AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​
ಶಾರುಖ್​ ಖಾನ್​ - ಶಾರುಖ್​ ಮಗ ಆರ್ಯನ್
ರಾಜೇಶ್ ದುಗ್ಗುಮನೆ
|

Updated on:May 17, 2021 | 9:23 PM

Share

 ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಡದೇ ಇದ್ದರೂ ಆಗಾಗ ಬೇರೆ ಬೇರೆ ವಿಚಾರಕ್ಕೆ ಸುದ್ದಿ ಆಗುತ್ತಿರುತ್ತಾರೆ. ಈಗ ಶಾರುಖ್​ ಖಾನ್​ ಮಗ ಆರ್ಯನ್​ ಸುದ್ದಿಯಲ್ಲಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ಪದವಿ ಸ್ವೀಕರಿಸಿದ್ದು, ಫೋಟೋ ವೈರಲ್​ ಆಗಿದೆ.

ಅಮೆರಿಕದಲ್ಲಿ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಂದಿಲ್ಲ. ಈ ಮದ್ಯೆಯೂ ಪದವಿ ಸಮಾರಂಭ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರದಾನ ನಡೆಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್​ ಮಗ ಆರ್ಯನ್​ ಕೂಡ ಇದ್ದರು. ಅವರು ಫೈನ್​ ಆರ್ಟ್ಸ್​ನಲ್ಲಿ​ ಪದವಿ ಪಡೆದಿದ್ದಾರೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ಎಲ್ಲರೂ ಆರ್ಯನ್​ಗೆ ಶುಭಾಶಯ ಕೋರಿದ್ದಾರೆ.

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು. ದೇಶದಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿದೆ. ಹೀಗಾಗಿ, ಸುಹಾನಾ ಖಾನ್​ ನೋಡೋಕೆ ಗೌರಿ ಅಮೆರಿಕಕ್ಕೆ ತೆರಳಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

View this post on Instagram

A post shared by ???? (@devoted2srk65)

ಆರ್ಯನ್​ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೆ ತೆರಳುವ ಉದ್ದೇಶದಿಂದ ಕಳೆದ ತಿಂಗಳು ಆರ್ಯನ್​ ಜತೆ ಗೌರಿ ಅಮೆರಿಕಕ್ಕೆ ತೆರಳಿದ್ದರು ಎನ್ನುವುದು ಈಗ ತಿಳಿದು ಬಂದಿದೆ. ಶಾರುಖ್​ ಮಗಳು ಸುಹಾನಾ ಕೂಡ ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ.

ಏಪ್ರಿಲ್​ನಲ್ಲಿ ಐಪಿಎಲ್ ನಡೆಯುತ್ತಿತ್ತು. ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ಆಟ ನೋಡಲು ಶಾರುಖ್ ಮೈದಾನಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಕುಟುಂಬದವರನ್ನು ಭೇಟಿ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರು ಅಮೆರಿಕಕ್ಕೆ ತೆರಳಿರಲಿಲ್ಲ.

ಇದನ್ನೂ ಓದಿ: ನಾರ್ವೆಯಲ್ಲಿರುವ ಪ್ರೀತಿ ಹುಡುಕಿ ಹೊರಡಲಿದ್ದಾರೆ ಶಾರುಖ್​ ಖಾನ್​; ಈ ಅಚ್ಚರಿಯ ಕಥೆ ಹಿಂದಿರೋದೇನು?

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

Published On - 9:22 pm, Mon, 17 May 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ