AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು

ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. ಆಡಿಟ್ ವರದಿಯ ಪ್ರಕಾರ ವಿಶಾಲ್ 12 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು
ವಿಶಾಲ್
ರಾಜೇಶ್ ದುಗ್ಗುಮನೆ
|

Updated on: Jul 27, 2024 | 1:11 PM

Share

ಕಾಲಿವುಡ್ ನಟ ವಿಶಾಲ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಅವರು 2017ರಲ್ಲಿ ಅವರು ತಮಿಳು ಸಿನಿಮಾ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದರು. ಈಗ ಅವರನ್ನು ಬದಲಿಸಲಾಗಿದೆ. ಈ ಜಾಗಕ್ಕೆ ಮುರಳಿ ರಾಮಸ್ವಾಮಿ ಅವರು ಬಂದಿದ್ದಾರೆ. ಕೌನ್ಸಿಲ್ ಹಣವನ್ನು ವಿಶಾಲ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪವನ್ನು ರಾಮಸ್ವಾಮಿ ಮಾಡಿದ್ದಾರೆ. ಈ ವಿಚಾರದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ಇದರ ವಿರುದ್ಧ ವಿಶಾಲ್ ಕಿಡಿ ಕಾರಿದ್ದಾರೆ.

‘ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. 2019ರಲ್ಲಿ ತಮಿಳುನಾಡು ಸರ್ಕಾರ ವಿಶೇಷ ಅಧಿಕಾರಿಯನ್ನು ಈ ಪ್ರಕರಣದಲ್ಲಿ ನೇಮಕ ಮಾಡಿತ್ತು. ಲೆಕ್ಕವನ್ನು ನೋಡಿದಾಗ ಸುಮಾರು 12 ಕೋಟಿ ರೂಪಾಯಿ ದುರ್ಬಳಕೆ ಆಗಿರೋದು ತಿಳಿದು ಬಂದಿದೆ. 7.5 ಕೋಟಿ ರೂಪಾಯಿ ಹಣ ಕೌನ್ಸಿಲ್ ಬ್ಯಾಂಕ್​ನಿಂದ ಹಾಗೂ ಇನ್ನು ಉಳಿದ ಐದು ಕೋಟಿ ರೂಪಾಯಿ ಹಣವನ್ನು ಆದಾಯ ಮತ್ತು ವೆಚ್ಚದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಹಿಂದಿರುಗಿಸುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು, ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಕೌನ್ಸಿಲ್ ಹೇಳಿದೆ.

ಇದಕ್ಕೆ ವಿಶಾಲ್ ಅವರು ಖಡಕ್ ಉತ್ತರ ನೀಡಿದ್ದಾರೆ. ‘ಎಲ್ಲ ಹಣವು ನಿರ್ಮಾಪಕರ ಕೌನ್ಸಿಲ್​ನಲ್ಲಿರುವ ವಯಸ್ಸಾದ ಹಾಗೂ ಕಷ್ಟಪಡುತ್ತಿರುವ ಸದಸ್ಯರ ಕಲ್ಯಾಣಕ್ಕಾಗಿ ಬಳಕೆ ಮಾಡಲಾಗಿದೆ. ನಾವು ಮಾಡಿದ ಕೆಲಸದಿಂದ ಸದಸ್ಯರಿಗೆ ಹಾಗೂ ಸದಸ್ಯರ ಕುಟುಂಬಕ್ಕೆ ಸಹಾಯ ಆಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

‘ನಿಮ್ಮ ಕೆಲಸವನ್ನು ನೀವು ಸರಿಯಾಗಿ ಮಾಡಿ. ಸಿನಿಮಾ ಇಂಡಸ್ಟ್ರಿಯಲ್ಲಿ ಮಾಡೋಕೆ ಸಾಕಷ್ಟು ಕೆಲಸ ಇದೆ. ದ್ವಿಗುಣ ತೆರಿಗೆ, ಥಿಯೇಟರ್​ಗಳ ನಿರ್ವಹಣೆ ವೆಚ್ಛ ಹೀಗೆ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಈ ವಿಶಾಲ್ ಸಿನಿಮಾ ಮಾಡೋದನ್ನು ಯಾವಾಗಲೂ ಮುಂದುವರಿಸುತ್ತಾರೆ. ಯಾರಾದರೂ ನನ್ನನ್ನು ತಡೆಯೋದಾದರೆ ತಡೆಯಲಿ. ನೀವೆಲ್ಲ ಹೆಸರಿಗಷ್ಟೇ ನಿರ್ಮಾಪಕರು, ಯಾವುದೇ ಸಿನಿಮಾ ಮಾಡಲ್ಲ. ಅಭಿವೃದ್ಧಿ ಕಡೆ ಗಮನ ಹರಿಸಿ’ ಎಂದು ವಿಶಾಲ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ