AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾದ ಓವರ್​ಸೀಸ್​ ವಿತರಣೆ ಹಕ್ಕು ‘ಪಿಹೆಚ್​ಎಫ್ ಫಿಲ್ಮ್’ ತಕ್ಕೆಗೆ

ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದು ಅವರ ಕೊನೇ ಸಿನಿಮಾ ಎಂಬ ಕಾರಣದಿಂದಲೂ ಹೈಪ್ ಜಾಸ್ತಿ ಆಗಿದೆ. ಬಿಡುಗಡೆಗೂ ಮೊದಲೇ ‘ಜನ ನಾಯಗನ್’ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಈ ಸಿನಿಮಾದ ವಿತರಣೆ ಹಕ್ಕುಗಳಿಗೆ ಸಖತ್ ಬೇಡಿಕೆ ಬಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಜನ ನಾಯಗನ್’ ಸಿನಿಮಾದ ಓವರ್​ಸೀಸ್​ ವಿತರಣೆ ಹಕ್ಕು ‘ಪಿಹೆಚ್​ಎಫ್ ಫಿಲ್ಮ್’ ತಕ್ಕೆಗೆ
Thalapathy Vijay, Venkat K Narayana
ಮದನ್​ ಕುಮಾರ್​
|

Updated on: Feb 02, 2025 | 8:55 PM

Share

ಕಾಲಿವುಡ್ ನಟ ದಳಪತಿ ವಿಜಯ್ ಅಭಿನಯದ ಸಿನಿಮಾಗಳು ಬಿಡುಗಡೆ ಆಗುವಾಗ ಒಂದಷ್ಟು ದಾಖಲೆಗಳು ನಿರ್ಮಾಣ ಆಗುತ್ತವೆ. ಈಗ ಅವರು ರಾಜಕೀಯದ ಕಡೆಗೆ ಗಮನ ಹರಿಸಿದ್ದಾರೆ. ಹಾಗಾಗಿ ಅವರ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಬಂಡವಾಳ ಹೂಡುತ್ತಿರುವುದು ಕರ್ನಾಟಕದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಎಂಬುದು ವಿಶೇಷ. ವೆಂಕಟ್ ಕೆ‌. ನಾರಾಯಣ್ ಅವರು ಈ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಿಸುತ್ತಿದ್ದಾರೆ.

ಈಗಾಗಲೇ ಪೋಸ್ಟರ್ ಮೂಲಕ ‘ಜನ ನಾಯಗನ್’ ಸಿನಿಮಾ ಕುತೂಹಲ ಹೆಚ್ಚಿಸಿದೆ. ಈಗ ಸಿನಿಮಾ ಬಗ್ಗೆ ಕೇಳಿಬರುತ್ತಿವ ಅಪ್​ಡೇಟ್​ಗಳು ಕೂಡ ನಿರೀಕ್ಷೆಯನ್ನು ಜಾಸ್ತಿ ಮಾಡುತ್ತಿವೆ. ‘ಜನ ನಾಯಗನ್’ ಚಿತ್ರದ ಓವರ್​ಸೀಸ್ ವಿತರಣೆ ಹಕ್ಕುಗಳನ್ನು ‘ಪಿಹೆಚ್​ಎಫ್​ ಫಿಲ್ಮ್’ ಸಂಸ್ಥೆ ಪಡೆದುಕೊಂಡಿದೆ. ದೊಡ್ಡ ಮೊತ್ತಕ್ಕೆ ವಿತರಣೆ ಹಕ್ಕಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿದೆ.

ಕಾಲಿವುಡ್​ ಫೇಮಸ್​ ನಿರ್ದೇಶಕ ಹೆಚ್. ವಿನೋದ್ ಅವರು ‘ಜನ ನಾಯಗನ್’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾಗೆ ಅನಿರುದ್ಧ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸತ್ಯನ್ ಸೂರ್ಯನ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇರಲಿದೆ. ಅನಲ್ ಅರಸು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಯಾವುದಕ್ಕೂ ಕೊರತೆ ಆಗದಂತೆ ನಿರ್ಮಾಪಕ ವೆಂಕಟ್ ಕೆ. ನಾರಾಯಣ್ ಅವರು ಭಾರಿ ಬಂಡವಾಳ ಹೂಡಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ‘ಜನ ನಾಯಗನ್’ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿಯಾದ ಸೆಟ್​ಗಳು, ಅತ್ಯಾಧುನಿಕ ವಿಎಫ್ಎಕ್ಸ್ ಹಾಗೂ ಅಪಾರ ಸಂಖ್ಯೆಯ ಜನರನ್ನು ಸೇರಿಸಿ ಶೂಟಿಂಗ್ ಮಾಡಲು ಸಿದ್ಧತೆ ನಡೆದಿದೆ. ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳನ್ನು ನಿರ್ಮಾಣ ಮಾಡುತ್ತಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿರುವುದರಿಂದ ನಿರೀಕ್ಷೆ ಡಬಲ್ ಆಗಿದೆ.

ಇದನ್ನೂ ಓದಿ: ವಿಜಯ್ ಕೊನೆಯ ಸಿನಿಮಾ ಸ್ಮರಣೀಯಗೊಳಿಸಲಿರುವ ಕೆವಿಎನ್

ವೆಂಕಟ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಗಣೇಶ್ ಅಭಿನಯದ ‘ಸಖತ್’ ಮೂಲಕ. ಆ ಬಳಿಕ ‘ಬೈ ಟು ಲವ್’ ಸಿನಿಮಾ ನಿರ್ಮಾಣ ಮಾಡಿದರು. ಈಗ ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಸಿದ್ಧವಾಗಿದೆ. ಇನ್ನು, ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾ ಮೂಡಿಬರುತ್ತಿರುವುದು ಕೂಡ ಇದೇ ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ. ಈ ಸಿನಿಮಾಗಾಗಿ ಇಡೀ ದೇಶವೇ ಕಾಯುತ್ತಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಣ್ಣ ಟೀಸರ್​ನಿಂದಲೇ ‘ಟಾಕ್ಸಿಕ್’ ಚಿತ್ರ ಧೂಳೆಬ್ಬಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು