AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಕಾಲದಲ್ಲಿ ಹೀರೋಯಿನ್​ಗಳು ವರ್ಜಿನ್​ ಆಗಿರಬೇಕಿತ್ತು; ಮಗಳ ಪರ್ಸನಲ್​ ಲೈಫ್​ ಕೆದಕಿದವರಿಗೆ ನಟಿಯ ಉತ್ತರ

ಬಾಲಾಸಾಹೇಬ್​ ಠಾಕ್ರೆ ಮೊಮ್ಮೊಗ ಐಶ್ವರಿ ಹಾಗೂ ಅಲಾಯಾ ರಿಲೇಶನ್​ನಲ್ಲಿದ್ದಾರೆ ಎನ್ನಲಾಗಿದೆ. ಆದರೆ, ನಮ್ಮಿಬ್ಬರ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ಅಲಾಯ ಹೇಳಿಕೊಂಡಿದ್ದರು.

ನಮ್ಮ ಕಾಲದಲ್ಲಿ ಹೀರೋಯಿನ್​ಗಳು ವರ್ಜಿನ್​ ಆಗಿರಬೇಕಿತ್ತು; ಮಗಳ ಪರ್ಸನಲ್​ ಲೈಫ್​ ಕೆದಕಿದವರಿಗೆ ನಟಿಯ ಉತ್ತರ
ಪೂಜಾ ಹಾಗೂ ಆಲಯ
ರಾಜೇಶ್ ದುಗ್ಗುಮನೆ
|

Updated on: May 09, 2021 | 4:26 PM

Share

ಚಿತ್ರರಂಗಕ್ಕೆ ಕಾಲಿಟ್ಟ ನಂತರದಲ್ಲಿ ನಟ-ನಟಿಯರ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಳ್ಳುತ್ತವೆ. ಯಾವುದಾದರೂ ಹೋಟೆಲ್​ನಲ್ಲಿ ಒಟ್ಟಾಗಿ ಡಿನ್ನರ್​ ಮಾಡಿದರೆ, ಶೂಟಿಂಗ್​ನಲ್ಲಿ ನಗುತ್ತಾ ಮಾತನಾಡಿದರೆ, ನಟನ ಪೋಸ್ಟ್​ಗೆ ನಟಿ ಕಮೆಂಟ್​ ಮಾಡಿದರೆ ಹೀಗೆ ವದಂತಿಗಳು ಹೇಗೆ ಹುಟ್ಟಿಕೊಳ್ಳುತ್ತವೆ ಎಂಬುದನ್ನು ಊಹಿಸುವುದು ಕಷ್ಟ. ಈಗ ನಟಿ ಪೂಜಾ ಬೇಡಿ ಮಗಳು ಅಲಾಯಾ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲ, ಅವರ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ. ಇದಕ್ಕೆ ಪೂಜಾ ಬೇಡಿ ಖಡಕ್​ ಉತ್ತರ ನೀಡಿದ್ದಾರೆ.

ರಾಜಕೀಯ ಹಿನ್ನೆಲೆ ಹೊಂದಿರುವ ಠಾಕ್ರೆ ಕುಟುಂಬದ ಕುಡಿ ಐಶ್ವರಿ ಠಾಕ್ರೆ ಮತ್ತು ಅಲಾಯಾ ಡೇಟಿಂಗ್​ ನಡೆಸುತ್ತಿದ್ದಾರೆ ಎನ್ನುವ ವದಂತಿ ಜೋರಾಗಿದೆ. ಆದರೆ, ಇದನ್ನು ಈ ವರೆಗೆ ಯಾರೊಬ್ಬರೂ ಅಧಿಕೃತಗೊಳಿಸಿಲ್ಲ. ಇತ್ತೀಚೆಗೆ ಪೂಜಾ ಬೇಡಿ ಮಾಧ್ಯಮವನ್ನು ಎದುರುಗೊಂಡರು. ಈ ವೇಳೆ ಅವರು ಮಗಳನ್ನು ವಹಿಸಿಕೊಂಡು ಮಾತನಾಡಿದ್ದಾರೆ.

ನಮ್ಮ ಕಾಲದಲ್ಲಿ ಪರಿಸ್ಥಿತಿಗಳು ಬೇರೆ ಇದ್ದವು. ನಟಿಗೆ ಬಾಯ್​ಫ್ರೆಂಡ್ ಇರಬಾರದಿತ್ತು. ಅವಳು ವರ್ಜಿನ್​ ಆಗಿರಬೇಕಿತ್ತು. ಎಲ್ಲಕ್ಕಿಂತ ಹೆಚ್ಚಾಗಿ ನಟಿಯರಿಗೆ ಮದುವೆ ಆಗಿರಬಾರದಿತ್ತು. ಆದರೆ, ಈಗ ಕಾಲ ಬದಲಾಗಿದೆ. ಪ್ರತಿಯೊಬ್ಬ ಜೀವಿಗೂ ಖಾಸಗಿ ಜೀವನ ತನ್ನಿಷ್ಟದಂತೆ ಬದುಕುವ ಹಕ್ಕಿದೆ ಎಂದು ಹೇಳುವ ಮೂಲಕ ಮಗಳು ಮಾಡುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬುದನ್ನು ಪೂಜಾ ಬೇಡಿ ಪರೋಕ್ಷವಾಗಿ ಹೇಳಿದರು.

ಕರೀನಾ ಕಪೂರ್​ಗೆ ಮದುವೆ ಆಗಿದೆ. ಆದಾಗ್ಯೂ ಅವರು ಬೇಡಿಕೆ ಕಳೆದಕೊಂಡಿಲ್ಲ. ಪ್ರೇಕ್ಷಕರ ಮಸ್ಥಿತಿಯಲ್ಲಿ ಬದಲಾವಣೆ ಆಗಿರುವುದರಿಂದ ಇಂಡಸ್ಟ್ರಿಯಲ್ಲಿ ಒಂದು ಬದಲಾವಣೆ ಬಂದಿದೆ. ಸೋಶಿಯಲ್​ ಮೀಡಿಯಾಗೆ ಒಂದು ಥ್ಯಾಂಕ್ಸ್​ ಹೇಳಲೇಬೇಕು ಎಂದಿದ್ದಾರೆ ಪೂಜಾ.

ಬಾಲಾಸಾಹೇಬ್​ ಠಾಕ್ರೆ ಮೊಮ್ಮೊಗ ಐಶ್ವರಿ ಹಾಗೂ ಅಲಾಯಾ ರಿಲೇಶನ್​ನಲ್ಲಿದ್ದಾರೆ ಎನ್ನಲಾಗಿದೆ. ಆದರೆ, ನಮ್ಮಿಬ್ಬರ ನಡುವೆ ಇರೋದು ಕೇವಲ ಫ್ರೆಂಡ್​ಶಿಪ್​ ಎಂದು ಅಲಾಯ ಹೇಳಿಕೊಂಡಿದ್ದರು. ನಮ್ಮಿಬ್ಬರಿಗೆ ಮೊದಲಿನಿಂದಲೂ ಪರಿಯಚ ಇದೆ. ಐಶ್ವರಿ ನನಗೆ ಉತ್ತಮ ಗೆಳೆಯ. ನಾವಿಬ್ಬರೂ ಒಟ್ಟಿಗೇ ನಟನಾ ತರಬೇತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಅಲಾಯ ಹೇಳಿಕೊಂಡಿದ್ದರು.

ಕೊರೊನಾ ವೈರಸ್ ಎರಡನೇ ಅಲೆ ಹಬ್ಬುತ್ತಿದೆ. ಈ ಸಂದರ್ಭದಲ್ಲಿ ಮನೆಯಲ್ಲೇ ಇರುವಂತೆ ಹಾಗೂ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್​​ ಧರಿಸುವಂತೆ ಸರ್ಕಾರ ಕೇಳಿಕೊಳ್ಳುತ್ತಿವೆ. ಆದರೆ, ಅಲಾಯ ಗೋವಾಗೆ ತೆರಳಿ ಫೋಟೋ ಒಂದನ್ನು ಹಾಕಿದ್ದರು. ಇದರಲ್ಲಿ ಅವರು ಮಾಸ್ಕ್​ ಧರಿಸಿರಲಿಲ್ಲ. ಮಾಸ್ಕ್​ ಹಾಕಲೇ ಬೇಕು ಎಂದೇನಿಲ್ಲ ಎನ್ನುವ ಅರ್ಥದಲ್ಲಿ ಪೋಸ್ಟ್ ಹಾಕಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಹಾಟ್​ ಡ್ಯಾನ್ಸ್​ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ ಬಿಗ್​ ಬಾಸ್​ ಸ್ಪರ್ಧಿ ರಶ್ಮಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು