Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿ ಮೆಚ್ಚುಗೆಯ ಮಾತನಾಡಿದ ಪಿಎಂ ನರೇಂದ್ರ ಮೋದಿ

ಜನವರಿ ತಿಂಗಳಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ ವೈಜಯಂತಿಮಾಲಾ ಹೆಸರು ಕೂಡ ಇತ್ತು. ಇವರಲ್ಲದೆ ಚಿರಂಜೀವಿ ಹಾಗೂ ಇನ್ನೂ 132 ಜನರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಈಗ ಪ್ರಧಾನಿ ಮೋದಿ ಕೂಡ ವೈಜಯಂತಿಯನ್ನು ಭೇಟಿ ಮಾಡಿದ್ದಾರೆ.

ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿ ಮೆಚ್ಚುಗೆಯ ಮಾತನಾಡಿದ ಪಿಎಂ ನರೇಂದ್ರ ಮೋದಿ
ಮೋದಿ-ವೈಜಯಂತಿಮಾಲಾ
Follow us
ರಾಜೇಶ್ ದುಗ್ಗುಮನೆ
|

Updated on: Mar 05, 2024 | 11:07 AM

ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರು ಇತ್ತೀಚೆಗೆ ಭೇಟಿ ಮಾಡಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಈ ಭೇಟಿ ನಡೆದಿದೆ. ಈ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ವೈಜಯಂತಿಮಾಲಾ ಅವರು ನೀಡಿದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.

ನರೇಂದ್ರ ಮೋದಿ ಹಂಚಿಕೊಂಡ ಮೊದಲ ಫೋಟೋದಲ್ಲಿ ಅವರು ವೈಜಯಂತಿ ಅವರಿಗೆ ಕೈಮುಗಿದು ನಮಿಸುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಅವರ ಎದುರು ಕುಳಿತು ಚರ್ಚೆ ಮಾಡುತ್ತಿದ್ದಾರೆ. ಸಿನಿಮಾ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ ಮೋದಿ. ‘ಚೆನ್ನೈನಲ್ಲಿ ವೈಜಯಂತಿ ಮಾಲಾ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ. ಅವರು ಪದ್ಮ ವಿಭೂಷಣ ಪ್ರಶಸ್ತಿ ಪಡೆದಿದ್ದಾರೆ ಮತ್ತು ಭಾರತೀಯ ಸಿನಿಮಾ ಜಗತ್ತಿಗೆ ನೀಡಿದ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮೋದಿ ಮಾಡಿದ ಟ್ವೀಟ್..

ಜನವರಿಯಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ ವೈಜಯಂತಿಮಾಲಾ ಹೆಸರು ಕೂಡ ಇತ್ತು. ಇವರಲ್ಲದೆ ಚಿರಂಜೀವಿ ಹಾಗೂ ಇನ್ನೂ 132 ಜನರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ಮೇರು ನಟ ಅನಂತ್ ನಾಗ್​ ಮತ್ತೆ ನಿರ್ಲಕ್ಷ್ಯ

ವೈಜಯಂತಿಮಾಲಾ ಚಿತ್ರರಂಗಕ್ಕೆ ಕಾಲಿಡುವಾಗ ಅವರಿಗೆ 16 ವರ್ಷ ವಯಸ್ಸು. ಅವರು ನಟಿಸಿದ ಮೊದಲ ಸಿನಿಮಾ ‘ವಾಳ್ಕೈ’. ಈ ಚಿತ್ರ ರಿಲೀಸ್ ಆಗಿದ್ದು 1949ರಲ್ಲಿ. ಅವರ ಮೊದಲ ಹಿಂದಿ ಸಿನಿಮಾ 1951ರಲ್ಲಿ ರಿಲೀಸ್ ಆಯಿತು. 1954 ‘ಆಶಾ ನಿರಾಶಾ’ ಮೂಲಕ ಕನ್ನಡಕ್ಕೂ ಕಾಲಿಟ್ಟರು. ಹಿಂದಿಯಲ್ಲಿ ಅವರು ಹೆಚ್ಚಾಗಿ ನಟಿಸಿದ್ದಾರೆ. 1970ರ ಬಳಿಕ ಅವರು ಸಿನಿಮಾಗಳಲ್ಲಿ ಬಣ್ಣ ಹಚ್ಚಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ