AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅ

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?
ಪೂಜಾ, ಮೃಣಾಲ್, ಶ್ರೀಲೀಲಾ,ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 7:10 AM

Share

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅಲ್ಲು ಅರ್ಜುನ್ (Allu Arjun) ಮೊದಲಾದವರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರು ಒಪ್ಪಿಕೊಂಡ ಎರಡು ಸಿನಿಮಾಗಳಿಂದ ಅವರು ಹೊರನಡೆದಿದ್ದಾರೆ. ಇದಕ್ಕೆ ಕಾರಣಗಳು ಇನ್ನೂ ಬಹಿರಂಗ ಆಗಿಲ್ಲ. ಪೂಜಾ ಹೆಗ್ಡೆಗೆ ಇತರ ಹೀರೋಯಿನ್​ಗಳೇ ವಿಲನ್ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು, ಪೂಜಾ ಹೆಗ್ಡೆ ಅವರ ನಡೆ ಕೂಡ ನಿಗೂಢವಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೊರಾಗಿದೆ.

ಪೂಜಾ ಹೆಗ್ಡೆ ಅವರು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಆ ಚಿತ್ರದಿಂದ ಅವರು ಸೈಲೆಂಟ್ ಆಗಿ ಹೊರಬಂದರು. ಪವನ್ ಕಲ್ಯಾಣ್ ನಟನೆಯ ಸಿನಿಮಾದಲ್ಲೂ ಅವರು ನಟಿಸಬೇಕಿತ್ತು. ಆದರೆ, ಆ ಚಿತ್ರದಲ್ಲೂ ಅವರು ನಟಿಸುತ್ತಿಲ್ಲ. ಈ ಎರಡೂ ಚಿತ್ರಕ್ಕೆ ಈಗ ಶ್ರೀಲೀಲಾ ನಾಯಕಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ. ಶ್ರೀಲೀಲಾ ಆಫರ್​ನ ಕಿತ್ತುಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಪೂಜಾ ಹೆಗ್ಡೆ ಫ್ಯಾನ್ಸ್ ಮಾಡುತ್ತಿದ್ದಾರೆ.

ಗೋಪಿಚಂದ್ ಮಲಿನೇನಿ ಹಾಗೂ ರವಿ ತೇಜಾ ಅವರ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ ಆಗಬೇಕಿತ್ತು. ಆದರೆ, ಗೋಪಿಚಂದ್ ಅವರು ಪೂಜಾ ಬದಲು ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ‘ಸೀತಾ ರಾಮಂ’ ಸಿನಿಮಾ ಯಶಸ್ಸಿನ ಬಳಿಕ ಮೃಣಾಲ್ ಯಶಸ್ಸು ಹೆಚ್ಚಿದೆ. ಈ ಕಾರಣಕ್ಕೆ ಅವರಿಗೆ ಮಣೆ ಹಾಕಲಾಗಿದೆ.

ಈ ಮೊದಲು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅವರು ಕೂಡ ಪೂಜಾ ವೇಗಕ್ಕೆ ಬ್ರೇಕ್ ಹಾಕಿದ್ದಾರೆ ಎಂಬ ಮಾತಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುತ್ತಿದ್ದ ನಕಲಿ ಸೆನ್ಸಾರ್ ಸದಸ್ಯನಿಗೆ ನೊಟೀಸ್ ಕಳಿಸಿದ ನಟಿ ಪೂಜಾ ಹೆಗ್ಡೆ

ಇತ್ತೀಚೆಗೆ ರಿಲೀಸ್ ಆದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಸಿದ್ದರು. ಆದರೆ, ಸಿನಿಮಾ ಗೆಲ್ಲಲಿಲ್ಲ. ಇದಕ್ಕೂ ಮೊದಲು ರಿಲೀಸ್ ಆದ ಅವರ ನಟನೆಯ ಹಲವು ಸಿನಿಮಾಗಳು ಸೋತಿವೆ. ಇದು ಕೂಡ ಪೂಜಾ ಹೆಗ್ಡೆ ವೇಗಕ್ಕೆ ಬ್ರೇಕ್ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ