AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿ ಮೆಚ್ಚುಗೆಯ ಮಾತನಾಡಿದ ಪಿಎಂ ನರೇಂದ್ರ ಮೋದಿ

ಜನವರಿ ತಿಂಗಳಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ ವೈಜಯಂತಿಮಾಲಾ ಹೆಸರು ಕೂಡ ಇತ್ತು. ಇವರಲ್ಲದೆ ಚಿರಂಜೀವಿ ಹಾಗೂ ಇನ್ನೂ 132 ಜನರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಈಗ ಪ್ರಧಾನಿ ಮೋದಿ ಕೂಡ ವೈಜಯಂತಿಯನ್ನು ಭೇಟಿ ಮಾಡಿದ್ದಾರೆ.

ಹಿರಿಯ ನಟಿ ವೈಜಯಂತಿಮಾಲಾ ಭೇಟಿ ಮಾಡಿ ಮೆಚ್ಚುಗೆಯ ಮಾತನಾಡಿದ ಪಿಎಂ ನರೇಂದ್ರ ಮೋದಿ
ಮೋದಿ-ವೈಜಯಂತಿಮಾಲಾ
ರಾಜೇಶ್ ದುಗ್ಗುಮನೆ
|

Updated on: Mar 05, 2024 | 11:07 AM

Share

ಪದ್ಮ ವಿಭೂಷಣ ಪ್ರಶಸ್ತಿ ಪಡೆದ ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರು ಇತ್ತೀಚೆಗೆ ಭೇಟಿ ಮಾಡಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಈ ಭೇಟಿ ನಡೆದಿದೆ. ಈ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ವೈಜಯಂತಿಮಾಲಾ ಅವರು ನೀಡಿದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.

ನರೇಂದ್ರ ಮೋದಿ ಹಂಚಿಕೊಂಡ ಮೊದಲ ಫೋಟೋದಲ್ಲಿ ಅವರು ವೈಜಯಂತಿ ಅವರಿಗೆ ಕೈಮುಗಿದು ನಮಿಸುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಅವರ ಎದುರು ಕುಳಿತು ಚರ್ಚೆ ಮಾಡುತ್ತಿದ್ದಾರೆ. ಸಿನಿಮಾ ರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ ಮೋದಿ. ‘ಚೆನ್ನೈನಲ್ಲಿ ವೈಜಯಂತಿ ಮಾಲಾ ಅವರನ್ನು ಭೇಟಿ ಮಾಡಿದ್ದು ಖುಷಿ ನೀಡಿದೆ. ಅವರು ಪದ್ಮ ವಿಭೂಷಣ ಪ್ರಶಸ್ತಿ ಪಡೆದಿದ್ದಾರೆ ಮತ್ತು ಭಾರತೀಯ ಸಿನಿಮಾ ಜಗತ್ತಿಗೆ ನೀಡಿದ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮೋದಿ ಮಾಡಿದ ಟ್ವೀಟ್..

ಜನವರಿಯಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಘೋಷಣೆ ಮಾಡಲಾಯಿತು. ಇದರಲ್ಲಿ ವೈಜಯಂತಿಮಾಲಾ ಹೆಸರು ಕೂಡ ಇತ್ತು. ಇವರಲ್ಲದೆ ಚಿರಂಜೀವಿ ಹಾಗೂ ಇನ್ನೂ 132 ಜನರಿಗೆ ಪದ್ಮ ಪ್ರಶಸ್ತಿ ಸಿಕ್ಕಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ಪದ್ಮ ಪ್ರಶಸ್ತಿ: ಮೇರು ನಟ ಅನಂತ್ ನಾಗ್​ ಮತ್ತೆ ನಿರ್ಲಕ್ಷ್ಯ

ವೈಜಯಂತಿಮಾಲಾ ಚಿತ್ರರಂಗಕ್ಕೆ ಕಾಲಿಡುವಾಗ ಅವರಿಗೆ 16 ವರ್ಷ ವಯಸ್ಸು. ಅವರು ನಟಿಸಿದ ಮೊದಲ ಸಿನಿಮಾ ‘ವಾಳ್ಕೈ’. ಈ ಚಿತ್ರ ರಿಲೀಸ್ ಆಗಿದ್ದು 1949ರಲ್ಲಿ. ಅವರ ಮೊದಲ ಹಿಂದಿ ಸಿನಿಮಾ 1951ರಲ್ಲಿ ರಿಲೀಸ್ ಆಯಿತು. 1954 ‘ಆಶಾ ನಿರಾಶಾ’ ಮೂಲಕ ಕನ್ನಡಕ್ಕೂ ಕಾಲಿಟ್ಟರು. ಹಿಂದಿಯಲ್ಲಿ ಅವರು ಹೆಚ್ಚಾಗಿ ನಟಿಸಿದ್ದಾರೆ. 1970ರ ಬಳಿಕ ಅವರು ಸಿನಿಮಾಗಳಲ್ಲಿ ಬಣ್ಣ ಹಚ್ಚಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ