AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಿಯ ಕ್ರೂರ ತಿರುವು ಇದು: ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ, ಹಳೇ ಫೋಟೋ ಟ್ವೀಟ್​​

Puneeth Rajkumar Death: 2019ರ ಲೋಕಸಭೆ ಚುನಾವಣೆ ಪೂರ್ವ 2018ರ ಮೇ ತಿಂಗಳಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿ, ಮೂರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ಮೋದಿಯವರನ್ನು ಪುನೀತ್ ರಾಜ್​ಕುಮಾರ್ ಭೇಟಿಯಾಗಿದ್ದರು. 

ವಿಧಿಯ ಕ್ರೂರ ತಿರುವು ಇದು: ಪುನೀತ್​ ರಾಜ್​ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ, ಹಳೇ ಫೋಟೋ ಟ್ವೀಟ್​​
ಹಳೇ ಫೋಟೋ ಶೇರ್ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Oct 29, 2021 | 5:07 PM

Share

ಸ್ಯಾಂಡಲ್​ವುಡ್​ ಖ್ಯಾತ ನಟ ಪುನೀತ್ ರಾಜ್​ಕುಮಾರ್ (Puneeth Rajkumar)​ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಸಂತಾಪ ಸೂಚಿಸಿದ್ದಾರೆ. ಏರ್​ಪೋರ್ಟ್​ವೊಂದರಲ್ಲಿ ಪುನೀತ್​ ರಾಜಕುಮಾರ್​ ದಂಪತಿಯೊಟ್ಟಿಗೆ ನಿಂತುಕೊಂಡಿರುವ ಫೋಟೋ ಶೇರ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಧಿಯ ಕ್ರೂರ ತಿರುವೊಂದು ಪ್ರತಿಭಾವಂತ ನಟ ಪುನೀತ್​ ರಾಜ್​ಕುಮಾರ್​ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ. ಅವರದ್ದು ಸಾಯುವ ವಯಸ್ಸಲ್ಲ. ಪುನೀತ್​ ಅವರನ್ನು ಮುಂಬರುವ ಪೀಳಿಗೆ ಸದಾ ನೆನಪಲ್ಲಿಟ್ಟುಕೊಳ್ಳುತ್ತದೆ. ಅಂಥ ಅದ್ಭುತ ಕೆಲಸಗಳನ್ನು ಅವರು ಮಾಡಿದ್ದಾರೆ. ನಿಜಕ್ಕೂ ಅವರದ್ದು ಅದ್ಭುತ ವ್ಯಕ್ತಿತ್ವ. ಪುನೀತ್ ಸಾವಿನ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ. ಓಂ ಶಾಂತಿ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.  

ನಟ ಪುನೀತ್​ ರಾಜ್​ಕುಮಾರ್ 2018ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು.  2019ರ ಲೋಕಸಭೆ ಚುನಾವಣೆ ಪೂರ್ವ 2018ರ ಮೇ ತಿಂಗಳಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿ, ಮೂರು ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ಮೋದಿಯವರನ್ನು ಪುನೀತ್ ರಾಜ್​ಕುಮಾರ್ ಭೇಟಿಯಾಗಿದ್ದರು.   ತಂದೆ ನಟ ರಾಜ್​ಕುಮಾರ್​ ಅವರ ಬಗ್ಗೆ ತಾವು ಬರೆದ ಪುಸ್ತಕವನ್ನು ಪ್ರಧಾನಿಯವರಿಗೆ ನೀಡಿದ್ದರು. ಈ ವೇಳೆ ಪತ್ನಿ ಅಶ್ವಿನಿ ಕೂಡ ಜತೆಗಿದ್ದರು. ನಂತರ ಫೋಟೋ ಟ್ವೀಟ್ ಮಾಡಿದ್ದ ಪುನೀತ್ ರಾಜ್​ಕುಮಾರ್​, ನಮ್ಮ ಕ್ರಿಯಾಶೀಲ ಪ್ರಧಾನಮಂತ್ರಿಯವರನ್ನು ಭೇಟಿಯಾಗುವ ಅದ್ಭುತ ಅವಕಾಶ ನನಗೆ ಸಿಕ್ಕಿತ್ತು. ನಾನು ನನ್ನ ಅಪ್ಪಾಜಿಯವರ ಬಗ್ಗೆ ಬರೆದ ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ ಎಂಬ ಪುಸ್ತಕವನ್ನು ಅವರಿಗೆ ನೀಡಿದೆ. ಅವರದನ್ನು ತುಂಬ ಪ್ರೀತಿಯಿಂದ ಸ್ವೀಕರಿಸಿದರು.  ನಮ್ಮ ಇಡೀ ಕುಟುಂಬಕ್ಕೆ ಶುಭ ಹಾರೈಸಿದರು ಎಂದು ಹೇಳಿಕೊಂಡಿದ್ದರು. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಅದೇ ಫೋಟೋವನ್ನು ಶೇರ್ ಮಾಡಿಕೊಂಡು ಪುನೀತ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Puneeth Rajkumar Songs: ಕಾಣದಂತೆ ಮಾಯವಾದನು!; ಪುನೀತ್ ರಾಜ್​ಕುಮಾರ್ ಹಾಡಿದ ಟಾಪ್ 20 ಹಾಡುಗಳಿವು

Puneeth Rajkumar last rites: ಪುನೀತ್​ ರಾಜ್​ ಕುಮಾರ್ ಅಂತ್ಯಕ್ರಿಯೆ ಭಾನುವಾರ ಫಾರ್ಮ್​ ಹೌಸ್​ನಲ್ಲಿ ನಡೆಯುವ ಸಾಧ್ಯತೆ

Published On - 4:51 pm, Fri, 29 October 21

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ