Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ

‘ಕಂಗುವ’ ಸಿನಿಮಾದ ಮೊದಲ 20 ನಿಮಿಷ ಸಾಕಷ್ಟು ಕಷ್ಟವಾಗಿತ್ತು ಎಂದು ಅನೇಕರು ಹೇಳಿಕೊಂಡಿದ್ದು ಇದೆ. ಅಲ್ಲದೆ, ಸಿನಿಮಾದ ಸೌಂಡ್​ನಿಂದಾಗಿ ತಲೆನೋವು ಬಂದಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ, ನಿರ್ಮಾಪಕರು ಹೊಸ ಬೇಡಿಕೆ ಇಟ್ಟಿದ್ದಾರೆ.

‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ
ಕಂಗುವ
Follow us
ರಾಜೇಶ್ ದುಗ್ಗುಮನೆ
|

Updated on: Nov 16, 2024 | 12:54 PM

ಸೂರ್ಯ ನಟನೆಯ ‘ಕಂಗುವ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಲೇ ಇಲ್ಲ. ಚಿತ್ರ ಡಿಸಾಸ್ಟರ್ ಎನಿಸಿಕೊಂಡಿದೆ. ಈ ಚಿತ್ರ ಸಾಕಷ್ಟು ಟೀಕೆಗಳನ್ನು ಎದುರಿಸಿದೆ. ಹೀಗಿರುವಾಗಲೇ ‘ಕಂಗುವ’ ನಿರ್ಮಾಪಕರು ಥಿಯೇಟರ್ ಮಾಲೀಕರ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಕಾಣುವಾಗ ಕಡಿಮೆ ವಾಲ್ಯೂಮ್ ಇಡಲು ಅವರು ಕೋರಿದ್ದಾರೆ.

‘ಕಂಗುವ’ ಚಿತ್ರ ನವೆಂಬರ್ 14ರಂದು ರಿಲೀಸ್ ಆಯಿತು. ಈ ಚಿತ್ರ ಟ್ರೇಲರ್ ಮೂಲಕ ಸಾಕಷ್ಟು ಸದ್ದು ಮಾಡಿತ್ತು. ಆದರೆ, ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿಲ್ಲ. ‘ಸೂರ್ಯ ವೃತ್ತಿ ಜೀವನದಲ್ಲೇ ಇದು ಅತಿ ಕಳಪೆ ಸಿನಿಮಾ’ ಎಂಬ ಅಪಕೀರ್ತಿ ಈ ಚಿತ್ರಕ್ಕೆ ಸಿಕ್ಕಿದೆ. ಸಿನಿಮಾದ ಬಿಜಿಎಂಗೂ ಕೆಲವರು ಟೀಕೆ ಹೊರಹಾಕಿದ್ದರು. ಸಂಗೀತ ಸಂಯೋಜಕ ದೇವಿಶ್ರೀ ಪ್ರಸಾದ್ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಇದಕ್ಕೆ ನಿರ್ಮಾಪಕ ಜ್ಞಾನವೇಲ್ ರಾಜು ಸ್ಪಷ್ಟನೆ ನೀಡಿದ್ದಾರೆ.

ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು, ‘ನಾವು ಪ್ರದರ್ಶಕರ ಬಳಿ ಈ ಬಗ್ಗೆ ಮನವಿ ಮಾಡಿದ್ದೇವೆ. ಥಿಯೇಟರ್​ನಲ್ಲಿ ಸೌಂಡ್​ನ ಎರಡು ಪಾಯಿಂಟ್ ಕಡಿಮೆ ಇಡುವಂತೆ ಕೇಳಿದ್ದೇವೆ. ಸೌಂಡ್ ತುಂಬಾನೇ ಕರ್ಕಶವಾಗಿದೆ ಎಂದು ಕೆಲವರು ದೂರಿದ್ದಾರೆ. ಹೀಗಾಗಿ, ಈ ಕೋರಿಕೆ ಇಟ್ಟಿದ್ದೇವೆ’ ಎಂದು ಅವರು ಹೇಳಿದ್ದೇವೆ’ ಎಂದಿದ್ದಾರೆ ಅವರು.

ಹಾಗಾದರೆ ಇದು ಸಂಗೀತ ಸಂಯೋಜಕರ ತಪ್ಪಾ? ಅಲ್ಲ ಎನ್ನುತ್ತಾರೆ ಜ್ಞಾನವೇಲ್ ರಾಜು. ‘ಇದರಲ್ಲಿ ದೇವಿಶ್ರೀ ಪ್ರಸಾದ್ ಅವರ ತಪ್ಪಿಲ್ಲ. ತೊಂದರೆ ಆಗಿರೋದು ಸೌಂಡ್ ಮಿಕ್ಸಿಂಗ್​ನಲ್ಲಿ. ಅದನ್ನು ಶೀಘ್ರವೇ ಸರಿ ಮಾಡುತ್ತೇವೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್

ಸಿನಿಮಾದ ಮೊದಲ 20 ನಿಮಿಷ ಸಾಕಷ್ಟು ಕಷ್ಟವಾಗಿತ್ತು ಎಂದು ಅನೇಕರು ಹೇಳಿಕೊಂಡಿದ್ದು ಇದೆ. ಅಲ್ಲದೆ, ಸಿನಿಮಾದ ಸೌಂಡ್​ನಿಂದಾಗಿ ತಲೆನೋವು ಬಂದಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದರು. ಪರಭಾಷೆಯವರು ಸಿನಿಮಾ ಬಗ್ಗೆ ನೆಗೆಟಿವ್ ಟಾಕ್ ಹೊರಹಾಕಿದ್ದರು. ಇದು ಚಿತ್ರಕ್ಕೆ ಸಮಸ್ಯೆ ಉಂಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!