AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು

ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. ಆಡಿಟ್ ವರದಿಯ ಪ್ರಕಾರ ವಿಶಾಲ್ 12 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು
ವಿಶಾಲ್
Follow us
ರಾಜೇಶ್ ದುಗ್ಗುಮನೆ
|

Updated on: Jul 27, 2024 | 1:11 PM

ಕಾಲಿವುಡ್ ನಟ ವಿಶಾಲ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಅವರು 2017ರಲ್ಲಿ ಅವರು ತಮಿಳು ಸಿನಿಮಾ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದರು. ಈಗ ಅವರನ್ನು ಬದಲಿಸಲಾಗಿದೆ. ಈ ಜಾಗಕ್ಕೆ ಮುರಳಿ ರಾಮಸ್ವಾಮಿ ಅವರು ಬಂದಿದ್ದಾರೆ. ಕೌನ್ಸಿಲ್ ಹಣವನ್ನು ವಿಶಾಲ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪವನ್ನು ರಾಮಸ್ವಾಮಿ ಮಾಡಿದ್ದಾರೆ. ಈ ವಿಚಾರದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ಇದರ ವಿರುದ್ಧ ವಿಶಾಲ್ ಕಿಡಿ ಕಾರಿದ್ದಾರೆ.

‘ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. 2019ರಲ್ಲಿ ತಮಿಳುನಾಡು ಸರ್ಕಾರ ವಿಶೇಷ ಅಧಿಕಾರಿಯನ್ನು ಈ ಪ್ರಕರಣದಲ್ಲಿ ನೇಮಕ ಮಾಡಿತ್ತು. ಲೆಕ್ಕವನ್ನು ನೋಡಿದಾಗ ಸುಮಾರು 12 ಕೋಟಿ ರೂಪಾಯಿ ದುರ್ಬಳಕೆ ಆಗಿರೋದು ತಿಳಿದು ಬಂದಿದೆ. 7.5 ಕೋಟಿ ರೂಪಾಯಿ ಹಣ ಕೌನ್ಸಿಲ್ ಬ್ಯಾಂಕ್​ನಿಂದ ಹಾಗೂ ಇನ್ನು ಉಳಿದ ಐದು ಕೋಟಿ ರೂಪಾಯಿ ಹಣವನ್ನು ಆದಾಯ ಮತ್ತು ವೆಚ್ಚದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಹಿಂದಿರುಗಿಸುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು, ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಕೌನ್ಸಿಲ್ ಹೇಳಿದೆ.

ಇದಕ್ಕೆ ವಿಶಾಲ್ ಅವರು ಖಡಕ್ ಉತ್ತರ ನೀಡಿದ್ದಾರೆ. ‘ಎಲ್ಲ ಹಣವು ನಿರ್ಮಾಪಕರ ಕೌನ್ಸಿಲ್​ನಲ್ಲಿರುವ ವಯಸ್ಸಾದ ಹಾಗೂ ಕಷ್ಟಪಡುತ್ತಿರುವ ಸದಸ್ಯರ ಕಲ್ಯಾಣಕ್ಕಾಗಿ ಬಳಕೆ ಮಾಡಲಾಗಿದೆ. ನಾವು ಮಾಡಿದ ಕೆಲಸದಿಂದ ಸದಸ್ಯರಿಗೆ ಹಾಗೂ ಸದಸ್ಯರ ಕುಟುಂಬಕ್ಕೆ ಸಹಾಯ ಆಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

‘ನಿಮ್ಮ ಕೆಲಸವನ್ನು ನೀವು ಸರಿಯಾಗಿ ಮಾಡಿ. ಸಿನಿಮಾ ಇಂಡಸ್ಟ್ರಿಯಲ್ಲಿ ಮಾಡೋಕೆ ಸಾಕಷ್ಟು ಕೆಲಸ ಇದೆ. ದ್ವಿಗುಣ ತೆರಿಗೆ, ಥಿಯೇಟರ್​ಗಳ ನಿರ್ವಹಣೆ ವೆಚ್ಛ ಹೀಗೆ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಈ ವಿಶಾಲ್ ಸಿನಿಮಾ ಮಾಡೋದನ್ನು ಯಾವಾಗಲೂ ಮುಂದುವರಿಸುತ್ತಾರೆ. ಯಾರಾದರೂ ನನ್ನನ್ನು ತಡೆಯೋದಾದರೆ ತಡೆಯಲಿ. ನೀವೆಲ್ಲ ಹೆಸರಿಗಷ್ಟೇ ನಿರ್ಮಾಪಕರು, ಯಾವುದೇ ಸಿನಿಮಾ ಮಾಡಲ್ಲ. ಅಭಿವೃದ್ಧಿ ಕಡೆ ಗಮನ ಹರಿಸಿ’ ಎಂದು ವಿಶಾಲ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಮ್ಮಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕಿಸ್ತಾನಿ ಹಿಂದೂಗಳು
ನಮ್ಮಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕಿಸ್ತಾನಿ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ