AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್

ಅನಸೂಯಾ ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್
ರಾಜೇಶ್ ದುಗ್ಗುಮನೆ
|

Updated on: Jun 20, 2023 | 8:22 AM

Share

ವಿಜಯ್ ದೇವರಕೊಂಡ (Vijay Devarakonda) ಅವರ ಬಗ್ಗೆ ಆಡಿದ ಮಾತುಗಳು ತೆಲುಗು ನಟಿ, ಆ್ಯಂಕರ್ ಅನಸೂಯಾ ಭಾರದ್ವಾಜ್​ಗೆ (Anasuya Bharadwaj) ಸಂಕಷ್ಟ ತಂದಿದೆ. ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ತಾಯಿ ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು. ಇದನ್ನು ವಿಜಯ್ ಫ್ಯಾನ್ಸ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರು ನಟಿಯ ವಿರುದ್ಧ ಟೀಕೆ ಮಾಡುತ್ತಲೇ ಇರುತ್ತಾರೆ. ಅವರನ್ನು ಬೇಕಾಬಿಟ್ಟಿ ಟ್ರೋಲ್ ಮಾಡುತ್ತಾರೆ. ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ಈ ಬಗ್ಗೆ ಅನಸೂಯಾ ಸರಣಿ ಟ್ವೀಟ್ ಮಾಡಿದ್ದಾರೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಕಳೆದ ಕೆಲವು ದಿನಗಳಿಂದ ನನ್ನ ಬಗ್ಗೆ ಸಾಕಷ್ಟು ಟ್ವೀಟ್‌ಗಳನ್ನು ನೋಡುತ್ತಿದ್ದೇನೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರಿಗೆ ಅಗೌರವ ತೋರಲು ನನ್ನ ಹೆಸರನ್ನು ಬಳಸಲಾಗುತ್ತಿದೆ. ಇದನ್ನು ಮಾಡುತ್ತಿರುವುದರಿಂದ ನನ್ನ ಗೌರವಕ್ಕೆ ಧಕ್ಕೆ ಬರುತ್ತಿದೆ’ ಎಂದು ಮೊದಲ ಟ್ವೀಟ್​ನಲ್ಲಿ ಅನಸೂಯಾ ಹೇಳಿದ್ದಾರೆ.

‘ಇದು ನನ್ನ ಹೆಸರಿಗೆ ಮಾನಹಾನಿ ಮಾಡುತ್ತಿದೆ. ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಿಂದ ಅನಗತ್ಯ ನೋವು ಉಂಟಾಗುತ್ತಿದೆ. ಇದು ನನ್ನ ಜೀವನ. ನನ್ನ ಇಷ್ಟದಂತೆ ಮುನ್ನಡೆಸುತ್ತಿದ್ದೇನೆ. ಅಲ್ಲದೆ ನಾನು ಯಾರ ಬಳಿಗೂ ಹೋಗಲು ಬಯಸುವುದಿಲ್ಲ. ನನ್ನ ಬಲದಿಂದ ನಾನು ಬೆಳೆದಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

‘ಬಡಾಯಿ ಕೊಚ್ಚಿಕೊಳ್ಳಲು ನನ್ನ ಬಳಿ ಯಾವುದೇ ವಿಶೇಷ PR ತಂಡಗಳಿಲ್ಲ. ನನ್ನ ಬಗ್ಗೆ ನೀವು ಮೆಚ್ಚುಗೆ ಸೂಚಿಸಲು ಸಾಧ್ಯವಾಗದೇ ಇದ್ದರೆ ಕನಿಷ್ಠ ನನ್ನಿಂದ ದೂರವಿರಿ. ಸಂಬಂಧವಿಲ್ಲದ ವಿಷಯಗಳಲ್ಲಿ ನನ್ನ ಹೆಸರನ್ನು ಎಳೆದು ತರಬೇಡಿ. ದಯವಿಟ್ಟು ಮನುಷ್ಯರಂತೆ ವರ್ತಿಸಿ. ನನಗೊಂದು ಕುಟುಂಬವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅನಸೂಯಾ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು