AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕಿಯ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ಮೂಡಿಸಿದ ಸಾವು

Singer Harini father death: ಮೃತದೇಹದಲ್ಲಿ ಎಡಗೈ ನರ ಕಟ್ ಆಗಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿದೆ. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿದೆ.

ಖ್ಯಾತ ಗಾಯಕಿಯ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ಮೂಡಿಸಿದ ಸಾವು
ಹರಿಣಿ-ಎ.ಕೆ. ರಾವ್​​
TV9 Web
| Edited By: |

Updated on: Nov 25, 2021 | 4:54 PM

Share

ಖ್ಯಾತ ಗಾಯಕಿ ಹರಿಣಿ (Singer Harini ) ಅವರ ತಂದೆ ಎ.ಕೆ. ರಾವ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ರೈಲ್ವೇ ಹಳಿ ಮೇಲೆ ಮೃತದೇಹ ಪತ್ತೆ ಆಗಿದೆ. ಈ ಸಂಬಂಧ ಹರಿಣಿ ಕುಟುಂಬದವರು ದೂರು ನೀಡಿದ್ದಾರೆ. ಈ ಸಾವಿನ (Harini father death) ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಯಲಹಂಕ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋಮೀಟರ್​ ದೂರದಲ್ಲಿ ಎ.ಕೆ. ರಾವ್​ (AK Rao) ಅವರ ಮೃತದೇಹ ಸಿಕ್ಕಿದೆ. ನ.22ರ ರಾತ್ರಿಯೇ ಈ ಘಟನೆ ನಡೆದಿದೆ. ಹರಿಣಿ ಮತ್ತು ಅವರ ಕುಟುಂಬದವರು ಹೈದರಾಬಾದ್​ನಲ್ಲಿ ವಾಸವಾಗಿದ್ದರು. ಆದರೆ ಕೆಲವು ದಿನಗಳಿಂದ ಇಡೀ ಕುಟುಂಬ ನಾಪತ್ತೆ ಆಗಿದ್ದರು ಎಂಬ ಮಾಹಿತಿ ಇದೆ. ಈ ಎಲ್ಲ ಕಾರಣಗಳಿಂದಾಗಿ ಎ.ಕೆ. ರಾವ್ ಸಾವಿನ ಕೇಸ್​ ಅನುಮಾನ ಮೂಡಿಸಿದೆ.

ಮೃತದೇಹದ ಜೊತೆ ಆಧಾರ್​ ಕಾರ್ಡ್​ ಸಿಕ್ಕಿದೆ. ಅಲ್ಲದೇ, ದೂರು ನೀಡಲು ಸಿದ್ಧಪಡಿಸಿರುವ ಪತ್ರ ಹಾಗೂ ಕೆಲವು ಡಾಕ್ಯುಮೆಂಟ್​ಗಳು ಸಹ ಪತ್ತೆ ಆಗಿವೆ. ತಂದೆಯ ಸಾವು ಅನುಮಾನಾಸ್ಪದ ಆಗಿದೆ ಎಂದು ಎ.ಕೆ. ರಾವ್​ ಪುತ್ರಿ ಶಾಲಿನಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ‘ನಮ್ಮ ತಂದೆ ಕೊಲೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ’ ಎಂದು ದೂರಿನಲ್ಲಿ ಹೇಳಲಾಗಿದೆ. ಅದರ ಅನ್ವಯ 174 C, 302 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ.

ಮೃತದೇಹದಲ್ಲಿ ಎಡಗೈ ನರ ಕಟ್ ಆಗಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿದೆ. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿದೆ. ಪ್ರಾಥಮಿಕ ತನಿಖೆ ವೇಳೆ ಇದು ಆತ್ಮಹತ್ಯೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ಬೆಂಗಳೂರು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ