AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು

ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. ಆಡಿಟ್ ವರದಿಯ ಪ್ರಕಾರ ವಿಶಾಲ್ 12 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಳ್ಳೇದು ಮಾಡ್ತೀನಿ ಎಂದು ಹಣ ನುಂಗಿದ್ರಾ ವಿಶಾಲ್? ಗಂಭೀರ ಆರೋಪಕ್ಕೆ ತಿರುಗೇಟು
ವಿಶಾಲ್
ರಾಜೇಶ್ ದುಗ್ಗುಮನೆ
|

Updated on: Jul 27, 2024 | 1:11 PM

Share

ಕಾಲಿವುಡ್ ನಟ ವಿಶಾಲ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿ ಬಂದಿದೆ. ಅವರು 2017ರಲ್ಲಿ ಅವರು ತಮಿಳು ಸಿನಿಮಾ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದರು. ಈಗ ಅವರನ್ನು ಬದಲಿಸಲಾಗಿದೆ. ಈ ಜಾಗಕ್ಕೆ ಮುರಳಿ ರಾಮಸ್ವಾಮಿ ಅವರು ಬಂದಿದ್ದಾರೆ. ಕೌನ್ಸಿಲ್ ಹಣವನ್ನು ವಿಶಾಲ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪವನ್ನು ರಾಮಸ್ವಾಮಿ ಮಾಡಿದ್ದಾರೆ. ಈ ವಿಚಾರದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ಇದರ ವಿರುದ್ಧ ವಿಶಾಲ್ ಕಿಡಿ ಕಾರಿದ್ದಾರೆ.

‘ವಿಶಾಲ್ ಅವರು 2017ರಿಂದ 2019ರವರೆಗೆ ತಮಿಳುನಾಡು ಸಿನಿಮಾ ನಿರ್ಮಾಪಕರ ಕೌನ್ಸಿಲ್​ನ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಹಣ ದುರ್ಬಳಕೆ ಆರೋಪ ಬಂದಿದೆ. 2019ರಲ್ಲಿ ತಮಿಳುನಾಡು ಸರ್ಕಾರ ವಿಶೇಷ ಅಧಿಕಾರಿಯನ್ನು ಈ ಪ್ರಕರಣದಲ್ಲಿ ನೇಮಕ ಮಾಡಿತ್ತು. ಲೆಕ್ಕವನ್ನು ನೋಡಿದಾಗ ಸುಮಾರು 12 ಕೋಟಿ ರೂಪಾಯಿ ದುರ್ಬಳಕೆ ಆಗಿರೋದು ತಿಳಿದು ಬಂದಿದೆ. 7.5 ಕೋಟಿ ರೂಪಾಯಿ ಹಣ ಕೌನ್ಸಿಲ್ ಬ್ಯಾಂಕ್​ನಿಂದ ಹಾಗೂ ಇನ್ನು ಉಳಿದ ಐದು ಕೋಟಿ ರೂಪಾಯಿ ಹಣವನ್ನು ಆದಾಯ ಮತ್ತು ವೆಚ್ಚದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಹಿಂದಿರುಗಿಸುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು, ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಕೌನ್ಸಿಲ್ ಹೇಳಿದೆ.

ಇದಕ್ಕೆ ವಿಶಾಲ್ ಅವರು ಖಡಕ್ ಉತ್ತರ ನೀಡಿದ್ದಾರೆ. ‘ಎಲ್ಲ ಹಣವು ನಿರ್ಮಾಪಕರ ಕೌನ್ಸಿಲ್​ನಲ್ಲಿರುವ ವಯಸ್ಸಾದ ಹಾಗೂ ಕಷ್ಟಪಡುತ್ತಿರುವ ಸದಸ್ಯರ ಕಲ್ಯಾಣಕ್ಕಾಗಿ ಬಳಕೆ ಮಾಡಲಾಗಿದೆ. ನಾವು ಮಾಡಿದ ಕೆಲಸದಿಂದ ಸದಸ್ಯರಿಗೆ ಹಾಗೂ ಸದಸ್ಯರ ಕುಟುಂಬಕ್ಕೆ ಸಹಾಯ ಆಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಕಂಗನಾಗೆ ಹೊಡೆದ ಮಹಿಳೆಗೆ ನಾನು ಕೆಲಸ ಕೊಡ್ತೀನಿ’: ಗಾಯಕ ವಿಶಾಲ್​ ದದ್ಲಾನಿ

‘ನಿಮ್ಮ ಕೆಲಸವನ್ನು ನೀವು ಸರಿಯಾಗಿ ಮಾಡಿ. ಸಿನಿಮಾ ಇಂಡಸ್ಟ್ರಿಯಲ್ಲಿ ಮಾಡೋಕೆ ಸಾಕಷ್ಟು ಕೆಲಸ ಇದೆ. ದ್ವಿಗುಣ ತೆರಿಗೆ, ಥಿಯೇಟರ್​ಗಳ ನಿರ್ವಹಣೆ ವೆಚ್ಛ ಹೀಗೆ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಈ ವಿಶಾಲ್ ಸಿನಿಮಾ ಮಾಡೋದನ್ನು ಯಾವಾಗಲೂ ಮುಂದುವರಿಸುತ್ತಾರೆ. ಯಾರಾದರೂ ನನ್ನನ್ನು ತಡೆಯೋದಾದರೆ ತಡೆಯಲಿ. ನೀವೆಲ್ಲ ಹೆಸರಿಗಷ್ಟೇ ನಿರ್ಮಾಪಕರು, ಯಾವುದೇ ಸಿನಿಮಾ ಮಾಡಲ್ಲ. ಅಭಿವೃದ್ಧಿ ಕಡೆ ಗಮನ ಹರಿಸಿ’ ಎಂದು ವಿಶಾಲ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​