AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​
ಶಾರುಖ್​ ಖಾನ್​ - ಶಾರುಖ್​ ಮಗ ಆರ್ಯನ್
ರಾಜೇಶ್ ದುಗ್ಗುಮನೆ
|

Updated on:May 17, 2021 | 9:23 PM

Share

 ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಡದೇ ಇದ್ದರೂ ಆಗಾಗ ಬೇರೆ ಬೇರೆ ವಿಚಾರಕ್ಕೆ ಸುದ್ದಿ ಆಗುತ್ತಿರುತ್ತಾರೆ. ಈಗ ಶಾರುಖ್​ ಖಾನ್​ ಮಗ ಆರ್ಯನ್​ ಸುದ್ದಿಯಲ್ಲಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ಪದವಿ ಸ್ವೀಕರಿಸಿದ್ದು, ಫೋಟೋ ವೈರಲ್​ ಆಗಿದೆ.

ಅಮೆರಿಕದಲ್ಲಿ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಂದಿಲ್ಲ. ಈ ಮದ್ಯೆಯೂ ಪದವಿ ಸಮಾರಂಭ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರದಾನ ನಡೆಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್​ ಮಗ ಆರ್ಯನ್​ ಕೂಡ ಇದ್ದರು. ಅವರು ಫೈನ್​ ಆರ್ಟ್ಸ್​ನಲ್ಲಿ​ ಪದವಿ ಪಡೆದಿದ್ದಾರೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ಎಲ್ಲರೂ ಆರ್ಯನ್​ಗೆ ಶುಭಾಶಯ ಕೋರಿದ್ದಾರೆ.

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು. ದೇಶದಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿದೆ. ಹೀಗಾಗಿ, ಸುಹಾನಾ ಖಾನ್​ ನೋಡೋಕೆ ಗೌರಿ ಅಮೆರಿಕಕ್ಕೆ ತೆರಳಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

View this post on Instagram

A post shared by ???? (@devoted2srk65)

ಆರ್ಯನ್​ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೆ ತೆರಳುವ ಉದ್ದೇಶದಿಂದ ಕಳೆದ ತಿಂಗಳು ಆರ್ಯನ್​ ಜತೆ ಗೌರಿ ಅಮೆರಿಕಕ್ಕೆ ತೆರಳಿದ್ದರು ಎನ್ನುವುದು ಈಗ ತಿಳಿದು ಬಂದಿದೆ. ಶಾರುಖ್​ ಮಗಳು ಸುಹಾನಾ ಕೂಡ ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ.

ಏಪ್ರಿಲ್​ನಲ್ಲಿ ಐಪಿಎಲ್ ನಡೆಯುತ್ತಿತ್ತು. ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ಆಟ ನೋಡಲು ಶಾರುಖ್ ಮೈದಾನಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಕುಟುಂಬದವರನ್ನು ಭೇಟಿ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರು ಅಮೆರಿಕಕ್ಕೆ ತೆರಳಿರಲಿಲ್ಲ.

ಇದನ್ನೂ ಓದಿ: ನಾರ್ವೆಯಲ್ಲಿರುವ ಪ್ರೀತಿ ಹುಡುಕಿ ಹೊರಡಲಿದ್ದಾರೆ ಶಾರುಖ್​ ಖಾನ್​; ಈ ಅಚ್ಚರಿಯ ಕಥೆ ಹಿಂದಿರೋದೇನು?

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

Published On - 9:22 pm, Mon, 17 May 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ