AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ

ಕದ್ದು ತಂದ ಮೊಸರನ್ನು ‘ವಲಿಮೈ’ ನಿರ್ಮಾಪಕ ಬೋನಿ ಕಪೂರ್​ ಅವರ ಕಾರಿನ ಮೇಲೆ ಸುರಿಯಲಾಗಿದೆ. ಅಜಿತ್​ ಅಭಿಮಾನಿಗಳು ಈ ಎಡವಟ್ಟು ಮಾಡಿದ್ದಾರೆ.

ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ; ಅಜಿತ್ ಫ್ಯಾನ್ಸ್​ ಮೇಲೆ ಪೆಟ್ರೋಲ್​ ಬಾಂಬ್​​ ಎಸೆತ
ಬೋನಿ ಕಪೂರ್​ ಕಾರು, ಅಜಿತ್​ ಕುಮಾರ್​
TV9 Web
| Edited By: |

Updated on: Feb 25, 2022 | 10:09 AM

Share

ದಕ್ಷಿಣ ಭಾರತದಲ್ಲಿ ಅಭಿಮಾನಿಗಳು ಸ್ಟಾರ್​ ನಟರನ್ನು ಯಾವ ರೀತಿ ಆರಾಧಿಸುತ್ತಾರೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿಲ್ಲ. ಯಾವುದೇ ಸ್ಟಾರ್​ ನಟನ ಸಿನಿಮಾ ರಿಲೀಸ್​ ಆದರೂ ಚಿತ್ರಮಂದಿರದ ಮುಂದೆ ಫ್ಯಾನ್ಸ್​ ಹಬ್ಬ ಮಾಡುತ್ತಾರೆ. ಹೀರೋ ಕಟೌಟ್​ಗೆ ಹಾಲಿನ ಅಭಿಷೇಕ ಮಾಡುತ್ತಾರೆ. ಆದರೆ ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ ಮಾಡಿದ್ದರ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಈಗ ಅದೂ ಕೂಡ ನಡೆದುಹೋಗಿದೆ. ಹೌದು, ಕಾಲಿವುಡ್​ ಖ್ಯಾತ ನಟ ಅಜಿತ್​ ಕುಮಾರ್ (Ajith Kumar)​ ಅವರ ಅಭಿಮಾನಿಗಳು ಇಂಥ ಕೆಲಸ ಮಾಡಿದ್ದಾರೆ. ಈ ಸಿನಿಮಾಗೆ ಬಾಲಿವುಡ್​ನ ಜನಪ್ರಿಯ ನಿರ್ಮಾಪಕ ಬೋನಿ ಕಪೂರ್​ ಅವರು ಬಂಡವಾಳ ಹೂಡಿದ್ದಾರೆ. ಗುರುವಾರ (ಫೆ.24) ‘ವಲಿಮೈ’ (Valimai Movie) ಸಿನಿಮಾ ಬಿಡುಗಡೆ ಆಗಿದೆ. ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿದುಕೊಳ್ಳಲು ಚಿತ್ರಮಂದಿರಕ್ಕೆ ಬಂದಿದ್ದ ಬೋನಿ ಕಪೂರ್​ (Boney Kapoor) ಅವರ ಕಾರಿನ ಮೇಲೆ ಅಭಿಮಾನಿಗಳು ಮೊಸರಿನ ಅಭಿಷೇಕ ಮಾಡಿದ್ದಾರೆ. ಇದರಿಂದ ಐಷಾರಾಮಿ ಕಾರಿನ ಸ್ಥಿತಿ ಕುಲಗೆಟ್ಟು ಹೋಗಿದೆ. ಸದ್ಯ ಅದರ ವಿಡಿಯೋ ವೈರಲ್​ ಆಗುತ್ತಿದೆ. ಇನ್ನೂ ಎಡವಟ್ಟಿನ ಸಂಗತಿ ಏನೆಂದರೆ, ಈ ಮೊಸರನ್ನು ಅಭಿಮಾನಿಗಳು ಯಾವುದೋ ಅಂಗಡಿಯಿಂದ ಕದ್ದು ತಂದಿದ್ದು ಎಂಬ ಮಾಹಿತಿ ಕೂಡ ಕೇಳಿಬಂದಿದೆ!

ಬಹಳ ತಿಂಗಳಿಂದಲೂ ‘ವಲಿಮೈ’ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಪದೇಪದೇ ರಿಲೀಸ್​ ಡೇಟ್​ ಬದಲಾಗುತ್ತಲೇ ಇತ್ತು. ಕೊನೆಗೂ ಫೆ.24ರಂದು ಸಿನಿಮಾ ಬಿಡುಗಡೆ ಆಯಿತು. ಸ್ಟಾರ್​ ನಟರ ಸಿನಿಮಾಗಳು ಬಿಡುಗಡೆ ಆದಾಗ ಅವರ ಕಟೌಟ್​ಗಳಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಾರೆ. ಅಜಿತ್​ ಫ್ಯಾನ್ಸ್​ ಕೂಡ ಅದೇ ಪ್ಲ್ಯಾನ್​ ಹಾಕಿಕೊಂಡಿದ್ದರು. ಆದರೆ ದುಡ್ಡು ಕೊಟ್ಟು ಹಾಲು ಖರೀದಿಸುವ ಬದಲು ಯಾವುದೋ ಅಂಗಡಿಯಲ್ಲಿ ಕಳ್ಳತನ ಮಾಡಿ ತಂದಿದ್ದಾರೆ. ನಗೆಪಾಟಲಿನ ಸಂಗತಿ ಏನೆಂದರೆ, ಚಿತ್ರಮಂದಿರದ ಬಳಿ ಬಂದು ಹಾಲಿನ ಪಾಕೆಟ್​ ಓಪನ್​ ಮಾಡಿದಾಗಲೇ ಒಂದು ಎಡವಟ್ಟು ಆಗಿರುವುದು ಅಭಿಮಾನಿಗಳ ಗಮನಕ್ಕೆ ಬಂತು. ಹಾಲಿನ ಬದಲಾಗಿ ಅವರು ಮೊಸರಿನ ಪಾಕೆಟ್​ಗಳನ್ನು ಕದ್ದು ತಂದಿದ್ದರು!

ಕದ್ದು ತಂದ ಮೊಸರನ್ನು ನಿರ್ಮಾಪಕ ಬೋನಿ ಕಪೂರ್​ ಅವರ ಕಾರಿನ ಮೇಲೆ ಸುರಿಯಲಾಗಿದೆ. ಇದರ ಜೊತೆಗೆ ಒಂದು ಭಯಾನಕ ಘಟನೆ ಕೂಡ ನಡೆದಿದೆ. ಕೊಯಂಬತ್ತೂರಿನಲ್ಲಿ ಅಜಿತ್​ ಅಭಿಮಾನಿಗಳು ‘ವಲಿಮೈ’ ಸಿನಿಮಾವನ್ನು ನೋಡಲು ಫೆ.24ರ ಮುಂಜಾನೆಯೇ ಚಿತ್ರಮಂದಿರದ ಬಳಿ ಜಮಾಯಿಸಿದ್ದರು. ಆ ಸಂದರ್ಭದಲ್ಲಿ ಅವರ ಮೇಲೆ ಯಾರೋ ಕಿಡಿಗೇಡಿಗಳು ಪೆಟ್ರೋಲ್​ ಬಾಂಬ್​ ಎಸೆದಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಗುರುವಾರ ಬಿಡುಗಡೆ ಆಗಿರುವ ‘ವಲಿಮೈ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್​ ನಟಿಸಿದ್ದಾರೆ. ಹುಮಾ ಖುರೇಶಿ, ಕಾರ್ತಿಕೇಯ ಮುಂತಾದವರು ಕೂಡ ಅಭಿನಯಿಸಿದ್ದಾರೆ. ಎಚ್​. ವಿನೋದ್​ ಅವರು ನಿರ್ದೇಶನ ಮಾಡಿದ್ದು, ಹಾಡುಗಳಿಗೆ ಯುವನ್​ ಶಂಕರ್​ ರಾಜಾ ಸಂಗೀತ ನೀಡಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳನ್ನು ಫ್ಯಾನ್ಸ್​ ಇಷ್ಪಟ್ಟಿದ್ದಾರೆ.

ಇದನ್ನೂ ಓದಿ:

ಬ್ರೇಕಪ್​ಗಳ ರಾಜ ರಣಬೀರ್​ ಜತೆ ಆಲಿಯಾ ಮದುವೆ ಆಗ್ತಿರೋದು ಯಾಕೆ? ಕೊನೆಗೂ ಬಯಲಾಯ್ತು ಸತ್ಯ

‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್