AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?

ಟೈಗರ್ ಶ್ರಾಫ್​ ಹಾಗೂ ದಿಶಾ ಇಬ್ಬರೂ ಅನೇಕ ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ. ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿಯಾದರೂ ಯಾರೂ ಒಪ್ಪಿಕೊಂಡಿಲ್ಲ.

ಲಾಕ್​ಡೌನ್​ ಮಧ್ಯೆಯೂ ಟೈಗರ್-ದಿಶಾ ರೊಮ್ಯಾಂಟಿಕ್​ ರೈಡ್​; ಇವರನ್ನು ತಡೆದ ಪೊಲೀಸರು, ಮುಂದೇನಾಯ್ತು?
ಟೈಗರ್ ಶ್ರಾಫ್​-ದಿಶಾ ಪಟಾಣಿ
ರಾಜೇಶ್ ದುಗ್ಗುಮನೆ
|

Updated on:Jun 02, 2021 | 9:05 PM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ದೇಶದ ಬಹುತೇಕ ರಾಜ್ಯಗಳು ಲಾಕ್​ಡೌನ್​ ಘೋಷಣೆ ಮಾಡಿವೆ. ಅನೇಕ ರಾಜ್ಯಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಮಹಾರಾಷ್ಟ್ರ ಕೂಡ ಹೊರತಾಗಿಲ್ಲ. ಕೊವಿಡ್​ ಪ್ರಕರಣಗಳು ಹೆಚ್ಚಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಈ ಮಧ್ಯೆಯೂ ಟೈಗರ್​ ಶ್ರಾಫ್​ ಹಾಗೂ ದಿಶಾ ಪಟಾಣಿ ಮುಂಬೈ ಬಾಂದ್ರಾದಲ್ಲಿ ಜಾಲಿ ರೈಡ್​ ಹೋಗಿದ್ದಾರೆ. ಈ ವೇಳೆ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ.

ಟೈಗರ್ ಶ್ರಾಫ್​ ಹಾಗೂ ದಿಶಾ ಇಬ್ಬರೂ ಅನೇಕ ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ. ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆಯಾದರೂ ಯಾರೂ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ಮಾಲ್ಡೀವ್ಸ್​ಗೆ ತೆರಳಿ ಹಾಯಾಗಿ ಸಮಯ ಕಳೆದು ಬಂದಿದ್ದರು. ಸದ್ಯ, ಮುಂಬೈನಲ್ಲಿರುವ ಈ ಜೋಡಿ ಜಿಮ್​​ಗೆ ಒಟ್ಟಾಗಿ ತೆರಳುತ್ತಿದ್ದಾರೆ.

ಇತ್ತೀಚೆಗೆ ಹಾಗೆಯೇ ಆಗಿದೆ. ಇಬ್ಬರೂ ಜಿಮ್​ ಮುಗಿಸಿ ತಮ್ಮ ಐಷಾರಾಮಿ ಕಾರಲ್ಲಿ ಮುಂಬೈ ಸುತ್ತಾಟ ಮಾಡೋಕೆ ಮುಂದಾಗಿದ್ದಾರೆ. ದಿಶಾ ಕಾರಿನಲ್ಲಿ ಮುಂಭಾಗದಲ್ಲಿ ಕೂತಿದ್ದರೆ ಟೈಗರ್​ ಹಿಂಭಾಗದಲ್ಲಿ ಕೂತಿದ್ದರಂತೆ. ಬಾಂದ್ರಾದ ಬ್ಯಾಂಡ್​​ಸ್ಟ್ಯಾಂಡ್​ ಸಮೀಪ ಎರಡನೇ ರೌಂಡ್ ಹಾಕುವಾಗ ಪೊಲೀಸರು ಇವರನ್ನು ತಡೆದಿದ್ದಾರೆ. ನಂತರ ಪೊಲೀಸರು ಇವರ ಆಧಾರ್​ ಕಾರ್ಡ್​ ಪರಿಶೀಲಿಸಿ, ಇತರ ಔಪಚಾರಿಕ ಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಬಿಟ್ಟುಕಳುಹಿಸಿದ್ದಾರೆ. ಅಲ್ಲದೆ, ಸುಖಾಸುಮ್ಮನೆ ಸುತ್ತಾಡದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ದಿಶಾ ಪಟಾಣಿ ‘ಏಕ್​ ವಿಲನ್​ ರಿಟರ್ನ್ಸ್’​ನಲ್ಲಿ ನಟಿಸುತ್ತಿದ್ದಾರೆ. ಟೈಗರ್​ ಶ್ರಾಫ್​ ‘ಹೀರೋಪಂತಿ 2’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಸದ್ಯಕ್ಕೆ ನಿಂತಿವೆ. ಈಗಾಗಲೇ ಅನೇಕ ಸೆಲೆಬ್ರಿಟಿಗಳು ಶೂಟಿಂಗ್​ ಆರಂಭಿಸೋಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Published On - 8:32 pm, Wed, 2 June 21

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ