AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ?

Samantha Naga Chaitanya: ನಟಿ ಸಮಂತಾ ಮತ್ತು ನಾಗ ಚೈತನ್ಯ ಅವರುಗಳ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ?
ಮಂಜುನಾಥ ಸಿ.
|

Updated on: Mar 28, 2024 | 10:43 AM

Share

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಜೋಡಿ ಸಮಂತಾ (Samantha) ಹಾಗೂ ನಾಗ ಚೈತನ್ಯ ವಿಚ್ಛೇದನ ದೊಡ್ಡದಾಗಿ ಸುದ್ದಿಯಾಗಿತ್ತು. ಹಲವು ವರ್ಷಗಳ ಕಾಲ ಪ್ರೀತಿ ಅದ್ಧೂರಿಯಾಗಿ ಈ ಜೋಡಿ ವಿವಾಹವಾಗಿತ್ತು. ದಕ್ಷಿಣ ಭಾರತದ ಟಾಪ್ ತಾರಾ ಜೋಡಿ ಎಂದು ಹೆಸರಾಗಿದ್ದರು ಸಮಂತಾ ಹಾಗೂ ನಾಗ ಚೈತನ್ಯ. ಆದರೆ ಅಚಾನಕ್ಕಾಗಿ ಈ ಇಬ್ಬರೂ ದೂರಾದರು. ಇಬ್ಬರೂ ಸಹ ವಿಚ್ಛೇದನ ಪಡೆದುಕೊಂಡರು. ಆದರೆ ವಿಚ್ಚೇದನಕ್ಕೆ ಸ್ಪಷ್ಟ ಕಾರಣವನ್ನು ಇಬ್ಬರೂ ಕೊಡಲಿಲ್ಲ. ಇದೀಗ ವಿಚ್ಛೇದನವಾಗಿ ಮೂರು ವರ್ಷಗಳ ಬಳಿಕ ವಿಚ್ಛೇದನಕ್ಕೆ ಕಾರಣ ಹೊರಬಿದ್ದಿದೆ.

ತೆಲಂಗಾಣ ರಾಜಕೀಯದಲ್ಲಿ ಭಾರಿ ಅಲೆಗಳನ್ನು ಎಬ್ಬಿಸಿರುವ ಫೋನ್ ಟ್ಯಾಪಿಂಗ್​ನಿಂದಲೇ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಫೋನ್ ಟ್ಯಾಪಿಂಗ್ ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ತೆಲುಗು ಚಿತ್ರರಂಗದ ತಾರಾ ಜೋಡಿಯೊಂದರ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣವಾಗಿದೆ ಎಂಬ ಅಂಶ ಹರಿದಾಡುತ್ತಲೇ ಇತ್ತು. ಆದರೆ ಆ ತಾರಾ ಜೋಡಿ ಯಾರೆಂಬುದು ಬೆಳಕಿಗೆ ಬಂದಿರಲಿಲ್ಲ. ಆ ತಾರಾ ಜೋಡಿ ಸಮಂತಾ ಮತ್ತು ನಾಗ ಚೈತನ್ಯ ಅವರೇ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

ಇದನ್ನೂ ಓದಿ:ತೆಲಂಗಾಣದ ಫೋನ್ ಟ್ಯಾಪಿಂಗ್ ಪ್ರಕರಣ: ನಟಿಯರಿಗೆ ಕಿರುಕುಳ

ತೆಲುಗಿನ ಕೆಲ ಮಾಧ್ಯಮಗಳು ಯೂಟ್ಯೂಬ್ ಚಾನೆಲ್​ಗಳಲ್ಲಿ ಸಮಂತಾ ಹಾಗೂ ನಾಗ ಚೈತನ್ಯರ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ ಎಂಬ ಸುದ್ದಿಯನ್ನು ಬಿತ್ತರಿಸಿವೆ. ಸಮಂತಾ ಅವರೇ ನಾಗ ಚೈತನ್ಯರ ಫೋನ್ ಟ್ಯಾಪಿಂಗ್ ಮಾಡಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ. ನಾಗ ಚೈತನ್ಯರ ವರ್ತನೆ ಮೇಲೆ ಸಮಂತಾಗೆ ಅನುಮಾನವಿದ್ದ ಕಾರಣದಿಂದ ಸರ್ಕಾರದ ಮಟ್ಟದಲ್ಲಿ ಪ್ರಭಾವಿಯಾಗಿದ್ದ ವ್ಯಕ್ತಿಯೊಬ್ಬನ ಸಹಾಯ ಪಡೆದು ಸಮಂತಾ, ನಾಗ ಚೈತನ್ಯರ ಫೋನ್ ಟ್ಯಾಪ್ ಮಾಡಿಸಿದ್ದರು ಎನ್ನಲಾಗುತ್ತಿದೆ.

ಫೋನ್ ಟ್ಯಾಪಿಂಗ್ ಪ್ರಕರಣ ತೆಲಂಗಾಣ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಪೊಲೀಸ್ ಇಲಾಖೆಯ ಇಬ್ಬರು ಉನ್ನತ ಮಟ್ಟದ ಅಧಿಕಾರಿಗಳನ್ನು ಬಂಧಿಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥನ ವಿರುದ್ಧ ಲುಕ್ ಔಟ್ ನೊಟೀಸ್ ಸಹ ಜಾರಿಯಾಗಿದೆ. ಹಲವು ಉದ್ಯಮಿಗಳು, ರಾಜಕಾರಣಿಗಳು, ಸಿನಿಮಾ ನಟ-ನಟಿಯರ ಫೋನ್​ಗಳನ್ನು ಟ್ಯಾಪ್ ಮಾಡಿ ಅವರುಗಳನ್ನು ಬ್ಲಾಕ್ ಮೇಲ್ ಮಾಡಿ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಲಾಗಿತ್ತಂತೆ. ಹಲವು ರಾಜಕಾರಣಿಗಳ ಫೋನ್ ಸಹ ಟ್ಯಾಪ್ ಮಾಡಲಾಗಿದ್ದು, ತೆಲಂಗಾಣದ ಹಾಲಿ ಸಿಎಂ ರೇವಂತ್ ರೆಡ್ಡಿಯ ಫೋನ್ ಸಹ ಟ್ಯಾಪ್ ಮಾಡಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!