Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು

Naa Ready: ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

Thalapathy Vijay: ಡ್ರಗ್ಸ್​ ಸೇವನೆಗೆ ಪ್ರಚೋದನೆ ನೀಡಿದ ಆರೋಪ: ನಟ ದಳಪತಿ ವಿಜಯ್​ ಮೇಲೆ ಕೇಸ್​ ದಾಖಲು
ದಳಪತಿ ವಿಜಯ್​

Updated on: Jun 26, 2023 | 6:43 PM

ಕಾಲಿವುಡ್​ ನಟ ದಳಪತಿ ವಿಜಯ್​ ಅವರು ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಮಾದಕ ವಸ್ತು ಸೇವನೆಗೆ (Drug Abuse) ದಳಪತಿ ವಿಜಯ್​ ಅವರು ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಕೇಸ್​ ದಾಖಲಾಗಿದೆ. ಚಿತ್ರರಂಗಕ್ಕೂ ಡ್ರಗ್ಸ್​ ದಂಧೆಗೂ ನಂಟು ಇದೆ ಎಂಬುದು ಆಗಾಗ ಸಾಬೀತಾಗುತ್ತಾ ಇರುತ್ತದೆ. ಹಾಗಂತ ದಳಪತಿ ವಿಜಯ್ (Thalapathy Vijay)​ ಅವರು ನೇರವಾಗಿ ಡ್ರಗ್ಸ್​ ಜಾಲದ ಜೊತೆ ಸಂಪರ್ಕ ಹೊಂದಿಲ್ಲ. ಈ ಕಿರಿಕ್​ ಹುಟ್ಟಿಕೊಳ್ಳಲು ಕಾರಣ ಆಗಿರುವುದು ‘ಲಿಯೋ’ (Leo Movie) ಸಿನಿಮಾದ ಸಾಂಗ್​! ಹೌದು, ಈ ಚಿತ್ರದ ‘ನಾ ರೆಡಿ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಒಳ್ಳೆಯ ರೆಸ್ಪಾನ್ಸ್​ ಪಡೆದುಕೊಂಡಿದ್ದು ಹೌದಾದರೂ ಅದರ ಬೆನ್ನಲ್ಲೇ ವಿವಾದ ಕೂಡ ಶುರುವಾಗಿದೆ.

‘ಲಿಯೋ’ ಸಿನಿಮಾದ ‘ನಾ ರೆಡಿ..’ ಗೀತೆಯು ಮಾದಕ ದ್ರವ್ಯ ಸೇವನೆ ಹಾಗೂ ರೌಡಿಸಂ ಅನ್ನು ಪ್ರಚೋದಿಸುತ್ತದೆ ಎಂದು ಆರ್​ಟಿಐ ಸೆಲ್ವನ್​ ಎಂಬುವವರು ದೂರು ನೀಡಿದ್ದಾರೆ. ಪರಿಣಾಮವಾಗಿ ದಳಪತಿ ವಿಜಯ್​ ಅವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಸಿನಿಮಾಗೆ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಂಜಯ್​ ದತ್​, ತ್ರಿಷಾ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಅಭಿನಯಿಸುತ್ತಿದ್ದಾರೆ.

ಲೋಕೇಶ್​ ಕನಗರಾಜ್​ ಅವರು ಕಾಲಿವುಡ್​ನಲ್ಲಿ ತಮ್ಮದೇ ಸಿನಿಮಾಗಳ ಒಂದು ಯೂನಿವರ್ಸ್​ ಸೃಷ್ಟಿ ಮಾಡಿದ್ದಾರೆ. ಅವರು ನಿರ್ದೇಶನ ಮಾಡುವ ಒಂದು ಸಿನಿಮಾದ ಪಾತ್ರಗಳು ಇನ್ನೊಂದು ಸಿನಿಮಾದ ಪಾತ್ರಗಳ ಜೊತೆ ಲಿಂಕ್​ ಹೊಂದಿರುತ್ತವೆ. ‘ಲೋಕೇಶ್​ ಕನಗರಾಜ್​ ಸಿನಿಮ್ಯಾಟಿಕ್​ ಯೂನಿವರ್ಸ್​’ ಎಂದು ಅದನ್ನು ಕರೆಯಲಾಗುತ್ತದೆ. ಈ ಹಿಂದೆ ಅವರು ನಿರ್ದೇಶಿಸಿದ ‘ಖೈದಿ’ ಹಾಗೂ ‘ವಿಕ್ರಮ್​’ ಸಿನಿಮಾಗಳ ಕಥೆಯಲ್ಲಿ ಡ್ರಗ್ಸ್​ ಉಲ್ಲೇಖ ಇತ್ತು. ಈಗ ‘ಲಿಯೋ’ ಸಿನಿಮಾದಲ್ಲೂ ಅದರ ಪ್ರಸ್ತಾಪ ಆಗಲಿದೆ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ.

ಇದನ್ನೂ ಓದಿ: Lokesh Kanagaraj: ‘ಲಿಯೋ’ ನಿರ್ದೇಶಕನಿಗೆ ದಳಪತಿ ವಿಜಯ್​ ಅಭಿಮಾನಿಗಳಿಂದ ಬಹಿರಂಗ ಪತ್ರ; ಏನಿದೆ ಇದರಲ್ಲಿ?

ಮಾದಕ ವಸ್ತು ನಿಯಂತ್ರಣ ಕಾಯ್ದೆ ಅಡಿಯಲ್ಲಿ ನಟ ದಳಪತಿ ವಿಜಯ್​ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೋಮವಾರ (ಜೂನ್​ 26) ಬೆಳಗ್ಗೆ 10 ಗಂಟೆ ಸುಮಾರಿಗೆ ಆರ್​ಟಿಐ ಸೆಲ್ವನ್​ ಅವರು ತಮ್ಮ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ಪರಿಣಾಮ ಏನಾಗಬಹುದು ಎಂಬ ಕೌತುಕ ಮೂಡಿದೆ. ಚೆನ್ನೈ ಪೊಲೀಸರು ಈಗಾಗಲೇ ಡ್ರಗ್ಸ್​ ಸೇವನೆ ತಡೆಗೆ ಹಲವು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಅನೇಕ ಸ್ಟಾರ್​ ನಟರು ಕೂಡ ಸಾಥ್​ ನೀಡಿದ್ದಾರೆ. ಈ ಸಂದರ್ಭದಲ್ಲಿ ದಳಪತಿ ವಿಜಯ್​ ವಿರುದ್ಧ ಕೇಸ್​ ದಾಖಲಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us