AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕಿಯ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ಮೂಡಿಸಿದ ಸಾವು

Singer Harini father death: ಮೃತದೇಹದಲ್ಲಿ ಎಡಗೈ ನರ ಕಟ್ ಆಗಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿದೆ. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿದೆ.

ಖ್ಯಾತ ಗಾಯಕಿಯ ತಂದೆ ಶವ ಬೆಂಗಳೂರು ರೈಲ್ವೆ ಹಳಿ ಮೇಲೆ ಪತ್ತೆ; ಅನುಮಾನ ಮೂಡಿಸಿದ ಸಾವು
ಹರಿಣಿ-ಎ.ಕೆ. ರಾವ್​​
TV9 Web
| Updated By: ಮದನ್​ ಕುಮಾರ್​|

Updated on: Nov 25, 2021 | 4:54 PM

Share

ಖ್ಯಾತ ಗಾಯಕಿ ಹರಿಣಿ (Singer Harini ) ಅವರ ತಂದೆ ಎ.ಕೆ. ರಾವ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ರೈಲ್ವೇ ಹಳಿ ಮೇಲೆ ಮೃತದೇಹ ಪತ್ತೆ ಆಗಿದೆ. ಈ ಸಂಬಂಧ ಹರಿಣಿ ಕುಟುಂಬದವರು ದೂರು ನೀಡಿದ್ದಾರೆ. ಈ ಸಾವಿನ (Harini father death) ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಯಲಹಂಕ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋಮೀಟರ್​ ದೂರದಲ್ಲಿ ಎ.ಕೆ. ರಾವ್​ (AK Rao) ಅವರ ಮೃತದೇಹ ಸಿಕ್ಕಿದೆ. ನ.22ರ ರಾತ್ರಿಯೇ ಈ ಘಟನೆ ನಡೆದಿದೆ. ಹರಿಣಿ ಮತ್ತು ಅವರ ಕುಟುಂಬದವರು ಹೈದರಾಬಾದ್​ನಲ್ಲಿ ವಾಸವಾಗಿದ್ದರು. ಆದರೆ ಕೆಲವು ದಿನಗಳಿಂದ ಇಡೀ ಕುಟುಂಬ ನಾಪತ್ತೆ ಆಗಿದ್ದರು ಎಂಬ ಮಾಹಿತಿ ಇದೆ. ಈ ಎಲ್ಲ ಕಾರಣಗಳಿಂದಾಗಿ ಎ.ಕೆ. ರಾವ್ ಸಾವಿನ ಕೇಸ್​ ಅನುಮಾನ ಮೂಡಿಸಿದೆ.

ಮೃತದೇಹದ ಜೊತೆ ಆಧಾರ್​ ಕಾರ್ಡ್​ ಸಿಕ್ಕಿದೆ. ಅಲ್ಲದೇ, ದೂರು ನೀಡಲು ಸಿದ್ಧಪಡಿಸಿರುವ ಪತ್ರ ಹಾಗೂ ಕೆಲವು ಡಾಕ್ಯುಮೆಂಟ್​ಗಳು ಸಹ ಪತ್ತೆ ಆಗಿವೆ. ತಂದೆಯ ಸಾವು ಅನುಮಾನಾಸ್ಪದ ಆಗಿದೆ ಎಂದು ಎ.ಕೆ. ರಾವ್​ ಪುತ್ರಿ ಶಾಲಿನಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ‘ನಮ್ಮ ತಂದೆ ಕೊಲೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವವರಲ್ಲ’ ಎಂದು ದೂರಿನಲ್ಲಿ ಹೇಳಲಾಗಿದೆ. ಅದರ ಅನ್ವಯ 174 C, 302 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ.

ಮೃತದೇಹದಲ್ಲಿ ಎಡಗೈ ನರ ಕಟ್ ಆಗಿದೆ. ಕುತ್ತಿಗೆಗೆ ಚಾಕುವಿನಿಂದ ಇರಿದಿರುವುದು ತಿಳಿದುಬಂದಿದೆ. ಮೃತದೇಹದ ಬಳಿಯಲ್ಲಿ ಚಾಕು ಸಹ ಸಿಕ್ಕಿದೆ. ಪ್ರಾಥಮಿಕ ತನಿಖೆ ವೇಳೆ ಇದು ಆತ್ಮಹತ್ಯೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ಬೆಂಗಳೂರು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:

‘ಅಪ್ಪು ನಿಧನದ ಸುದ್ದಿ ಕೇಳಿದಾಗ ರಾಡ್​ನಿಂದ ತಲೆಗೆ ಹೊಡೆದಂತೆ ಆಯ್ತು’; ಕರಾಳ ಕ್ಷಣದ ಬಗ್ಗೆ ಶಿವಣ್ಣನ ಮಾತು

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ