Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು

Naa Ready: ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು
ದಳಪತಿ ವಿಜಯ್​
Follow us
|

Updated on: Jun 26, 2023 | 6:43 PM

ಕಾಲಿವುಡ್​ ನಟ ದಳಪತಿ ವಿಜಯ್​ ಅವರು ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಮಾದಕ ವಸ್ತು ಸೇವನೆಗೆ (Drug Abuse) ದಳಪತಿ ವಿಜಯ್​ ಅವರು ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಕೇಸ್​ ದಾಖಲಾಗಿದೆ. ಚಿತ್ರರಂಗಕ್ಕೂ ಡ್ರಗ್ಸ್​ ದಂಧೆಗೂ ನಂಟು ಇದೆ ಎಂಬುದು ಆಗಾಗ ಸಾಬೀತಾಗುತ್ತಾ ಇರುತ್ತದೆ. ಹಾಗಂತ ದಳಪತಿ ವಿಜಯ್ (Thalapathy Vijay)​ ಅವರು ನೇರವಾಗಿ ಡ್ರಗ್ಸ್​ ಜಾಲದ ಜೊತೆ ಸಂಪರ್ಕ ಹೊಂದಿಲ್ಲ. ಈ ಕಿರಿಕ್​ ಹುಟ್ಟಿಕೊಳ್ಳಲು ಕಾರಣ ಆಗಿರುವುದು ‘ಲಿಯೋ’ (Leo Movie) ಸಿನಿಮಾದ ಸಾಂಗ್​! ಹೌದು, ಈ ಚಿತ್ರದ ‘ನಾ ರೆಡಿ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಒಳ್ಳೆಯ ರೆಸ್ಪಾನ್ಸ್​ ಪಡೆದುಕೊಂಡಿದ್ದು ಹೌದಾದರೂ ಅದರ ಬೆನ್ನಲ್ಲೇ ವಿವಾದ ಕೂಡ ಶುರುವಾಗಿದೆ.

‘ಲಿಯೋ’ ಸಿನಿಮಾದ ‘ನಾ ರೆಡಿ..’ ಗೀತೆಯು ಮಾದಕ ದ್ರವ್ಯ ಸೇವನೆ ಹಾಗೂ ರೌಡಿಸಂ ಅನ್ನು ಪ್ರಚೋದಿಸುತ್ತದೆ ಎಂದು ಆರ್​ಟಿಐ ಸೆಲ್ವನ್​ ಎಂಬುವವರು ದೂರು ನೀಡಿದ್ದಾರೆ. ಪರಿಣಾಮವಾಗಿ ದಳಪತಿ ವಿಜಯ್​ ಅವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಂಜಯ್​ ದತ್​, ತ್ರಿಷಾ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಅಭಿನಯಿಸುತ್ತಿದ್ದಾರೆ.

ಲೋಕೇಶ್​ ಕನಗರಾಜ್​ ಅವರು ಕಾಲಿವುಡ್​ನಲ್ಲಿ ತಮ್ಮದೇ ಸಿನಿಮಾಗಳ ಒಂದು ಯೂನಿವರ್ಸ್​ ಸೃಷ್ಟಿ ಮಾಡಿದ್ದಾರೆ. ಅವರು ನಿರ್ದೇಶನ ಮಾಡುವ ಒಂದು ಸಿನಿಮಾದ ಪಾತ್ರಗಳು ಇನ್ನೊಂದು ಸಿನಿಮಾದ ಪಾತ್ರಗಳ ಜೊತೆ ಲಿಂಕ್​ ಹೊಂದಿರುತ್ತವೆ. ‘ಲೋಕೇಶ್​ ಕನಗರಾಜ್​ ಸಿನಿಮ್ಯಾಟಿಕ್​ ಯೂನಿವರ್ಸ್​’ ಎಂದು ಅದನ್ನು ಕರೆಯಲಾಗುತ್ತದೆ. ಈ ಹಿಂದೆ ಅವರು ನಿರ್ದೇಶಿಸಿದ ‘ಖೈದಿ’ ಹಾಗೂ ‘ವಿಕ್ರಮ್​’ ಸಿನಿಮಾಗಳ ಕಥೆಯಲ್ಲಿ ಡ್ರಗ್ಸ್​ ಉಲ್ಲೇಖ ಇತ್ತು. ಈಗ ‘ಲಿಯೋ’ ಸಿನಿಮಾದಲ್ಲೂ ಅದರ ಪ್ರಸ್ತಾಪ ಆಗಲಿದೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ.

ಇದನ್ನೂ ಓದಿ: Lokesh Kanagaraj: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೋಮವಾರ (ಜೂನ್​ 26) ಬೆಳಗ್ಗೆ 10 ಗಂಟೆ ಸುಮಾರಿಗೆ ಆರ್​ಟಿಐ ಸೆಲ್ವನ್​ ಅವರು ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ಪರಿಣಾಮ ಏನಾಗಬಹುದು ಎಂಬ ಕೌತುಕ ಮೂಡಿದೆ. ಚೆನ್ನೈ ಪೊಲೀಸರು ಈಗಾಗಲೇ ಡ್ರಗ್ಸ್​ ಸೇವನೆ ತಡೆಗೆ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಅನೇಕ ಸ್ಟಾರ್​ ನಟರು ಕೂಡ ಸಾಥ್​ ನೀಡಿದ್ದಾರೆ. ಈ ಸಂದರ್ಭದಲ್ಲಿ ದಳಪತಿ ವಿಜಯ್​ ವಿರುದ್ಧ ಕೇಸ್​ ದಾಖಲಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ