AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟೂ ಆರೋಪಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಸಿಎಂ; ಅಸಮಾಧಾನ ಹೊರಹಾಕಿದ ಗಾಯಕಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೈರಮುತ್ತು ಅತಿಥಿಯಾಗಿ ಆಗಮಿಸಿದ್ದರು. ಸ್ಟಾಲಿನ್​ ಜತೆ ಅವರು ವೇದಿಕೆ ಹಂಚಿಕೊಂಡಿದ್ದರು.

ಮೀಟೂ ಆರೋಪಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಸಿಎಂ; ಅಸಮಾಧಾನ ಹೊರಹಾಕಿದ ಗಾಯಕಿ
ಚಿನ್ಮಯಿ ಶ್ರೀಪಾದ್​-ವೈರಮುತ್ತು
TV9 Web
| Edited By: |

Updated on:Feb 26, 2022 | 8:46 PM

Share

ಕೆಲ ವರ್ಷಗಳ ಹಿಂದೆ ಭಾರತೀಯ ಚಿತ್ರರಂಗದಲ್ಲಿ ‘ಮೀಟೂ’ ಆಂದೋಲನ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅನೇಕ ನಟಿಯರು ಮುಂದೆ ಬಂದು, ನಿರ್ದೇಶಕರು, ನಿರ್ಮಾಪಕರು ಹಾಗೂ ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಟಿಯರು ತಮಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಾಗ ಅನೇಕರು ಅವರ ಪರವಾಗಿ ನಿಂತರು. ಆದರೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಿಲ್ಲ ಎನ್ನುವ ಕೊರಗು ಕೆಲವರಲ್ಲಿ ಇದೆ. ಅದೇ ರೀತಿ ಗಾಯಕಿ ಚಿನ್ಮಯಿ ಶ್ರೀಪಾದ್ (Chinmayi Sripada)​ ಕೂಡ ಮೀಟೂ ಆರೋಪ ಮಾಡಿದ್ದರು. ಹಿರಿಯ ಗೀತ ರಚನಕಾರ ವೈರಮುತ್ತು (Vairamuthu) ವಿರುದ್ಧ ಅವರು ಸಿಡಿದೆದ್ದಿದ್ದರು. ವೈರಮುತ್ತು ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಚಿನ್ಮಯಿ ಅನೇಕ ಸಂದರ್ಭಗಳಲ್ಲಿ ಅಸಮಾಧಾನ ಹೊರಹಾಕಿದ್ದಿದೆ. ಈಗ ಅವರು ಮತ್ತೊಮ್ಮೆ ಇದೇ ವಿಚಾರವನ್ನು ಪುನರುಚ್ಚರಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೈರಮುತ್ತು ಅತಿಥಿಯಾಗಿ ಆಗಮಿಸಲಿದ್ದಾರೆ. ಸ್ಟಾಲಿನ್​ ಜತೆ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪ ಹೊತ್ತ ವ್ಯಕ್ತಿ ಜತೆಯಲ್ಲಿ ಸಿಎಂ ವೇದಿಕೆ ಹಂಚಿಕೊಳ್ಳುವುದಕ್ಕೆ ಚಿನ್ಮಯಿ ಆಕ್ರೋಶ ಹೊರಹಾಕಿದ್ದಾರೆ. ನ್ಯೂಸ್​9 ವೆಬ್​ಸೈಟ್​ನಲ್ಲಿ ಅವರು ಈ ಬಗ್ಗೆ ವಿಶೇಷ ಲೇಖನ ಬರೆದಿದ್ದಾರೆ.

‘ನಾನು 2018ರ ಅಕ್ಟೋಬರ್​​ನಲ್ಲಿ MeToo ಬಗ್ಗೆ ಮಾತನಾಡಿದ್ದೆ. ಅತ್ಯಂತ ಪ್ರಭಾವಶಾಲಿ ಮತ್ತು ರಾಜಕೀಯವಾಗಿ ಸಂಪರ್ಕ ಹೊಂದಿರುವ ವ್ಯಕ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದೆ. ನಾನು ಮಾತನಾಡಿದಾಗ, ರಾಜಕೀಯ ಗುಲಾಮರು ರಕ್ತಕ್ಕಾಗಿ ಬೇಟೆಯಾಡಿದರು. ನಾನು ಬಲಪಂಥೀಯರಿಂದ ಹಣ ಪಡೆದಿದ್ದೇನೆ ಎಂದು ಆರೋಪಿಸಿದರು. ನನ್ನ ಬಿಟ್ಟು ಇನ್ನೂ 19 ಮಹಿಳೆಯರು ಆ ವ್ಯಕ್ತಿಯ ಹೆಸರನ್ನು ಹೇಳಿದ್ದರು. ಆದರೆ, ಅವರನ್ನು ನಿರ್ಲಕ್ಷ್ಯ ಮಾಡಲಾಯಿತು. ಗಾಯಕಿ ಎ.ಆರ್. ರೈಹಾನಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ‘ಇದು ಬಹಿರಂಗ ರಹಸ್ಯ. ಎಲ್ಲರಿಗೂ ತಿಳಿದಿದೆ ಎಂದಿದ್ದರು’  ಎಂಬುದಾಗಿ ಚಿನ್ಮಯಿ ಬರೆದುಕೊಂಡಿದ್ದಾರೆ.

‘ನಾನು ಹೆಸರಿಸಿರುವ ವ್ಯಕ್ತಿ ಯಾವಾಗಲೂ ತನ್ನ ಪ್ರಭಾವ ತೋರಿಸುತ್ತಾರೆ. 20 ಮಹಿಳೆಯರು ಮಾಡಿದ ಆರೋಪ ರಾಜಕಾರಾಣಿಗಳಿಗೆ ಯಾವುದೇ ವ್ಯತ್ಯಾಸ ಉಂಟು ಮಾಡಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ ಚಿನ್ಮಯಿ.

‘ಕೇರಳ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು, ತೇಜಸ್ವಿ ಯಾದವ್, ರಾಹುಲ್ ಗಾಂಧಿ, ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವಷ್ಟು ಶಕ್ತಿಶಾಲಿ ವ್ಯಕ್ತಿಯನ್ನು ಹೆಸರಿಸಲು ನನಗೆ ಧೈರ್ಯವಿದೆ ಎಂದು ಇವರು ಹೇಗೆ ಭಾವಿಸುತ್ತಾರೆ? ಕೇರಳದಲ್ಲಿ ದಿಲೀಪ್ ಕೇಸ್, ಫ್ರಾಂಕೋ ಮುಳಕ್ಕಲ್ ಕೇಸ್, ಹೇಮಾ ಕಮಿಷನ್ ವರದಿ ಮುಚ್ಚಿ ಹೋಗಿದೆ. ಹೀಗಿರುವಾಗ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಒಪ್ಪಿಕೊಳ್ಳಲು ಕಷ್ಟವಾಗಬಹುದೆ’ ಎಂದು ಪ್ರಶ್ನಿಸಿದ್ದಾರೆ ಚಿನ್ಮಯಿ.

‘ದೌರ್ಜನ್ಯ ನಡೆದಿದೆ ಎಂಬುದಕ್ಕೆ ದೃಢವಾದ ಪುರಾವೆ ಕೇಳಲಾಗುತ್ತಿದೆ. ಅವರಿಗೆ ಬೇಕಾಗಿರುವುದು ಕೆಲವೇ ನಿಮಿಷಗಳ ವೀಡಿಯೊ ಎಂದು ನಮಗೆ ತಿಳಿದಿದೆ. ಇದು ನನ್ನ ಭಾರತ ಮತ್ತು ಭಾರತೀಯ ಸಮಾಜ. ಅಪರಾಧಿಗಳನ್ನು ರಕ್ಷಿಸಲು ಇಲ್ಲಿ ಮಾರ್ಗಗಳನ್ನು ಹುಡುಕಲಾಗುತ್ತದೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಚಿನ್ಮಯಿ.

ಇದನ್ನೂ ಓದಿ: ರಾತ್ರೋರಾತ್ರಿ ಡಿಲೀಟ್​ ಆಯ್ತು ಶ್ರುತಿ ಹರಿಹರನ್​ ಮೆಸೇಜ್​ಗಳು; ಎಲ್ಲರಿಗೂ ಎಚ್ಚರಿಕೆ ನೀಡಿದ ನಟಿ

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Published On - 6:11 pm, Sat, 26 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ