AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಸಿಗದೆ ಒದ್ದಾಡುತ್ತಿರುವ ಹೀರೋ ಜೊತೆ ಡೇಟಿಂಗ್ ಶುರು ಹಚ್ಚಿಕೊಂಡ ಪೂಜಾ ಹೆಗ್ಡೆ

ಇತ್ತೀಚೆಗೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಅವರು ರೋಹನ್ ಮೆಹ್ರಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ದಿ. ವಿನೋದ್ ಮೆಹ್ರಾ ಪುತ್ರ ರೋಹನ್, 'ಬಜಾರ್' ನಟ. ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ಹಲವು ಊಹಾಪೋಹಗಳಿಗೆ ಕಾರಣವಾಗಿದ್ದಾರೆ. ಇವರ ಸಂಬಂಧದ ಕುರಿತು ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಹಿಟ್ ಸಿಗದೆ ಒದ್ದಾಡುತ್ತಿರುವ ಹೀರೋ ಜೊತೆ ಡೇಟಿಂಗ್ ಶುರು ಹಚ್ಚಿಕೊಂಡ ಪೂಜಾ ಹೆಗ್ಡೆ
ಪೂಜಾ-ರೋಹನ್
ರಾಜೇಶ್ ದುಗ್ಗುಮನೆ
|

Updated on: Apr 29, 2026 | 11:19 AM

Share

ಮಂಗಳೂರು ಮೂಲದ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಇತ್ತೀಚೆಗೆ ದೊಡ್ಡ ಯಶಸ್ಸು ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಸಿನಿಮಾಗಳಿಂದಲೂ ಹಿಂದಕ್ಕೆ ಸರಿಯುತ್ತಿದ್ದಾರೆ. ಹೀಗಿರುವಾಗಲೇ ಅವರು ಡೇಟಿಂಗ್ ವಿಷಯಕ್ಕೆ ಸುದ್ದಿ ಆಗಿದ್ದಾರೆ. ಪೂಜಾ ಹೆಗ್ಡೆ ಅವರು ‘ಬಜಾರ್’ ಹೆಸರಿನ ಸಿನಿಮಾ ಮಾಡಿದ್ದ ರೋಹನ್ ಮೆಹ್ರಾ ಜೊತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ.

ರೋಹನ್ ಮೆಹ್ರಾ ಅವರು ಹಿಂದಿ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದ ವಿನೋದ್ ಮೆಹ್ರಾ ಅವರ ಮಗ. ಈ ಕಾರಣಕ್ಕೆ ವಿನೋದ್ ಅವರಿಗೆ ಚಿತ್ರರಂಗದಲ್ಲಿ ಸಿನಿಮಾ ಆಫರ್​​ಗಳು ಸಿಕ್ಕವು. 2015ರಲ್ಲಿ ಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ರೋಹನ್ ಮೆಹ್ರಾ ನಟಿಸಿದರು. ಆ ಬಳಿಕ ಕಿರುಚಿತ್ರ ಒಂದನ್ನು ಮಾಡಿದರು. 2018ರಲ್ಲಿ ‘ಬಜಾರ್’ ಹೆಸರಿನ ಸಿನಿಮಾ ಮಾಡಿದರು. ಈ ಚಿತ್ರವೂ ಮೆಚ್ಚುಗೆ ಪಡೆದಿಲ್ಲ.‘420 ಐಪಿಸಿ’, ‘ಅದ್ಭುತ್’ ಹೆಸರಿನ ಚಿತ್ರವನ್ನು ರೋಹನ್ ಮೆಹ್ರಾ ಮಾಡಿದರು. ಸದ್ಯ ಅವರ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ.

ಪೂಜಾ ಹೆಗ್ಡೆ ಹಾಗೂ ರೋಹನ್ ಒಟ್ಟಾಗಿ ಸಿನಿಮಾ ಮಾಡಿಲ್ಲ. ಆದರೆ, ಇಬ್ಬರ ಮಧ್ಯೆ ಪರಿಚಯ ಬೆಳೆದಿದೆ. ಇಬ್ಬರೂ ಅನೇಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ ಎಲ್ಲಿಯೂ ಇವರು ಡೇಟಿಂಗ್ ವಿಷಯ ರಿವೀಲ್ ಮಾಡಿಲ್ಲ. ಈಗ ಇವರು ಗುಟ್ಟಾಗಿ ಸುತ್ತಾಡುತ್ತಿರುವುದು ಸ್ಪಷ್ಟವಾಗಿದೆ.

ಈ ವಿಷಯವನ್ನು ಪೂಜಾ ಹೆಗ್ಡೆ ಆಗಲೀ, ರೋಹನ್ ಮೆಹ್ರಾ ಆಗಲಿ ಖಚಿತಪಡಿಸಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂಬ ಮಾತನ್ನು ಅನೇಕರು ನೆನಪಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಬ್ಬರೂ ವಿವಾಹ ಆಗುವ ಘೋಷಣೆ ಮಾಡಿದ್ದರೂ ಅಚ್ಚರಿ ಏನಿಲ್ಲ. ಇದನ್ನೂ ಓದಿ: ಮುಂಬೈ ಸೋಲುತ್ತಿದ್ದಂತೆ ಮುಖ ಮುಚ್ಚಿಕೊಂಡ ಪೂಜಾ ಹೆಗ್ಡೆ

ಈ ಮೊದಲು ವರುಣ್ ಧವನ್ ಜೊತೆ ಪೂಜಾ ಹೆಗ್ಡೆ ಆಪ್ತವಾಗಿದ್ದ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇವರ ಮಧ್ಯೆ ಏನೋ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಹಾಗಾಗಿಲ್ಲ. ಈಗ ಈ ವಿಷಯವೂ ಅದೇ ರೀತಿಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?