ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು

ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. ಆಡಿಟ್ ವರದಿಯ ಪ್ರಕಾರ ವಿಶಾಲ್ 12 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು
ವಿಶಾಲ್
Follow us
|

Updated on: Jul 27, 2024 | 1:11 PM

ಕಾಲಿವುಡ್ ನಟ ವಿಶಾಲ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಅವರು 2017ರಲ್ಲಿ ಅವರು ತಮಿಳು ಸಿನಿಮಾ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದರು. ಈಗ ಅವರನ್ನು ಬದಲಿಸಲಾಗಿದೆ. ಈ ಜಾಗಕ್ಕೆ ಮುರಳಿ ರಾಮಸ್ವಾಮಿ ಅವರು ಬಂದಿದ್ದಾರೆ. ಕೌನ್ಸಿಲ್ ಹಣವನ್ನು ವಿಶಾಲ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪವನ್ನು ರಾಮಸ್ವಾಮಿ ಮಾಡಿದ್ದಾರೆ. ಈ ವಿಚಾರದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ಇದರ ವಿರುದ್ಧ ವಿಶಾಲ್ ಕಿಡಿ ಕಾರಿದ್ದಾರೆ.

‘ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. 2019ರಲ್ಲಿ ತಮಿಳುನಾಡು ಸರ್ಕಾರ ವಿಶೇಷ ಅಧಿಕಾರಿಯನ್ನು ಈ ಪ್ರಕರಣದಲ್ಲಿ ನೇಮಕ ಮಾಡಿತ್ತು. ಲೆಕ್ಕವನ್ನು ನೋಡಿದಾಗ ಸುಮಾರು 12 ಕೋಟಿ ರೂಪಾಯಿ ದುರ್ಬಳಕೆ ಆಗಿರೋದು ತಿಳಿದು ಬಂದಿದೆ. 7.5 ಕೋಟಿ ರೂಪಾಯಿ ಹಣ ಕೌನ್ಸಿಲ್ ಬ್ಯಾಂಕ್​ನಿಂದ ಹಾಗೂ ಇನ್ನು ಉಳಿದ ಐದು ಕೋಟಿ ರೂಪಾಯಿ ಹಣವನ್ನು ಆದಾಯ ಮತ್ತು ವೆಚ್ಚದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಹಿಂದಿರುಗಿಸುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು, ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಕೌನ್ಸಿಲ್ ಹೇಳಿದೆ.

ಇದಕ್ಕೆ ವಿಶಾಲ್ ಅವರು ಖಡಕ್ ಉತ್ತರ ನೀಡಿದ್ದಾರೆ. ‘ಎಲ್ಲ ಹಣವು ನಿರ್ಮಾಪಕರ ಕೌನ್ಸಿಲ್​ನಲ್ಲಿರುವ ವಯಸ್ಸಾದ ಹಾಗೂ ಕಷ್ಟಪಡುತ್ತಿರುವ ಸದಸ್ಯರ ಕಲ್ಯಾಣಕ್ಕಾಗಿ ಬಳಕೆ ಮಾಡಲಾಗಿದೆ. ನಾವು ಮಾಡಿದ ಕೆಲಸದಿಂದ ಸದಸ್ಯರಿಗೆ ಹಾಗೂ ಸದಸ್ಯರ ಕುಟುಂಬಕ್ಕೆ ಸಹಾಯ ಆಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

‘ನಿಮ್ಮ ಕೆಲಸವನ್ನು ನೀವು ಸರಿಯಾಗಿ ಮಾಡಿ. ಸಿನಿಮಾ ಇಂಡಸ್ಟ್ರಿಯಲ್ಲಿ ಮಾಡೋಕೆ ಸಾಕಷ್ಟು ಕೆಲಸ ಇದೆ. ದ್ವಿಗುಣ ತೆರಿಗೆ, ಥಿಯೇಟರ್​ಗಳ ನಿರ್ವಹಣೆ ವೆಚ್ಛ ಹೀಗೆ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಈ ವಿಶಾಲ್ ಸಿನಿಮಾ ಮಾಡೋದನ್ನು ಯಾವಾಗಲೂ ಮುಂದುವರಿಸುತ್ತಾರೆ. ಯಾರಾದರೂ ನನ್ನನ್ನು ತಡೆಯೋದಾದರೆ ತಡೆಯಲಿ. ನೀವೆಲ್ಲ ಹೆಸರಿಗಷ್ಟೇ ನಿರ್ಮಾಪಕರು, ಯಾವುದೇ ಸಿನಿಮಾ ಮಾಡಲ್ಲ. ಅಭಿವೃದ್ಧಿ ಕಡೆ ಗಮನ ಹರಿಸಿ’ ಎಂದು ವಿಶಾಲ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ