AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ; ಸಿನಿಮಾದಲ್ಲಿ ಏನಿದೆ?

ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಈ ಸಿನಿಮಾ ವೀಕ್ಷಿಸಲಿದ್ದಾರೆ. ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಚಿತ್ರವನ್ನು ವೀಕ್ಷಿಸಲಿದ್ದಾರೆ.  

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ; ಸಿನಿಮಾದಲ್ಲಿ ಏನಿದೆ?
ವಿಕ್ರಾಂತ್ ಮಾಸಿ
ರಾಜೇಶ್ ದುಗ್ಗುಮನೆ
|

Updated on:Dec 02, 2024 | 12:27 PM

Share

ಇತ್ತೀಚೆಗೆ ರಿಲೀಸ್ ಆದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾದಲ್ಲಿ ವಿಕ್ರಾಂತ್ ಮಾಸ್ಸಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾನ ಬಾಕ್ಸ್ ಆಫೀಸ್​ನಲ್ಲೂ ಉತ್ತಮ ಗಳಿಕೆ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾ ವೀಕ್ಷಿಸಲಿದ್ದಾರೆ. ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಇಂದು (ಡಿಸೆಂಬರ್ 2) ಸಂಜೆ ಸಿನಿಮಾ ವೀಕ್ಷಿಸಲಿದ್ದಾರೆ.

2002ರ ಫೆಬ್ರವರಿ 27ರಂದು ಸೆನ್ಸೇಷನಲ್ ಘಟನೆ ನಡೆದಿತ್ತು. ಕರಸೇವಕರು ಪ್ರಯಾಣ ಮಾಡುತ್ತಿದ್ದ ಸಾಬರಮತಿ ಎಕ್ಸ್​​ಪ್ರೆಸ್​ ರೈಲಿನ ಎಸ್​-6 ಕೋಚ್​ಗೆ ಗುಜರಾತ್​ನ ಗೋದ್ರಾ ಬಳಿ ಬೆಂಕಿ ಹಚ್ಚಲಾಗಿತ್ತು. ಇದು ಗುಜರಾತ್​ನಲ್ಲಿ ಕೋಮುಗಲಭೆ ಕಾರಣ ಆಯಿತು. ಈ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ಎಕ್ಸ್​ಪ್ರೆಸ್’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರವನ್ನು ವೀಕ್ಷಿಸುವ ಮೋದಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಈಗ ಬಿಡುವು ಮಾಡಿಕೊಂಡು ಅವರು ಸಿನಿಮಾ ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?

ತೆರಿಗೆ ವಿನಾಯಿತಿ

ವಿಕ್ರಾಂತ್ ಮಾಸ್ಸಿ ನಟನೆಯ ‘ದಿ ಸಾಬರಮತಿ ಎಕ್ಸ್​ಪ್ರೆಸ್’ ಚಿತ್ರಕ್ಕೆ ಏಕ್ತಾ ಕಪೂರ್ ನಿರ್ಮಾಣ ಇದೆ. ಧೀರಜ್ ಸರ್ಣಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾಗೆ ಹಲವು ರಾಜ್ಯಗಳು ತೆರಿಗೆ ವಿನಾಯಿತಿ ನೀಡಿವೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ತೆರಿಗೆ ವಿನಾಯಿತಿ ನೀಡಿದ್ದಾರೆ. ಅದೇ ರೀತಿ ಹರಿಯಾಣ, ರಾಜಸ್ಥಾನ, ಛತ್ತೀಸಗಢ, ಮಧ್ಯ ಪ್ರದೇಶ, ಗುಜರಾತ್ ಕೂಡ ತೆರಿಗೆ ವಿನಾಯಿತಿ ನೀಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Mon, 2 December 24

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?