AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟೂ ಆರೋಪಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಸಿಎಂ; ಅಸಮಾಧಾನ ಹೊರಹಾಕಿದ ಗಾಯಕಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೈರಮುತ್ತು ಅತಿಥಿಯಾಗಿ ಆಗಮಿಸಿದ್ದರು. ಸ್ಟಾಲಿನ್​ ಜತೆ ಅವರು ವೇದಿಕೆ ಹಂಚಿಕೊಂಡಿದ್ದರು.

ಮೀಟೂ ಆರೋಪಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಸಿಎಂ; ಅಸಮಾಧಾನ ಹೊರಹಾಕಿದ ಗಾಯಕಿ
ಚಿನ್ಮಯಿ ಶ್ರೀಪಾದ್​-ವೈರಮುತ್ತು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Feb 26, 2022 | 8:46 PM

Share

ಕೆಲ ವರ್ಷಗಳ ಹಿಂದೆ ಭಾರತೀಯ ಚಿತ್ರರಂಗದಲ್ಲಿ ‘ಮೀಟೂ’ ಆಂದೋಲನ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅನೇಕ ನಟಿಯರು ಮುಂದೆ ಬಂದು, ನಿರ್ದೇಶಕರು, ನಿರ್ಮಾಪಕರು ಹಾಗೂ ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಟಿಯರು ತಮಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಾಗ ಅನೇಕರು ಅವರ ಪರವಾಗಿ ನಿಂತರು. ಆದರೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಿಲ್ಲ ಎನ್ನುವ ಕೊರಗು ಕೆಲವರಲ್ಲಿ ಇದೆ. ಅದೇ ರೀತಿ ಗಾಯಕಿ ಚಿನ್ಮಯಿ ಶ್ರೀಪಾದ್ (Chinmayi Sripada)​ ಕೂಡ ಮೀಟೂ ಆರೋಪ ಮಾಡಿದ್ದರು. ಹಿರಿಯ ಗೀತ ರಚನಕಾರ ವೈರಮುತ್ತು (Vairamuthu) ವಿರುದ್ಧ ಅವರು ಸಿಡಿದೆದ್ದಿದ್ದರು. ವೈರಮುತ್ತು ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಚಿನ್ಮಯಿ ಅನೇಕ ಸಂದರ್ಭಗಳಲ್ಲಿ ಅಸಮಾಧಾನ ಹೊರಹಾಕಿದ್ದಿದೆ. ಈಗ ಅವರು ಮತ್ತೊಮ್ಮೆ ಇದೇ ವಿಚಾರವನ್ನು ಪುನರುಚ್ಚರಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ವೈರಮುತ್ತು ಅತಿಥಿಯಾಗಿ ಆಗಮಿಸಲಿದ್ದಾರೆ. ಸ್ಟಾಲಿನ್​ ಜತೆ ಅವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪ ಹೊತ್ತ ವ್ಯಕ್ತಿ ಜತೆಯಲ್ಲಿ ಸಿಎಂ ವೇದಿಕೆ ಹಂಚಿಕೊಳ್ಳುವುದಕ್ಕೆ ಚಿನ್ಮಯಿ ಆಕ್ರೋಶ ಹೊರಹಾಕಿದ್ದಾರೆ. ನ್ಯೂಸ್​9 ವೆಬ್​ಸೈಟ್​ನಲ್ಲಿ ಅವರು ಈ ಬಗ್ಗೆ ವಿಶೇಷ ಲೇಖನ ಬರೆದಿದ್ದಾರೆ.

‘ನಾನು 2018ರ ಅಕ್ಟೋಬರ್​​ನಲ್ಲಿ MeToo ಬಗ್ಗೆ ಮಾತನಾಡಿದ್ದೆ. ಅತ್ಯಂತ ಪ್ರಭಾವಶಾಲಿ ಮತ್ತು ರಾಜಕೀಯವಾಗಿ ಸಂಪರ್ಕ ಹೊಂದಿರುವ ವ್ಯಕ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದೆ. ನಾನು ಮಾತನಾಡಿದಾಗ, ರಾಜಕೀಯ ಗುಲಾಮರು ರಕ್ತಕ್ಕಾಗಿ ಬೇಟೆಯಾಡಿದರು. ನಾನು ಬಲಪಂಥೀಯರಿಂದ ಹಣ ಪಡೆದಿದ್ದೇನೆ ಎಂದು ಆರೋಪಿಸಿದರು. ನನ್ನ ಬಿಟ್ಟು ಇನ್ನೂ 19 ಮಹಿಳೆಯರು ಆ ವ್ಯಕ್ತಿಯ ಹೆಸರನ್ನು ಹೇಳಿದ್ದರು. ಆದರೆ, ಅವರನ್ನು ನಿರ್ಲಕ್ಷ್ಯ ಮಾಡಲಾಯಿತು. ಗಾಯಕಿ ಎ.ಆರ್. ರೈಹಾನಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ‘ಇದು ಬಹಿರಂಗ ರಹಸ್ಯ. ಎಲ್ಲರಿಗೂ ತಿಳಿದಿದೆ ಎಂದಿದ್ದರು’  ಎಂಬುದಾಗಿ ಚಿನ್ಮಯಿ ಬರೆದುಕೊಂಡಿದ್ದಾರೆ.

‘ನಾನು ಹೆಸರಿಸಿರುವ ವ್ಯಕ್ತಿ ಯಾವಾಗಲೂ ತನ್ನ ಪ್ರಭಾವ ತೋರಿಸುತ್ತಾರೆ. 20 ಮಹಿಳೆಯರು ಮಾಡಿದ ಆರೋಪ ರಾಜಕಾರಾಣಿಗಳಿಗೆ ಯಾವುದೇ ವ್ಯತ್ಯಾಸ ಉಂಟು ಮಾಡಿಲ್ಲ’ ಎಂದು ಬೇಸರ ಹೊರಹಾಕಿದ್ದಾರೆ ಚಿನ್ಮಯಿ.

‘ಕೇರಳ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು, ತೇಜಸ್ವಿ ಯಾದವ್, ರಾಹುಲ್ ಗಾಂಧಿ, ಕಮಲ್ ಹಾಸನ್ ಮತ್ತು ರಜನಿಕಾಂತ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವಷ್ಟು ಶಕ್ತಿಶಾಲಿ ವ್ಯಕ್ತಿಯನ್ನು ಹೆಸರಿಸಲು ನನಗೆ ಧೈರ್ಯವಿದೆ ಎಂದು ಇವರು ಹೇಗೆ ಭಾವಿಸುತ್ತಾರೆ? ಕೇರಳದಲ್ಲಿ ದಿಲೀಪ್ ಕೇಸ್, ಫ್ರಾಂಕೋ ಮುಳಕ್ಕಲ್ ಕೇಸ್, ಹೇಮಾ ಕಮಿಷನ್ ವರದಿ ಮುಚ್ಚಿ ಹೋಗಿದೆ. ಹೀಗಿರುವಾಗ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಒಪ್ಪಿಕೊಳ್ಳಲು ಕಷ್ಟವಾಗಬಹುದೆ’ ಎಂದು ಪ್ರಶ್ನಿಸಿದ್ದಾರೆ ಚಿನ್ಮಯಿ.

‘ದೌರ್ಜನ್ಯ ನಡೆದಿದೆ ಎಂಬುದಕ್ಕೆ ದೃಢವಾದ ಪುರಾವೆ ಕೇಳಲಾಗುತ್ತಿದೆ. ಅವರಿಗೆ ಬೇಕಾಗಿರುವುದು ಕೆಲವೇ ನಿಮಿಷಗಳ ವೀಡಿಯೊ ಎಂದು ನಮಗೆ ತಿಳಿದಿದೆ. ಇದು ನನ್ನ ಭಾರತ ಮತ್ತು ಭಾರತೀಯ ಸಮಾಜ. ಅಪರಾಧಿಗಳನ್ನು ರಕ್ಷಿಸಲು ಇಲ್ಲಿ ಮಾರ್ಗಗಳನ್ನು ಹುಡುಕಲಾಗುತ್ತದೆ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಚಿನ್ಮಯಿ.

ಇದನ್ನೂ ಓದಿ: ರಾತ್ರೋರಾತ್ರಿ ಡಿಲೀಟ್​ ಆಯ್ತು ಶ್ರುತಿ ಹರಿಹರನ್​ ಮೆಸೇಜ್​ಗಳು; ಎಲ್ಲರಿಗೂ ಎಚ್ಚರಿಕೆ ನೀಡಿದ ನಟಿ

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Published On - 6:11 pm, Sat, 26 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ