Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾದ ಓವರ್​ಸೀಸ್​ ವಿತರಣೆ ಹಕ್ಕು ‘ಪಿಹೆಚ್​ಎಫ್ ಫಿಲ್ಮ್’ ತಕ್ಕೆಗೆ

ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇದು ಅವರ ಕೊನೇ ಸಿನಿಮಾ ಎಂಬ ಕಾರಣದಿಂದಲೂ ಹೈಪ್ ಜಾಸ್ತಿ ಆಗಿದೆ. ಬಿಡುಗಡೆಗೂ ಮೊದಲೇ ‘ಜನ ನಾಯಗನ್’ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಈ ಸಿನಿಮಾದ ವಿತರಣೆ ಹಕ್ಕುಗಳಿಗೆ ಸಖತ್ ಬೇಡಿಕೆ ಬಂದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಜನ ನಾಯಗನ್’ ಸಿನಿಮಾದ ಓವರ್​ಸೀಸ್​ ವಿತರಣೆ ಹಕ್ಕು ‘ಪಿಹೆಚ್​ಎಫ್ ಫಿಲ್ಮ್’ ತಕ್ಕೆಗೆ
Thalapathy Vijay, Venkat K Narayana
Follow us
ಮದನ್​ ಕುಮಾರ್​
|

Updated on: Feb 02, 2025 | 8:55 PM

ಕಾಲಿವುಡ್ ನಟ ದಳಪತಿ ವಿಜಯ್ ಅಭಿನಯದ ಸಿನಿಮಾಗಳು ಬಿಡುಗಡೆ ಆಗುವಾಗ ಒಂದಷ್ಟು ದಾಖಲೆಗಳು ನಿರ್ಮಾಣ ಆಗುತ್ತವೆ. ಈಗ ಅವರು ರಾಜಕೀಯದ ಕಡೆಗೆ ಗಮನ ಹರಿಸಿದ್ದಾರೆ. ಹಾಗಾಗಿ ಅವರ ಕೊನೇ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ಬಂಡವಾಳ ಹೂಡುತ್ತಿರುವುದು ಕರ್ನಾಟಕದ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಎಂಬುದು ವಿಶೇಷ. ವೆಂಕಟ್ ಕೆ‌. ನಾರಾಯಣ್ ಅವರು ಈ ಚಿತ್ರವನ್ನು ದೊಡ್ಡ ಬಜೆಟ್​ನಲ್ಲಿ ನಿರ್ಮಿಸುತ್ತಿದ್ದಾರೆ.

ಈಗಾಗಲೇ ಪೋಸ್ಟರ್ ಮೂಲಕ ‘ಜನ ನಾಯಗನ್’ ಸಿನಿಮಾ ಕುತೂಹಲ ಹೆಚ್ಚಿಸಿದೆ. ಈಗ ಸಿನಿಮಾ ಬಗ್ಗೆ ಕೇಳಿಬರುತ್ತಿವ ಅಪ್​ಡೇಟ್​ಗಳು ಕೂಡ ನಿರೀಕ್ಷೆಯನ್ನು ಜಾಸ್ತಿ ಮಾಡುತ್ತಿವೆ. ‘ಜನ ನಾಯಗನ್’ ಚಿತ್ರದ ಓವರ್​ಸೀಸ್ ವಿತರಣೆ ಹಕ್ಕುಗಳನ್ನು ‘ಪಿಹೆಚ್​ಎಫ್​ ಫಿಲ್ಮ್’ ಸಂಸ್ಥೆ ಪಡೆದುಕೊಂಡಿದೆ. ದೊಡ್ಡ ಮೊತ್ತಕ್ಕೆ ವಿತರಣೆ ಹಕ್ಕಗಳು ಮಾರಾಟ ಆಗಿವೆ ಎಂದು ಚಿತ್ರತಂಡ ಹೇಳಿದೆ.

ಕಾಲಿವುಡ್​ ಫೇಮಸ್​ ನಿರ್ದೇಶಕ ಹೆಚ್. ವಿನೋದ್ ಅವರು ‘ಜನ ನಾಯಗನ್’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾಗೆ ಅನಿರುದ್ಧ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸತ್ಯನ್ ಸೂರ್ಯನ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇರಲಿದೆ. ಅನಲ್ ಅರಸು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಯಾವುದಕ್ಕೂ ಕೊರತೆ ಆಗದಂತೆ ನಿರ್ಮಾಪಕ ವೆಂಕಟ್ ಕೆ. ನಾರಾಯಣ್ ಅವರು ಭಾರಿ ಬಂಡವಾಳ ಹೂಡಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ‘ಜನ ನಾಯಗನ್’ ಸಿನಿಮಾ ನಿರ್ಮಾಣ ಆಗುತ್ತಿದೆ. ಅದ್ದೂರಿಯಾದ ಸೆಟ್​ಗಳು, ಅತ್ಯಾಧುನಿಕ ವಿಎಫ್ಎಕ್ಸ್ ಹಾಗೂ ಅಪಾರ ಸಂಖ್ಯೆಯ ಜನರನ್ನು ಸೇರಿಸಿ ಶೂಟಿಂಗ್ ಮಾಡಲು ಸಿದ್ಧತೆ ನಡೆದಿದೆ. ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳನ್ನು ನಿರ್ಮಾಣ ಮಾಡುತ್ತಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ಈ ಸಿನಿಮಾಗೆ ಬಂಡವಾಳ ಹೂಡುತ್ತಿರುವುದರಿಂದ ನಿರೀಕ್ಷೆ ಡಬಲ್ ಆಗಿದೆ.

ಇದನ್ನೂ ಓದಿ: ವಿಜಯ್ ಕೊನೆಯ ಸಿನಿಮಾ ಸ್ಮರಣೀಯಗೊಳಿಸಲಿರುವ ಕೆವಿಎನ್

ವೆಂಕಟ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಗಣೇಶ್ ಅಭಿನಯದ ‘ಸಖತ್’ ಮೂಲಕ. ಆ ಬಳಿಕ ‘ಬೈ ಟು ಲವ್’ ಸಿನಿಮಾ ನಿರ್ಮಾಣ ಮಾಡಿದರು. ಈಗ ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಸಿದ್ಧವಾಗಿದೆ. ಇನ್ನು, ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾ ಮೂಡಿಬರುತ್ತಿರುವುದು ಕೂಡ ಇದೇ ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ. ಈ ಸಿನಿಮಾಗಾಗಿ ಇಡೀ ದೇಶವೇ ಕಾಯುತ್ತಿದೆ. ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಣ್ಣ ಟೀಸರ್​ನಿಂದಲೇ ‘ಟಾಕ್ಸಿಕ್’ ಚಿತ್ರ ಧೂಳೆಬ್ಬಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ