Rocketry: ರಾಕೆಟ್ರಿ ಸಿನಿಮಾ, ನಂಬಿ ನಾರಾಯಣನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

ನಟ ಆರ್. ಮಾಧವನ್, ವಿಜ್ಞಾನಿ ನಂಬಿ ನಾರಾಯಣನ್ ಭೇಟಿಯ ವೇಳೆ, ನಂಬಿ ನಾರಾಯಣನ್ ಎದುರಿಸಿದ್ದ ಸಂಕಷ್ಟಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಸಿನಿಮಾ ಬಗ್ಗೆ ಪ್ರಶಂಸೆ ಸೂಚಿಸಿದ್ದಾರೆ.

Rocketry: ರಾಕೆಟ್ರಿ ಸಿನಿಮಾ, ನಂಬಿ ನಾರಾಯಣನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ
ನಂಬಿ ನಾರಾಯಣನ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್. ಮಾಧವನ್
Follow us
| Updated By: ganapathi bhat

Updated on:Apr 05, 2022 | 12:45 PM

ದೆಹಲಿ: ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಹಾಗೂ ನಟ ಮಾಧವನ್​ರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭಾರತದ ಮಾಜಿ ವಿಜ್ಞಾನಿ, ಇಸ್ರೋದ ಏರೋಸ್ಪೇಸ್ ಇಂಜಿನಿಯರ್ ನಂಬಿ ನಾರಾಯಣನ್ ಬದುಕಿನ ಕುರಿತಾದ ಚಿತ್ರ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾದ ತುಣುಕುಗಳನ್ನು ಮೋದಿ ವೀಕ್ಷಿಸಿದ್ದಾರೆ. ಬಳಿಕ, ಆರ್. ಮಾಧವನ್ ಮತ್ತು ನಂಬಿ ನಾರಾಯಣನ್ ಜೊತೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಈ ಭೇಟಿಯ ವೇಳೆ, ವಿಜ್ಞಾನಿ ನಂಬಿ ನಾರಾಯಣನ್ ಎದುರಿಸಿದ್ದ ಸಂಕಷ್ಟಗಳ ಬಗ್ಗೆ ಪ್ರಧಾನಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಸಿನಿಮಾ ಬಗ್ಗೆ ಪ್ರಶಂಸೆ ಸೂಚಿಸಿದ್ದಾರೆ. ಪ್ರಧಾನಿ ಭೇಟಿಯ ಚಿತ್ರಗಳನ್ನು ಮಾಧವನ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ‘ನಂಬಿ ನಾರಾಯಣನ್ ಹಾಗೂ ನನಗೆ ಮೋದಿ ಭೇಟಿ ಆಗುವ ಅವಕಾಶ ಸಿಕ್ಕಿತು. ನಾವು ರಾಕೆಟ್ರಿ ಚಿತ್ರದ ಬಗ್ಗೆ ಮಾತನಾಡಿದೆವು. ಪ್ರಧಾನಿ ಮೋದಿ ಮಾತು ಮತ್ತು ಪ್ರಶಂಸೆಯಿಂದ ಸಂತೋಷವಾಯಿತು. ಈ ಅವಕಾಶಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ಬಹುಭಾಷಾ ನಟ ಆರ್​. ಮಾಧವನ್​ ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಇಷ್ಟು ವರ್ಷಗಳ ಅನುಭವವನ್ನು ಇಟ್ಟುಕೊಂಡು ಈಗ ಅವರು ‘ರಾಕೆಟ್ರಿ: ದಿ ನಂಬಿ ಎಫೆಕ್ಟ್​’ ಸಿನಿಮಾ ನಿರ್ದೇಶಿಸಿದ್ದಾರೆ. ಈಗ ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಮಾಧವನ್​ ಅವರ ಕೆಲಸ ಕಂಡು ಎಲ್ಲರೂ ಶಹಭಾಷ್​ ಎನ್ನುತ್ತಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಸೆಲೆಬ್ರಿಟಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್ ನೋಡಿರುವ ಅಮಿತಾಬ್​ ಬಚ್ಚನ್​, ಪ್ರಿಯಾಂಕಾ ಚೋಪ್ರಾ, ಹೃತಿಕ್​ ರೋಷನ್​, ಅಭಿಷೇಕ್​ ಬಚ್ಚನ್​ ಮುಂತಾದವರು ಫಿದಾ ಆಗಿದ್ದಾರೆ.

ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾಗೆ ಮಾಧವನ್​ ಯಾವುದೋ ಕಾಲ್ಪನಿಕ ಕಥೆಯನ್ನು ಆಯ್ಕೆ ಮಾಡಿಕೊಂಡಿಲ್ಲ. ಬದಲಿಗೆ, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ಒಂದು ನೈಜ ಘಟನೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಇಸ್ರೋದ ಮಾಜಿ ರಾಕೆಟ್​ ಸೈನ್ಸ್​ ವಿಜ್ಞಾನಿ ನಂಬಿ ನಾರಾಯಣ್​ ಅವರ ಬಯೋಪಿಕ್​ ಆಗಿ ಈ ಸಿನಿಮಾ ಮೂಡಿಬಂದಿದೆ. ಕಮರ್ಷಿಯಲ್​ ಸ್ಯಾಟಲೈಟ್​ ಮಾರುಕಟ್ಟೆಯಲ್ಲಿ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಲು ಪ್ರಯತ್ನಿಸಿದ ವ್ಯಕ್ತಿಯೇ ನಂಬಿ ನಾರಾಯಣ್​. ಆದರೆ ಅಂಥ ವಿಜ್ಞಾನಿ ಜೈಲು ಸೇರಬೇಕಾಗಿ ಬಂದದ್ದು ಮಾತ್ರ ವಿಪರ್ಯಾಸ!

ಇದನ್ನೂ ಓದಿ: Rocketry Trailer: ದೇಶದ್ರೋಹ ಆರೋಪ ಹೊತ್ತಿದ್ದ ನಂಬಿ ನಾರಾಯಣ್​ ಬಗ್ಗೆ ಮಾಧವನ್​ ಸಿನಿಮಾ! ‘ರಾಕೆಟ್ರಿ’ ಚಿತ್ರದ ರಿಯಲ್​ ಕಥೆ ಏನು?

ಇದನ್ನೂ ಓದಿ: Narendra Modi: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ – ಪ್ರಧಾನಿ ನರೇಂದ್ರ ಮೋದಿ

Published On - 6:40 pm, Tue, 6 April 21

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು