AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2022: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಚಿತ್ರರಂಗಕ್ಕೆ ಗೌರವ; ಮೆಚ್ಚುಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ

Narendra Modi | Cannes Film Festival: ಈ ಬಾರಿಯ ಕಾನ್​ ಚಿತ್ರೋತ್ಸವದಲ್ಲಿ ಸತ್ಯಜಿತ್​ ರೇ ಅವರ ‘ಪ್ರತಿದ್ವಂದಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆ ಬಗ್ಗೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

Cannes 2022: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಚಿತ್ರರಂಗಕ್ಕೆ ಗೌರವ; ಮೆಚ್ಚುಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ಮದನ್​ ಕುಮಾರ್​

Updated on:May 19, 2022 | 12:05 PM

ಮೇ 17ರಿಂದ ಆರಂಭ ಆಗಿರುವ ಕಾನ್​ ಚಿತ್ರೋತ್ಸವ (Cannes Film Festival) ಗಮನ ಸೆಳೆಯುತ್ತಿದೆ. ಪ್ರಪಂಚದ ಹಲವು ದೇಶಗಳ ಸಿನಿಮಾ ಸೆಲೆಬ್ರಿಟಿಗಳು ಈ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗವಹಿಸಿದ್ದಾರೆ. ಈ ಬಾರಿ ನಡೆಯುತ್ತಿರುವ 75ನೇ ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾರತಕ್ಕೆ ವಿಶೇಷ ಗೌರವ (Country of Honor) ಸಿಕ್ಕಿದೆ. ಇಲ್ಲಿನ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ದೀಪಿಕಾ ಪಡುಕೋಣೆ (Deepika Padukone), ಪೂಜಾ ಹೆಗ್ಡೆ, ತಮನ್ನಾ ಭಾಟಿಯಾ, ಎ.ಆರ್​. ರೆಹಮಾನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕಾನ್ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ಒಟ್ಟಾರೆ ಭಾರತಕ್ಕೆ ಸಿಕ್ಕಿರುವ ಗೌರವದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪತ್ರ ಬರೆದಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಆಗಿದೆ. ಕಾನ್​ ಚಿತ್ರೋತ್ಸವ 75ನೇ ವರ್ಷಕ್ಕೆ ಕಾಲಿಟ್ಟಿದೆ. ಇಂಡೋ-ಫ್ರೆಂಚ್​ ಒಪ್ಪಂದಕ್ಕೆ 75 ವರ್ಷ. ಈ ಎಲ್ಲ ಕಾರಣದಿಂದ ಈ ವರ್ಷ ವಿಶೇಷವಾಗಿದೆ ಎಂದು ಪತ್ರದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

‘ಸಿನಿಮಾ ಮತ್ತು ಸಮಾಜ ಒಂದಕ್ಕೊಂದು ಕನ್ನಡಿ ಇದ್ದಂತೆ. ಮಾನವನ ಭಾವನೆಗಳನ್ನು ಕಲಾತ್ಮಕವಾಗಿ ಸಿನಿಮಾ ತೋರಿಸುತ್ತದೆ. ಇಡೀ ಜಗತ್ತಿನಲ್ಲಿ ಅತಿ ಹೆಚ್ಚು ಸಿನಿಮಾ ನಿರ್ಮಿಸುವ ದೇಶ ಭಾರತ. ಇಲ್ಲಿನ ಹಲವು ಭಾಷೆಗಳಲ್ಲಿ ವಿವಿಧ ರೀತಿಯ ಸಿನಿಮಾಗಳು ಮೂಡಿಬರುತ್ತಿವೆ. ಸಮೃದ್ಧವಾದ ಸಂಪ್ರದಾಯ ಮತ್ತು ಸಾಂಸ್ಕೃತಿಕ ವೈವಿಧ್ಯತೆಯು ಭಾರತದ ಶಕ್ತಿ. ಅನ್ವೇಷಿಸಲು ಇಲ್ಲಿ ಸಾಕಷ್ಟು ಕಥೆಗಳಿವೆ’ ಎಂದು ಈ ಪತ್ರದಲ್ಲಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು
Image
ಕಾನ್​ ಚಿತ್ರೋತ್ಸವದಲ್ಲಿ ಸೌತ್​ ನಟಿಯರಿಗೂ ಮನ್ನಣೆ; ರೆಡ್​ ಕಾರ್ಪೆಟ್​ಗೆ ಪೂಜಾ ಹೆಗ್ಡೆ, ತಮನ್ನಾ, ನಯನತಾರಾ
Image
Cannes film Festival 2022: ಕಾನ್​ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ ಜ್ಯೂರಿ; ಜಾಗತಿಕ ಮಟ್ಟದಲ್ಲಿ ಹೆಚ್ಚಿತು ಕನ್ನಡತಿಯ ಗೌರವ
Image
ಪತಿ ಅಭಿಷೇಕ್​ ಎದುರಲ್ಲೇ ಐಶ್ವರ್ಯಾ ರೈಗೆ ಅಪರಿಚಿತ ವ್ಯಕ್ತಿಯ ಮದುವೆ​ ಪ್ರಪೋಸ್​; ವಿಡಿಯೋ ವೈರಲ್​

ಇದನ್ನೂ ಓದಿ: ಕಾನ್​​ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡದ ‘ದೇವರ ಕನಸು’ ಸಿನಿಮಾ

ಈ ಬಾರಿಯ ಕಾನ್​ ಚಿತ್ರೋತ್ಸವದಲ್ಲಿ ಸತ್ಯಜಿತ್​ ರೇ ಅವರ ‘ಪ್ರತಿದ್ವಂದಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆ ಬಗ್ಗೆ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಸತ್ಯಜಿತ್​ ರೇ ಅವರ ಜನ್ಮಶತಮಾನೋತ್ಸವ ವರ್ಷ ಎಂಬುದು ವಿಶೇಷ. ಅಂತಾರಾಷ್ಟ್ರೀಯ ಸಿನಿಮಾ ಮೇಕರ್​ಗಳ ಸಹಯೋಗದೊಂದಿಗೆ ಭಾರತದಲ್ಲಿ ಸಿನಿಮಾ ನಿರ್ಮಿಸಲು ಸಿಂಗಲ್​ ವಿಂಡೋ ಕ್ಲಿಯರೆನ್ಸ್​ ನೀಡುವ ಕುರಿತಾಗಿಯೂ ಈ ಪತ್ರದಲ್ಲಿ ಮೋದಿ ಪ್ರಸ್ತಾಪಿಸಿದ್ದಾರೆ. ಕಾನ್​ ಚಿತ್ರೋತ್ಸವ ಯಶಸ್ವಿ ಆಗಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ತಮನ್ನಾ, ಊರ್ವಶಿ ರೌಟೇಲಾ; ಇಲ್ಲಿವೆ ಕಲರ್​ಫುಲ್​ ಫೋಟೋಗಳು

ಕಾನ್​ ಚಿತ್ರೋತ್ಸವದ ಜ್ಯೂರಿ ತಂಡದಲ್ಲಿ ದೀಪಿಕಾ ಪಡುಕೋಣೆ:

ಕಾನ್​ ಚಿತ್ರೋತ್ಸವಕ್ಕೆ ಜಗತ್ತಿನಾದ್ಯಂತ ಮನ್ನಣೆ ಇದೆ. ಈ ಸಿನಿಮೋತ್ಸವದಲ್ಲಿ ತಮ್ಮ ಚಿತ್ರ ಪ್ರದರ್ಶನ ಆಗಬೇಕು ಎಂದು ಎಷ್ಟೋ ನಿರ್ದೇಶಕರು, ಕಲಾವಿದರು, ನಿರ್ಮಾಪಕರು, ತಂತ್ರಜ್ಞರು ಕನಸು ಕಾಣುತ್ತಾರೆ. ಈ ಬಾರಿ 21 ಸಿನಿಮಾಗಳು ಸ್ಪರ್ಧಿಸುತ್ತಿವೆ. ಈ ಹಿಂದೆ ಭಾರತದ ನಟಿಯರಾದ ಐಶ್ವರ್ಯಾ ರೈ ಬಚ್ಚನ್​, ವಿದ್ಯಾ ಬಾಲನ್, ಶರ್ಮಿಳಾ ಟಾಗೋರ್​, ನಂದಿತಾ ದಾಸ್​ ಅವರು ಕಾನ್​ ಚಿತ್ರೋತ್ಸವದ ಜ್ಯೂರಿಗಳಾಗಿ ಕೆಲಸ ಮಾಡಿದ್ದರು. ಈಗ ಆ ನಟಿಯರ ಸಾಲಿಗೆ ದೀಪಿಕಾ ಪಡುಕೋಣೆ ಕೂಡ ಸೇರ್ಪಡೆ ಆಗಿದ್ದಾರೆ. ಮೇ 28ರಂದು ಇದರ ಸಮಾರೋಪ ಸಮಾರಂಭ ನಡೆಯಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Thu, 19 May 22

ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ