AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು

Naa Ready: ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು
ದಳಪತಿ ವಿಜಯ್​
ಮದನ್​ ಕುಮಾರ್​
|

Updated on: Jun 26, 2023 | 6:43 PM

Share

ಕಾಲಿವುಡ್​ ನಟ ದಳಪತಿ ವಿಜಯ್​ ಅವರು ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಮಾದಕ ವಸ್ತು ಸೇವನೆಗೆ (Drug Abuse) ದಳಪತಿ ವಿಜಯ್​ ಅವರು ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಕೇಸ್​ ದಾಖಲಾಗಿದೆ. ಚಿತ್ರರಂಗಕ್ಕೂ ಡ್ರಗ್ಸ್​ ದಂಧೆಗೂ ನಂಟು ಇದೆ ಎಂಬುದು ಆಗಾಗ ಸಾಬೀತಾಗುತ್ತಾ ಇರುತ್ತದೆ. ಹಾಗಂತ ದಳಪತಿ ವಿಜಯ್ (Thalapathy Vijay)​ ಅವರು ನೇರವಾಗಿ ಡ್ರಗ್ಸ್​ ಜಾಲದ ಜೊತೆ ಸಂಪರ್ಕ ಹೊಂದಿಲ್ಲ. ಈ ಕಿರಿಕ್​ ಹುಟ್ಟಿಕೊಳ್ಳಲು ಕಾರಣ ಆಗಿರುವುದು ‘ಲಿಯೋ’ (Leo Movie) ಸಿನಿಮಾದ ಸಾಂಗ್​! ಹೌದು, ಈ ಚಿತ್ರದ ‘ನಾ ರೆಡಿ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಒಳ್ಳೆಯ ರೆಸ್ಪಾನ್ಸ್​ ಪಡೆದುಕೊಂಡಿದ್ದು ಹೌದಾದರೂ ಅದರ ಬೆನ್ನಲ್ಲೇ ವಿವಾದ ಕೂಡ ಶುರುವಾಗಿದೆ.

‘ಲಿಯೋ’ ಸಿನಿಮಾದ ‘ನಾ ರೆಡಿ..’ ಗೀತೆಯು ಮಾದಕ ದ್ರವ್ಯ ಸೇವನೆ ಹಾಗೂ ರೌಡಿಸಂ ಅನ್ನು ಪ್ರಚೋದಿಸುತ್ತದೆ ಎಂದು ಆರ್​ಟಿಐ ಸೆಲ್ವನ್​ ಎಂಬುವವರು ದೂರು ನೀಡಿದ್ದಾರೆ. ಪರಿಣಾಮವಾಗಿ ದಳಪತಿ ವಿಜಯ್​ ಅವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಂಜಯ್​ ದತ್​, ತ್ರಿಷಾ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಅಭಿನಯಿಸುತ್ತಿದ್ದಾರೆ.

ಲೋಕೇಶ್​ ಕನಗರಾಜ್​ ಅವರು ಕಾಲಿವುಡ್​ನಲ್ಲಿ ತಮ್ಮದೇ ಸಿನಿಮಾಗಳ ಒಂದು ಯೂನಿವರ್ಸ್​ ಸೃಷ್ಟಿ ಮಾಡಿದ್ದಾರೆ. ಅವರು ನಿರ್ದೇಶನ ಮಾಡುವ ಒಂದು ಸಿನಿಮಾದ ಪಾತ್ರಗಳು ಇನ್ನೊಂದು ಸಿನಿಮಾದ ಪಾತ್ರಗಳ ಜೊತೆ ಲಿಂಕ್​ ಹೊಂದಿರುತ್ತವೆ. ‘ಲೋಕೇಶ್​ ಕನಗರಾಜ್​ ಸಿನಿಮ್ಯಾಟಿಕ್​ ಯೂನಿವರ್ಸ್​’ ಎಂದು ಅದನ್ನು ಕರೆಯಲಾಗುತ್ತದೆ. ಈ ಹಿಂದೆ ಅವರು ನಿರ್ದೇಶಿಸಿದ ‘ಖೈದಿ’ ಹಾಗೂ ‘ವಿಕ್ರಮ್​’ ಸಿನಿಮಾಗಳ ಕಥೆಯಲ್ಲಿ ಡ್ರಗ್ಸ್​ ಉಲ್ಲೇಖ ಇತ್ತು. ಈಗ ‘ಲಿಯೋ’ ಸಿನಿಮಾದಲ್ಲೂ ಅದರ ಪ್ರಸ್ತಾಪ ಆಗಲಿದೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ.

ಇದನ್ನೂ ಓದಿ: Lokesh Kanagaraj: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೋಮವಾರ (ಜೂನ್​ 26) ಬೆಳಗ್ಗೆ 10 ಗಂಟೆ ಸುಮಾರಿಗೆ ಆರ್​ಟಿಐ ಸೆಲ್ವನ್​ ಅವರು ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ಪರಿಣಾಮ ಏನಾಗಬಹುದು ಎಂಬ ಕೌತುಕ ಮೂಡಿದೆ. ಚೆನ್ನೈ ಪೊಲೀಸರು ಈಗಾಗಲೇ ಡ್ರಗ್ಸ್​ ಸೇವನೆ ತಡೆಗೆ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಅನೇಕ ಸ್ಟಾರ್​ ನಟರು ಕೂಡ ಸಾಥ್​ ನೀಡಿದ್ದಾರೆ. ಈ ಸಂದರ್ಭದಲ್ಲಿ ದಳಪತಿ ವಿಜಯ್​ ವಿರುದ್ಧ ಕೇಸ್​ ದಾಖಲಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!