AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್

ಅನಸೂಯಾ ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

Anasuya Bharadwaj: ‘ನನಗೂ ಕುಟುಂಬವಿದೆ, ದಯವಿಟ್ಟು ನನ್ನನ್ನು ಬಿಟ್ಟುಬಿಡಿ’; ಗೋಗರೆದ ಆ್ಯಂಕರ್ ಅನಸೂಯಾ ಭಾರದ್ವಾಜ್
ರಾಜೇಶ್ ದುಗ್ಗುಮನೆ
|

Updated on: Jun 20, 2023 | 8:22 AM

Share

ವಿಜಯ್ ದೇವರಕೊಂಡ (Vijay Devarakonda) ಅವರ ಬಗ್ಗೆ ಆಡಿದ ಮಾತುಗಳು ತೆಲುಗು ನಟಿ, ಆ್ಯಂಕರ್ ಅನಸೂಯಾ ಭಾರದ್ವಾಜ್​ಗೆ (Anasuya Bharadwaj) ಸಂಕಷ್ಟ ತಂದಿದೆ. ‘ಅರ್ಜುನ್ ರೆಡ್ಡಿ’ ಚಿತ್ರದಲ್ಲಿ ತಾಯಿ ಬಗ್ಗೆ ಬೈಗುಳ ಇದೆ. ಇದರ ವಿರುದ್ಧ ಅನಸೂಯಾ ಧ್ವನಿ ಎತ್ತಿದ್ದರು. ವಿಜಯ್ ದೇವರಕೊಂಡ ವಿರುದ್ಧ ಅವರು ಕಿಡಿಕಾರಿದ್ದರು. ಇದನ್ನು ವಿಜಯ್ ಫ್ಯಾನ್ಸ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದಾರೆ. ಅವರು ನಟಿಯ ವಿರುದ್ಧ ಟೀಕೆ ಮಾಡುತ್ತಲೇ ಇರುತ್ತಾರೆ. ಅವರನ್ನು ಬೇಕಾಬಿಟ್ಟಿ ಟ್ರೋಲ್ ಮಾಡುತ್ತಾರೆ. ಅನಗತ್ಯವಾಗಿ ಅವರ ಹೆಸರನ್ನು ಬೇರೆಬೇರೆ ಕಡೆಗಳಲ್ಲಿ ಎಳೆದು ತರಲಾಗುತ್ತಿದೆ. ಈ ಬಗ್ಗೆ ಅನಸೂಯಾ ಸರಣಿ ಟ್ವೀಟ್ ಮಾಡಿದ್ದಾರೆ. ‘ನನಗೂ ಕುಟುಂಬ ಇದೆ. ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅವರು ಕೋರಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಕಳೆದ ಕೆಲವು ದಿನಗಳಿಂದ ನನ್ನ ಬಗ್ಗೆ ಸಾಕಷ್ಟು ಟ್ವೀಟ್‌ಗಳನ್ನು ನೋಡುತ್ತಿದ್ದೇನೆ. ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಪ್ರಮುಖರಿಗೆ ಅಗೌರವ ತೋರಲು ನನ್ನ ಹೆಸರನ್ನು ಬಳಸಲಾಗುತ್ತಿದೆ. ಇದನ್ನು ಮಾಡುತ್ತಿರುವುದರಿಂದ ನನ್ನ ಗೌರವಕ್ಕೆ ಧಕ್ಕೆ ಬರುತ್ತಿದೆ’ ಎಂದು ಮೊದಲ ಟ್ವೀಟ್​ನಲ್ಲಿ ಅನಸೂಯಾ ಹೇಳಿದ್ದಾರೆ.

‘ಇದು ನನ್ನ ಹೆಸರಿಗೆ ಮಾನಹಾನಿ ಮಾಡುತ್ತಿದೆ. ಅವರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರಿಂದ ಅನಗತ್ಯ ನೋವು ಉಂಟಾಗುತ್ತಿದೆ. ಇದು ನನ್ನ ಜೀವನ. ನನ್ನ ಇಷ್ಟದಂತೆ ಮುನ್ನಡೆಸುತ್ತಿದ್ದೇನೆ. ಅಲ್ಲದೆ ನಾನು ಯಾರ ಬಳಿಗೂ ಹೋಗಲು ಬಯಸುವುದಿಲ್ಲ. ನನ್ನ ಬಲದಿಂದ ನಾನು ಬೆಳೆದಿದ್ದೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬೋಲ್ಡ್ ಆಗಿ ಕಾಣಿಸಿಕೊಂಡ ಆ್ಯಂಕರ್; ಬಟ್ಟೆಯ ಮೇಲೆ ಕಣ್ಣಿಟ್ಟ ಫ್ಯಾನ್ಸ್

‘ಬಡಾಯಿ ಕೊಚ್ಚಿಕೊಳ್ಳಲು ನನ್ನ ಬಳಿ ಯಾವುದೇ ವಿಶೇಷ PR ತಂಡಗಳಿಲ್ಲ. ನನ್ನ ಬಗ್ಗೆ ನೀವು ಮೆಚ್ಚುಗೆ ಸೂಚಿಸಲು ಸಾಧ್ಯವಾಗದೇ ಇದ್ದರೆ ಕನಿಷ್ಠ ನನ್ನಿಂದ ದೂರವಿರಿ. ಸಂಬಂಧವಿಲ್ಲದ ವಿಷಯಗಳಲ್ಲಿ ನನ್ನ ಹೆಸರನ್ನು ಎಳೆದು ತರಬೇಡಿ. ದಯವಿಟ್ಟು ಮನುಷ್ಯರಂತೆ ವರ್ತಿಸಿ. ನನಗೊಂದು ಕುಟುಂಬವಿದೆ. ದಯವಿಟ್ಟು ಇದನ್ನು ಇಲ್ಲಿಗೆ ನಿಲ್ಲಿಸಿ, ನನ್ನ ಪಾಡಿಗೆ ನನ್ನ ಬಿಟ್ಟುಬಿಡಿ’ ಎಂದು ಅನಸೂಯಾ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ