AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​
ಶಾರುಖ್​ ಖಾನ್​ - ಶಾರುಖ್​ ಮಗ ಆರ್ಯನ್
ರಾಜೇಶ್ ದುಗ್ಗುಮನೆ
|

Updated on:May 17, 2021 | 9:23 PM

Share

 ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಡದೇ ಇದ್ದರೂ ಆಗಾಗ ಬೇರೆ ಬೇರೆ ವಿಚಾರಕ್ಕೆ ಸುದ್ದಿ ಆಗುತ್ತಿರುತ್ತಾರೆ. ಈಗ ಶಾರುಖ್​ ಖಾನ್​ ಮಗ ಆರ್ಯನ್​ ಸುದ್ದಿಯಲ್ಲಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯಲ್ಲಿ ಅವರು ಪದವಿ ಸ್ವೀಕರಿಸಿದ್ದು, ಫೋಟೋ ವೈರಲ್​ ಆಗಿದೆ.

ಅಮೆರಿಕದಲ್ಲಿ ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಂದಿಲ್ಲ. ಈ ಮದ್ಯೆಯೂ ಪದವಿ ಸಮಾರಂಭ ಮಾಡಿದ್ದಾರೆ. ವಿದ್ಯಾರ್ಥಿಗಳನ್ನು ದೂರ ದೂರ ಕೂರಿಸಿ ಪದವಿ ಪ್ರದಾನ ನಡೆಸಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್​ ಮಗ ಆರ್ಯನ್​ ಕೂಡ ಇದ್ದರು. ಅವರು ಫೈನ್​ ಆರ್ಟ್ಸ್​ನಲ್ಲಿ​ ಪದವಿ ಪಡೆದಿದ್ದಾರೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ಎಲ್ಲರೂ ಆರ್ಯನ್​ಗೆ ಶುಭಾಶಯ ಕೋರಿದ್ದಾರೆ.

ಏಪ್ರಿಲ್​ ತಿಂಗಳಲ್ಲಿ ಗೌರಿ ಖಾನ್ ಹಾಗೂ ಅವರ ಮಗ ಆರ್ಯನ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ನ್ಯೂಯಾರ್ಕ್​ಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎನ್ನಲಾಗಿತ್ತು. ದೇಶದಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿದೆ. ಹೀಗಾಗಿ, ಸುಹಾನಾ ಖಾನ್​ ನೋಡೋಕೆ ಗೌರಿ ಅಮೆರಿಕಕ್ಕೆ ತೆರಳಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

View this post on Instagram

A post shared by ???? (@devoted2srk65)

ಆರ್ಯನ್​ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮಕ್ಕೆ ತೆರಳುವ ಉದ್ದೇಶದಿಂದ ಕಳೆದ ತಿಂಗಳು ಆರ್ಯನ್​ ಜತೆ ಗೌರಿ ಅಮೆರಿಕಕ್ಕೆ ತೆರಳಿದ್ದರು ಎನ್ನುವುದು ಈಗ ತಿಳಿದು ಬಂದಿದೆ. ಶಾರುಖ್​ ಮಗಳು ಸುಹಾನಾ ಕೂಡ ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದಾರೆ.

ಏಪ್ರಿಲ್​ನಲ್ಲಿ ಐಪಿಎಲ್ ನಡೆಯುತ್ತಿತ್ತು. ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ ಆಟ ನೋಡಲು ಶಾರುಖ್ ಮೈದಾನಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಕುಟುಂಬದವರನ್ನು ಭೇಟಿ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಅವರು ಅಮೆರಿಕಕ್ಕೆ ತೆರಳಿರಲಿಲ್ಲ.

ಇದನ್ನೂ ಓದಿ: ನಾರ್ವೆಯಲ್ಲಿರುವ ಪ್ರೀತಿ ಹುಡುಕಿ ಹೊರಡಲಿದ್ದಾರೆ ಶಾರುಖ್​ ಖಾನ್​; ಈ ಅಚ್ಚರಿಯ ಕಥೆ ಹಿಂದಿರೋದೇನು?

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

Published On - 9:22 pm, Mon, 17 May 21

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್