AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಎನ್ನುವ ಹಣೆಪಟ್ಟಿ, ಅತ್ಯಾಚಾರ ಆರೋಪ: ಅಥ್ಲೀಟ್​ ಪಿಂಕಿ ಕುರಿತು ಬಯೋಪಿಕ್​

ಪಿಂಕಿ ಪಶ್ಚಿಮ ಬಂಗಾಳದ ಪುರುಲಿಯಾ ಅವರು. ಅವರ ಜೀವನ ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಅಥ್ಲೀಟ್​ಗಳಿಗೆ ಅರ್ಪಿಸಲಾಗುತ್ತಿದೆ. ಪ್ರಿಯಾಂಕಾ ಘಾಟಕ್​ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್​ ಬರೆಯುತ್ತಿದ್ದಾರೆ.

ಗಂಡು ಎನ್ನುವ ಹಣೆಪಟ್ಟಿ, ಅತ್ಯಾಚಾರ ಆರೋಪ: ಅಥ್ಲೀಟ್​ ಪಿಂಕಿ ಕುರಿತು ಬಯೋಪಿಕ್​
ಪಿಂಕಿ ಪ್ರಾಮಾಣಿಕ್​
TV9 Web
| Edited By: |

Updated on: Jul 06, 2021 | 9:57 PM

Share

ಭಾರತೀಯ ಅಥ್ಲೀಟ್​ ಪಿಂಕಿ ಪ್ರಾಮಾಣಿಕ್​ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ್ದು ಮಾತ್ರವಲ್ಲ ವಿವಾದಕ್ಕೂ ಒಳಗಾಗಿದ್ದರು. ಪಿಂಕಿ ಹೆಣ್ಣಲ್ಲ ಗಂಡು, ಅವರು ಅತ್ಯಾಚಾರ ಮಾಡಿದ್ದಾರೆ ಎನ್ನುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಈಗ ಇವರ ಜೀವನ ಆಧರಿಸಿ, ನಿರ್ಮಾಪಕ ಅಶೋಕ್​ ಪಂಡಿತ್​ ಬಯೋಪಿಕ್​ ಮಾಡುತ್ತಿದ್ದಾರೆ.

ಪಿಂಕಿ ಪಶ್ಚಿಮ ಬಂಗಾಳದ ಪುರುಲಿಯಾ ಅವರು. ಅವರ ಜೀವನ ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಅಥ್ಲೀಟ್​ಗಳಿಗೆ ಅರ್ಪಿಸಲಾಗುತ್ತಿದೆ. ಪ್ರಿಯಾಂಕಾ ಘಾಟಕ್​ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್​ ಬರೆಯುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಶೋಕ್​, ‘ಪ್ರಿಯಾಂಕಾ ಅವರು ಪಿಂಕಿ ಬಗ್ಗೆ ಓದಿ ಸಿನಿಮಾ ಮಾಡುವ ಆಲೋಚನೆಯೊಂದಿಗೆ ಬಂದರು. ನಾವು 6-7 ತಿಂಗಳು ಈ ಬಗ್ಗೆ ಅಧ್ಯಯನ ಮಾಡಿದ್ದೇವೆ. ನಾವು ಈ ಬಗ್ಗೆ ಸಾಕಷ್ಟು ರಿಸರ್ಚ್​ ನಡೆಸಿದ್ದೇವೆ. ಈ ಕಥೆಯನ್ನು ಜಗತ್ತಿಗೆ ಹೇಳಬೇಕು ಎಂದು ನಮಗನ್ನಿಸುತ್ತಿದೆ. ನಾವು ಪಿಂಕಿ ಅವರ ಜತೆ ಸಂಪರ್ಕದಲ್ಲಿದ್ದೇವೆ. ಕೋಲ್ಕತ್ತಾದಲ್ಲಿ ಅವರನ್ನು ಭೇಟಿ ಮಾಡಿ ಸಿನಿಮಾ ಮಾಡೋಕೆ ಒಪ್ಪಿಗೆ ಪಡೆದಿದ್ದೇವೆ. ಚಿತ್ರದಲ್ಲಿ ನಟಿಸಲಿರುವ ಕಲಾವಿದರು ಹಾಗೂ ತಂತ್ರಜ್ಞರ ಬಗ್ಗೆ ಶೀಘ್ರವೇ ಘೋಷಣೆ ಮಾಡುತ್ತೇವೆ’ ಎಂದಿದ್ದಾರೆ.

‘ದೇಶದಲ್ಲಿರುವ ಎಲ್ಲಾ ಅಥ್ಲೀಟ್​ಗಳಿಗೆ ಈ ಸಿನಿಮಾ ಸಮರ್ಪಣೆ. ಅನೇಕ ಅಥ್ಲೀಟ್​ಗಳು ಸಣ್ಣ ಹಳ್ಳಿಗಳಿಂದ ಬಂದು ಸಾಧನೆ ಮಾಡಿದ್ದಾರೆ. ಈ ಸಿನಿಮಾ ನಿಜಕ್ಕೂ ಸ್ಫೂರ್ತಿದಾಯಕವಾಗಿರಲಿದೆ’ ಎಂದಿದ್ದಾರೆ ಅಶೋಕ್​.

ಪಿಂಕಿ ಹೆಣ್ಣಲ್ಲ ಗಂಡು. ಅವರು ಅತ್ಯಾಚಾರ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ವಿಚಾರದ ಬಗ್ಗೆ ಸಿನಿಮಾದಲ್ಲಿ ಮಾಹಿತಿ ಸೇರಿಸಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಅಶೋಕ್, ‘ನಾನು ಮಾಡುವ ಸಿನಿಮಾ ಯಾವಾಗಲೂ ವಿಷಯಾಧಾರಿತವಾಗಿರುತ್ತದೆ. ಪುರುಲಿಯಾ ಎಂಬ ಸಣ್ಣ ಪಟ್ಟಣದಿಂದ ಬಂದು ಪಿಂಕಿ ಪ್ರಶಸ್ತಿ ಗೆಲ್ಲುವ ಮಟ್ಟಕ್ಕೆ ಹೇಗೆ ತಲುಪುತ್ತಾರೆ ಮತ್ತು ಆ ಕನಸು ಹೇಗೆ ಚೂರುಚೂರಾಗುತ್ತದೆ ಎನ್ನುವುದನ್ನು ಹೇಳುತ್ತಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ: ಜುಲಾನ್ ಗೋಸ್ವಾಮಿ ಬಯೋಪಿಕ್​ನಲ್ಲಿ ಅನುಷ್ಕಾ ಶರ್ಮಾ; ಸಿನಿಮಾದ ಚಿತ್ರೀಕರಣ ಯಾವಾಗಿನಿಂದ ಆರಂಭ ಗೊತ್ತಾ?

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?