Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​
ಶಾರುಖ್​ ಖಾನ್​ - ಶಾರುಖ್​ ಮಗ ಆರ್ಯನ್
Follow us
ರಾಜೇಶ್ ದುಗ್ಗುಮನೆ
|

Updated on:May 17, 2021 | 9:23 PM

 ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಡದೇ ಇದ್ದರೂ ಆಗಾಗ ಬೇರೆ ಬೇರೆ ವಿಚಾರಕ್ಕೆ ಸುದ್ದಿ ಆಗುತ್ತಿರುತ್ತಾರೆ. ಈಗ ಶಾರುಖ್​ ಖಾನ್​ ಮಗ ಆರ್ಯನ್​ ಸುದ್ದಿಯಲ್ಲಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ಪದವಿ ಸ್ವೀಕರಿಸಿದ್ದು, ಫೋಟೋ ವೈರಲ್​ ಆಗಿದೆ.

ಅಮೆರಿಕದಲ್ಲಿ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಂದಿಲ್ಲ. ಈ ಮದ್ಯೆಯೂ ಪದವಿ ಸಮಾರಂಭ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರದಾನ ನಡೆಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್​ ಮಗ ಆರ್ಯನ್​ ಕೂಡ ಇದ್ದರು. ಅವರು ಫೈನ್​ ಆರ್ಟ್ಸ್​ನಲ್ಲಿ​ ಪದವಿ ಪಡೆದಿದ್ದಾರೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ಎಲ್ಲರೂ ಆರ್ಯನ್​ಗೆ ಶುಭಾಶಯ ಕೋರಿದ್ದಾರೆ.

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು. ದೇಶದಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿದೆ. ಹೀಗಾಗಿ, ಸುಹಾನಾ ಖಾನ್​ ನೋಡೋಕೆ ಗೌರಿ ಅಮೆರಿಕಕ್ಕೆ ತೆರಳಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

View this post on Instagram

A post shared by ???? (@devoted2srk65)

ಆರ್ಯನ್​ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೆ ತೆರಳುವ ಉದ್ದೇಶದಿಂದ ಕಳೆದ ತಿಂಗಳು ಆರ್ಯನ್​ ಜತೆ ಗೌರಿ ಅಮೆರಿಕಕ್ಕೆ ತೆರಳಿದ್ದರು ಎನ್ನುವುದು ಈಗ ತಿಳಿದು ಬಂದಿದೆ. ಶಾರುಖ್​ ಮಗಳು ಸುಹಾನಾ ಕೂಡ ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ.

ಏಪ್ರಿಲ್​ನಲ್ಲಿ ಐಪಿಎಲ್ ನಡೆಯುತ್ತಿತ್ತು. ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ಆಟ ನೋಡಲು ಶಾರುಖ್ ಮೈದಾನಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಕುಟುಂಬದವರನ್ನು ಭೇಟಿ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರು ಅಮೆರಿಕಕ್ಕೆ ತೆರಳಿರಲಿಲ್ಲ.

ಇದನ್ನೂ ಓದಿ: ನಾರ್ವೆಯಲ್ಲಿರುವ ಪ್ರೀತಿ ಹುಡುಕಿ ಹೊರಡಲಿದ್ದಾರೆ ಶಾರುಖ್​ ಖಾನ್​; ಈ ಅಚ್ಚರಿಯ ಕಥೆ ಹಿಂದಿರೋದೇನು?

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

Published On - 9:22 pm, Mon, 17 May 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ