AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ‘ಪೊನ್ನಿಯಿನ್ ಸೆಲ್ವನ್ 2’ ಭರ್ಜರಿ ಕಲೆಕ್ಷನ್; ಸಲ್ಲು ಚಿತ್ರವನ್ನೂ ಹಿಂದಿಕ್ಕಿದ ಮಣಿರತ್ನಂ ಸಿನಿಮಾ

Ponniyin Selvan 2 First Day Collection: ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 38 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಣಿ ರತ್ನಂ ಅವರ ನಿರ್ದೇಶನ ಕಮಾಲ್ ಮಾಡಿದೆ.

ಮೊದಲ ದಿನ ‘ಪೊನ್ನಿಯಿನ್ ಸೆಲ್ವನ್ 2’ ಭರ್ಜರಿ ಕಲೆಕ್ಷನ್; ಸಲ್ಲು ಚಿತ್ರವನ್ನೂ ಹಿಂದಿಕ್ಕಿದ ಮಣಿರತ್ನಂ ಸಿನಿಮಾ
TV9 Web
| Edited By: |

Updated on: Apr 29, 2023 | 10:52 AM

Share

ಮಣಿರತ್ನಂ ನಿರ್ದೇಶನ, ಸ್ಟಾರ್ ಪಾತ್ರವರ್ಗ, ಮೊದಲ ಪಾರ್ಟ್​ನ ಯಶಸ್ಸಿನ ಹುಮ್ಮಸ್ಸಿನೊಂದಿಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ (Ponniyin Selvan 2) ಏಪ್ರಿಲ್ 28ರಂದು ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ. ಇತ್ತೀಚೆಗೆ ರಿಲೀಸ್ ಆದ ಸಲ್ಮಾನ್ ಖಾನ್ (Salman Khan) ನಟನೆಯಕಿಸಿ ಕ ಭಾಯ್ ಕಿಸಿ ಕಿ ಜಾನ್ ಸಿನಿಮಾದ ಮೊದಲ ದಿನದ ಗಳಿಕೆಯನ್ನೂ ಹಿಂದಿಕ್ಕಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 38 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಣಿ ರತ್ನಂ ಅವರ ನಿರ್ದೇಶನ ಕಮಾಲ್ ಮಾಡಿದೆ. ತಮಿಳುನಾಡು ಒಂದರಲ್ಲೇ ಈ ಚಿತ್ರ 25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ 3-4 ಕೋಟಿ ರೂಪಾಯಿ, ಕರ್ನಾಟಕದಿಂದ 4-5 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗಿದೆ.

ಶನಿವಾರ (ಏಪ್ರಿಲ್ 29) ಹಾಗೂ ಭಾನುವಾರ (ಏಪ್ರಿಲ್ 30) ಈ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ಸಾಧ್ಯತೆ ಇದೆ. ಸೋಮವಾರ (ಮೇ 1) ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜೆ ಇದೆ. ಇದು ಸಿನಿಮಾಗೆ ಸಹಕಾರಿ ಆಗಲಿದೆ. ಹೀಗಾಗಿ, ಕೆಲವೇ ದಿನಗಳಲ್ಲಿ ಚಿತ್ರದ ಗಳಿಕೆ 100 ಕೋಟಿ ರೂಪಾಯಿ ದಾಟಲಿದೆ.

‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ವಿಕ್ರಮ್, ಐಶ್ವರ್ಯಾ ರೈ ಬಚ್ಚನ್, ಕಾರ್ತಿ, ತ್ರಿಶಾ, ಶೋಭಿತಾ ಧುಲಿಪಾಲ್​, ಪ್ರಕಾಶ್ ರಾಜ್​ ಮೊದಲಾದ ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ. ಕಲ್ಕಿ ಕೃಷ್ಣಮೂರ್ತಿ ಅವರು ಬರೆದ ಪುಸ್ತಕ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ.

ಇದನ್ನೂ ಓದಿ: ಪೊನ್ನಿಯಿನ್ ಸೆಲ್ವನ್ 2 ಹೇಗಿದೆ? ನೆಟ್ಟಿಗರು ಕೊಟ್ಟ ತೀರ್ಪಿದು

ಏಪ್ರಿಲ್ 21ರಂದು ರಿಲೀಸ್ ಆದ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಮೊದಲ ದಿನ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಅದಕ್ಕೂ ಒಂದೂವರೆ ಪಟ್ಟು ಹೆಚ್ಚು ಗಳಿಕೆಯನ್ನು ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮಾಡಿದೆ. ‘ಪೊನ್ನಿಯಿನ್ ಸೆಲ್ವನ್’ ಚಿತ್ರ ಭಾರತದಲ್ಲಿ 327 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಗಳಿಕೆಯನ್ನು ಸೀಕ್ವೆಲ್ ಹಿಂದಿಕ್ಕಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?