AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ

‘ಕಂಗುವ’ ಸಿನಿಮಾದ ಮೊದಲ 20 ನಿಮಿಷ ಸಾಕಷ್ಟು ಕಷ್ಟವಾಗಿತ್ತು ಎಂದು ಅನೇಕರು ಹೇಳಿಕೊಂಡಿದ್ದು ಇದೆ. ಅಲ್ಲದೆ, ಸಿನಿಮಾದ ಸೌಂಡ್​ನಿಂದಾಗಿ ತಲೆನೋವು ಬಂದಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ, ನಿರ್ಮಾಪಕರು ಹೊಸ ಬೇಡಿಕೆ ಇಟ್ಟಿದ್ದಾರೆ.

‘ಸಿನಿಮಾ ಸೌಂಡ್ ಕಡಿಮೆ ಮಾಡಿ’; ಥಿಯೇಟರ್ ಮಾಲೀಕರ ಬಳಿ ‘ಕಂಗುವ’ ನಿರ್ಮಾಪಕನ ಮನವಿ
ಕಂಗುವ
ರಾಜೇಶ್ ದುಗ್ಗುಮನೆ
|

Updated on: Nov 16, 2024 | 12:54 PM

Share

ಸೂರ್ಯ ನಟನೆಯ ‘ಕಂಗುವ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಲೇ ಇಲ್ಲ. ಚಿತ್ರ ಡಿಸಾಸ್ಟರ್ ಎನಿಸಿಕೊಂಡಿದೆ. ಈ ಚಿತ್ರ ಸಾಕಷ್ಟು ಟೀಕೆಗಳನ್ನು ಎದುರಿಸಿದೆ. ಹೀಗಿರುವಾಗಲೇ ‘ಕಂಗುವ’ ನಿರ್ಮಾಪಕರು ಥಿಯೇಟರ್ ಮಾಲೀಕರ ಬಳಿ ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಕಾಣುವಾಗ ಕಡಿಮೆ ವಾಲ್ಯೂಮ್ ಇಡಲು ಅವರು ಕೋರಿದ್ದಾರೆ.

‘ಕಂಗುವ’ ಚಿತ್ರ ನವೆಂಬರ್ 14ರಂದು ರಿಲೀಸ್ ಆಯಿತು. ಈ ಚಿತ್ರ ಟ್ರೇಲರ್ ಮೂಲಕ ಸಾಕಷ್ಟು ಸದ್ದು ಮಾಡಿತ್ತು. ಆದರೆ, ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿಲ್ಲ. ‘ಸೂರ್ಯ ವೃತ್ತಿ ಜೀವನದಲ್ಲೇ ಇದು ಅತಿ ಕಳಪೆ ಸಿನಿಮಾ’ ಎಂಬ ಅಪಕೀರ್ತಿ ಈ ಚಿತ್ರಕ್ಕೆ ಸಿಕ್ಕಿದೆ. ಸಿನಿಮಾದ ಬಿಜಿಎಂಗೂ ಕೆಲವರು ಟೀಕೆ ಹೊರಹಾಕಿದ್ದರು. ಸಂಗೀತ ಸಂಯೋಜಕ ದೇವಿಶ್ರೀ ಪ್ರಸಾದ್ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಇದಕ್ಕೆ ನಿರ್ಮಾಪಕ ಜ್ಞಾನವೇಲ್ ರಾಜು ಸ್ಪಷ್ಟನೆ ನೀಡಿದ್ದಾರೆ.

ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು, ‘ನಾವು ಪ್ರದರ್ಶಕರ ಬಳಿ ಈ ಬಗ್ಗೆ ಮನವಿ ಮಾಡಿದ್ದೇವೆ. ಥಿಯೇಟರ್​ನಲ್ಲಿ ಸೌಂಡ್​ನ ಎರಡು ಪಾಯಿಂಟ್ ಕಡಿಮೆ ಇಡುವಂತೆ ಕೇಳಿದ್ದೇವೆ. ಸೌಂಡ್ ತುಂಬಾನೇ ಕರ್ಕಶವಾಗಿದೆ ಎಂದು ಕೆಲವರು ದೂರಿದ್ದಾರೆ. ಹೀಗಾಗಿ, ಈ ಕೋರಿಕೆ ಇಟ್ಟಿದ್ದೇವೆ’ ಎಂದು ಅವರು ಹೇಳಿದ್ದೇವೆ’ ಎಂದಿದ್ದಾರೆ ಅವರು.

ಹಾಗಾದರೆ ಇದು ಸಂಗೀತ ಸಂಯೋಜಕರ ತಪ್ಪಾ? ಅಲ್ಲ ಎನ್ನುತ್ತಾರೆ ಜ್ಞಾನವೇಲ್ ರಾಜು. ‘ಇದರಲ್ಲಿ ದೇವಿಶ್ರೀ ಪ್ರಸಾದ್ ಅವರ ತಪ್ಪಿಲ್ಲ. ತೊಂದರೆ ಆಗಿರೋದು ಸೌಂಡ್ ಮಿಕ್ಸಿಂಗ್​ನಲ್ಲಿ. ಅದನ್ನು ಶೀಘ್ರವೇ ಸರಿ ಮಾಡುತ್ತೇವೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಭೈರತಿ’, ‘ಅಮರನ್’ ಹೊಡೆತಕ್ಕೆ ತತ್ತರಿಸಿದ ‘ಕಂಗುವ’; ಒಂದಂಕಿಗೆ ಬಂದ ಕಲೆಕ್ಷನ್

ಸಿನಿಮಾದ ಮೊದಲ 20 ನಿಮಿಷ ಸಾಕಷ್ಟು ಕಷ್ಟವಾಗಿತ್ತು ಎಂದು ಅನೇಕರು ಹೇಳಿಕೊಂಡಿದ್ದು ಇದೆ. ಅಲ್ಲದೆ, ಸಿನಿಮಾದ ಸೌಂಡ್​ನಿಂದಾಗಿ ತಲೆನೋವು ಬಂದಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದರು. ಪರಭಾಷೆಯವರು ಸಿನಿಮಾ ಬಗ್ಗೆ ನೆಗೆಟಿವ್ ಟಾಕ್ ಹೊರಹಾಕಿದ್ದರು. ಇದು ಚಿತ್ರಕ್ಕೆ ಸಮಸ್ಯೆ ಉಂಟು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್