AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಟಿವಿಯಲ್ಲಿ ಬರೋಕೆ ದಿನಾಂಕ ಫಿಕ್ಸ್​​

ಕನ್ನಡದ ಖ್ಯಾತ ಮನರಂಜನಾ ವಾಹಿನಿ ‘ಉದಯ ಟಿವಿ’ಗೆ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ಪ್ರಸಾರ ಹಕ್ಕುಗಳು ಮಾರಾಟ ಆಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಧೂಳೆಬ್ಬಿಸಿರುವ ಈ ಚಿತ್ರಕ್ಕೆ ಟಿವಿಯಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್​ ಇದೆ.

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಟಿವಿಯಲ್ಲಿ ಬರೋಕೆ ದಿನಾಂಕ ಫಿಕ್ಸ್​​
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Apr 07, 2021 | 7:10 PM

Share

ಫೆಬ್ರವರಿಯಲ್ಲಿ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡಿತು. ಈಗ ಈ ಸಿನಿಮಾವನ್ನು ಟಿವಿಯಲ್ಲಿ ಕಣ್ತುಂಬಿಕೊಳ್ಳೋಕೆ ದಿನಾಂಕ ಫಿಕ್ಸ್​ ಆಗಿದೆ. ಶೀಘ್ರವೇ ಸಿನಿಮಾ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದೆ. ಕನ್ನಡದ ಖ್ಯಾತ ಮನರಂಜನಾ ವಾಹಿನಿ ‘ಉದಯ ಟಿವಿ’ಗೆ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ಪ್ರಸಾರ ಹಕ್ಕುಗಳು ಮಾರಾಟ ಆಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಧೂಳೆಬ್ಬಿಸಿರುವ ಈ ಚಿತ್ರಕ್ಕೆ ಟಿವಿಯಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್​ ಇದೆ. ಪೊಗರು ಚಿತ್ರ ಟಿವಿಯಲ್ಲಿ ಯಾವಾಗ ಪ್ರಸಾರ ಆಗಲಿದೆ ಎನ್ನುವ ಮಾಹಿತಿ ಹೊರ ಬಿದ್ದಿರಲಿಲ್ಲ. ಈಗ ಈ ವಿಚಾರ ಅಧಿಕೃತವಾಗಿದೆ.

ಏಪ್ರಿಲ್​​ 13ರಂದು ಯುಗಾದಿ ಹಬ್ಬ ಇದೆ. ಇಂಥ ವಿಶೇಷ ಸಂದರ್ಭದಲ್ಲಿ ಹೊಸ ಸಿನಿಮಾಗಳನ್ನು ಪ್ರಸಾರ ಮಾಡುವ ಪರಿಪಾಠವನ್ನು ಉದಯ ವಾಹಿನಿ ಮೊದಲಿನಿಂದಲೂ ನಡೆಸಿಕೊಂಡು ಬಂದಿದೆ. ಹಾಗಾಗಿ, ಯುಗಾದಿ ಹಬ್ಬದ ಪ್ರಯಕ್ತ ಪೊಗರು ಪ್ರಸಾರ ಆಗುತ್ತಿದೆ.

ಧ್ರುವ ಸರ್ಜಾ ನಟನೆಯ ಪೊಗರು ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ನಂದಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ಕೆಲವು ಆಕ್ಷೇಪಾರ್ಹ ಅಂಶಗಳಿವೆ ಎಂಬ ಕಾರಣಕ್ಕೆ ಸಾಕಷ್ಟು ವಿವಾದ ಕೂಡ ಆಗಿತ್ತು. ಎಲ್ಲರಿಗೂ ಈ ಚಿತ್ರ ನೋಡಲು ಸಾಧ್ಯವಾಗಿರಲಿಲ್ಲ. ಕೊರೊನಾ ವೈರಸ್​ ಹರಡವ ಭೀತಿಯ ಕಾರಣಕ್ಕೆ ಚಿತ್ರಮಂದಿರಕ್ಕೆ ಕಾಲಿಡಲು ಅನೇಕರು ಸಿದ್ಧವಿರಲಿಲ್ಲ. ಆದರೆ ಈಗ ಕಿರುತೆರೆಯಲ್ಲಿ ಪ್ರಸಾರ ಆಗಲಿರುವುದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಈ ಚಿತ್ರ ತಲುಪಲಿದೆ.

ಇದನ್ನೂ ಓದಿ: ‘ಪೊಗರು’ ವಿವಾದ: ಟ್ವೀಟ್ ಮೂಲಕ ಬೇಷರತ್ ಕ್ಷಮೆ ಕೇಳಿದ ನಟ ಧ್ರುವ ಸರ್ಜಾ

ಪೊಗರು ಸುದ್ದಿಗೋಷ್ಠಿ; ನಮ್ಮಿಂದಾದ ತಪ್ಪು ಸರಿಪಡಿಸಿಕೊಂಡಿದ್ದೇವೆ, ಕತ್ತರಿ ಹಾಕಿದ ನಂತರ ಚಿತ್ರದ ಅವಧಿ 8 ನಿಮಿಷ ಕಡಿಮೆಯಾಗಿದೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು