AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್

ಅನಸೂಯಾ ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್
ರಾಜೇಶ್ ದುಗ್ಗುಮನೆ
|

Updated on: Jun 20, 2023 | 8:22 AM

Share

ವಿಜಯ್ ದೇವರಕೊಂಡ (Vijay Devarakonda) ಅವರ ಬಗ್ಗೆ ಆಡಿದ ಮಾತುಗಳು ತೆಲುಗು ನಟಿ, ಆ್ಯಂಕರ್ ಅನಸೂಯಾ ಭಾರದ್ವಾಜ್​ಗೆ (Anasuya Bharadwaj) ಸಂಕಷ್ಟ ತಂದಿದೆ. ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ತಾಯಿ ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು. ಇದನ್ನು ವಿಜಯ್ ಫ್ಯಾನ್ಸ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರು ನಟಿಯ ವಿರುದ್ಧ ಟೀಕೆ ಮಾಡುತ್ತಲೇ ಇರುತ್ತಾರೆ. ಅವರನ್ನು ಬೇಕಾಬಿಟ್ಟಿ ಟ್ರೋಲ್ ಮಾಡುತ್ತಾರೆ. ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ಈ ಬಗ್ಗೆ ಅನಸೂಯಾ ಸರಣಿ ಟ್ವೀಟ್ ಮಾಡಿದ್ದಾರೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಕಳೆದ ಕೆಲವು ದಿನಗಳಿಂದ ನನ್ನ ಬಗ್ಗೆ ಸಾಕಷ್ಟು ಟ್ವೀಟ್‌ಗಳನ್ನು ನೋಡುತ್ತಿದ್ದೇನೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರಿಗೆ ಅಗೌರವ ತೋರಲು ನನ್ನ ಹೆಸರನ್ನು ಬಳಸಲಾಗುತ್ತಿದೆ. ಇದನ್ನು ಮಾಡುತ್ತಿರುವುದರಿಂದ ನನ್ನ ಗೌರವಕ್ಕೆ ಧಕ್ಕೆ ಬರುತ್ತಿದೆ’ ಎಂದು ಮೊದಲ ಟ್ವೀಟ್​ನಲ್ಲಿ ಅನಸೂಯಾ ಹೇಳಿದ್ದಾರೆ.

‘ಇದು ನನ್ನ ಹೆಸರಿಗೆ ಮಾನಹಾನಿ ಮಾಡುತ್ತಿದೆ. ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಿಂದ ಅನಗತ್ಯ ನೋವು ಉಂಟಾಗುತ್ತಿದೆ. ಇದು ನನ್ನ ಜೀವನ. ನನ್ನ ಇಷ್ಟದಂತೆ ಮುನ್ನಡೆಸುತ್ತಿದ್ದೇನೆ. ಅಲ್ಲದೆ ನಾನು ಯಾರ ಬಳಿಗೂ ಹೋಗಲು ಬಯಸುವುದಿಲ್ಲ. ನನ್ನ ಬಲದಿಂದ ನಾನು ಬೆಳೆದಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

‘ಬಡಾಯಿ ಕೊಚ್ಚಿಕೊಳ್ಳಲು ನನ್ನ ಬಳಿ ಯಾವುದೇ ವಿಶೇಷ PR ತಂಡಗಳಿಲ್ಲ. ನನ್ನ ಬಗ್ಗೆ ನೀವು ಮೆಚ್ಚುಗೆ ಸೂಚಿಸಲು ಸಾಧ್ಯವಾಗದೇ ಇದ್ದರೆ ಕನಿಷ್ಠ ನನ್ನಿಂದ ದೂರವಿರಿ. ಸಂಬಂಧವಿಲ್ಲದ ವಿಷಯಗಳಲ್ಲಿ ನನ್ನ ಹೆಸರನ್ನು ಎಳೆದು ತರಬೇಡಿ. ದಯವಿಟ್ಟು ಮನುಷ್ಯರಂತೆ ವರ್ತಿಸಿ. ನನಗೊಂದು ಕುಟುಂಬವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅನಸೂಯಾ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ