಿದ್ದಾರೆ. ಇದರಿಂದ ಐಷಾರಾಮಿ ಕಾರಿನ ಸ್ಥಿತಿ ಕುಲಗೆಟ್ಟು ಹೋಗಿದೆ. ಸದ್ಯ ಅದರ ವಿಡಿಯೋ ವೈರಲ್​ ಆಗುತ್ತಿದೆ. ಇನ್ನೂ ಎಡವಟ್ಟಿನ ಸಂಗತಿ ಏನೆಂದರೆ, ಈ ಮೊಸರನ್ನು ಅಭಿಮಾನಿಗಳು ಯಾವುದೋ ಅಂಗಡಿಯಿಂದ ಕದ್ದು ತಂದಿದ್ದು ಎಂಬ ಮಾಹಿತಿ ಕೂಡ ಕೇಳಿಬಂದಿದೆ!

ಬಹಳ ತಿಂಗಳಿಂದಲೂ ‘ವಲಿಮೈ’ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಪದೇಪದೇ ರಿಲೀಸ್​ ಡೇಟ್​ ಬದಲಾಗುತ್ತಲೇ ಇತ್ತು. ಕೊನೆಗೂ ಫೆ.24ರಂದು ಸಿನಿಮಾ ಬಿಡುಗಡೆ ಆಯಿತು. ಸ್ಟಾರ್​ ನಟರ ಸಿನಿಮಾಗಳು ಬಿಡುಗಡೆ ಆದಾಗ ಅವರ ಕಟೌಟ್​ಗಳಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಾರೆ. ಅಜಿತ್​ ಫ್ಯಾನ್ಸ್​ ಕೂಡ ಅದೇ ಪ್ಲ್ಯಾನ್​ ಹಾಕಿಕೊಂಡಿದ್ದರು. ಆದರೆ ದುಡ್ಡು ಕೊಟ್ಟು ಹಾಲು ಖರೀದಿಸುವ ಬದಲು ಯಾವುದೋ ಅಂಗಡಿಯಲ್ಲಿ ಕಳ್ಳತನ ಮಾಡಿ ತಂದಿದ್ದಾರೆ. ನಗೆಪಾಟಲಿನ ಸಂಗತಿ ಏನೆಂದರೆ, ಚಿತ್ರಮಂದಿರದ ಬಳಿ ಬಂದು ಹಾಲಿನ ಪಾಕೆಟ್​ ಓಪನ್​ ಮಾಡಿದಾಗಲೇ ಒಂದು ಎಡವಟ್ಟು ಆಗಿರುವುದು ಅಭಿಮಾನಿಗಳ ಗಮನಕ್ಕೆ ಬಂತು. ಹಾಲಿನ ಬದಲಾಗಿ ಅವರು ಮೊಸರಿನ ಪಾಕೆಟ್​ಗಳನ್ನು ಕದ್ದು ತಂದಿದ್ದರು!

ಕದ್ದು ತಂದ ಮೊಸರನ್ನು ನಿರ್ಮಾಪಕ ಬೋನಿ ಕಪೂರ್​ ಅವರ ಕಾರಿನ ಮೇಲೆ ಸುರಿಯಲಾಗಿದೆ. ಇದರ ಜೊತೆಗೆ ಒಂದು ಭಯಾನಕ ಘಟನೆ ಕೂಡ ನಡೆದಿದೆ. ಕೊಯಂಬತ್ತೂರಿನಲ್ಲಿ ಅಜಿತ್​ ಅಭಿಮಾನಿಗಳು ‘ವಲಿಮೈ’ ಸಿನಿಮಾವನ್ನು ನೋಡಲು ಫೆ.24ರ ಮುಂಜಾನೆಯೇ ಚಿತ್ರಮಂದಿರದ ಬಳಿ ಜಮಾಯಿಸಿದ್ದರು. ಆ ಸಂದರ್ಭದಲ್ಲಿ ಅವರ ಮೇಲೆ ಯಾರೋ ಕಿಡಿಗೇಡಿಗಳು ಪೆಟ್ರೋಲ್​ ಬಾಂಬ್​ ಎಸೆದಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗುರುವಾರ ಬಿಡುಗಡೆ ಆಗಿರುವ ‘ವಲಿಮೈ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್​ ನಟಿಸಿದ್ದಾರೆ. ಹುಮಾ ಖುರೇಶಿ, ಕಾರ್ತಿಕೇಯ ಮುಂತಾದವರು ಕೂಡ ಅಭಿನಯಿಸಿದ್ದಾರೆ. ಎಚ್​. ವಿನೋದ್​ ಅವರು ನಿರ್ದೇಶನ ಮಾಡಿದ್ದು, ಹಾಡುಗಳಿಗೆ ಯುವನ್​ ಶಂಕರ್​ ರಾಜಾ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳನ್ನು ಫ್ಯಾನ್ಸ್​ ಇಷ್ಪಟ್ಟಿದ್ದಾರೆ.

ಇದನ್ನೂ ಓದಿ:

ಬ್ರೇಕಪ್​ಗಳ ರಾಜ ರಣಬೀರ್​ ಜತೆ ಆಲಿಯಾ ಮದುವೆ ಆಗ್ತಿರೋದು ಯಾಕೆ? ಕೊನೆಗೂ ಬಯಲಾಯ್ತು ಸತ್ಯ

‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?