AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?

ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅ

ಪೂಜಾ ಹೆಗ್ಡೆ ವೃತ್ತಿ ಬದುಕಿಗೆ ವಿಲನ್ ಒಬ್ಬರಾ, ಇಬ್ಬರಾ? ನಟಿಯ ಹಿನ್ನಡೆಗೆ ಇವರೇ ಕಾರಣ?
ಪೂಜಾ, ಮೃಣಾಲ್, ಶ್ರೀಲೀಲಾ,ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 7:10 AM

Share

ನಟಿ ಪೂಜಾ ಹೆಗ್ಡೆ (Pooja Hegde) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅಲ್ಲು ಅರ್ಜುನ್ (Allu Arjun) ಮೊದಲಾದವರ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅವರು ಒಪ್ಪಿಕೊಂಡ ಎರಡು ಸಿನಿಮಾಗಳಿಂದ ಅವರು ಹೊರನಡೆದಿದ್ದಾರೆ. ಇದಕ್ಕೆ ಕಾರಣಗಳು ಇನ್ನೂ ಬಹಿರಂಗ ಆಗಿಲ್ಲ. ಪೂಜಾ ಹೆಗ್ಡೆಗೆ ಇತರ ಹೀರೋಯಿನ್​ಗಳೇ ವಿಲನ್ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು, ಪೂಜಾ ಹೆಗ್ಡೆ ಅವರ ನಡೆ ಕೂಡ ನಿಗೂಢವಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೊರಾಗಿದೆ.

ಪೂಜಾ ಹೆಗ್ಡೆ ಅವರು ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸಿದ್ದರು. ಆದರೆ, ಆ ಚಿತ್ರದಿಂದ ಅವರು ಸೈಲೆಂಟ್ ಆಗಿ ಹೊರಬಂದರು. ಪವನ್ ಕಲ್ಯಾಣ್ ನಟನೆಯ ಸಿನಿಮಾದಲ್ಲೂ ಅವರು ನಟಿಸಬೇಕಿತ್ತು. ಆದರೆ, ಆ ಚಿತ್ರದಲ್ಲೂ ಅವರು ನಟಿಸುತ್ತಿಲ್ಲ. ಈ ಎರಡೂ ಚಿತ್ರಕ್ಕೆ ಈಗ ಶ್ರೀಲೀಲಾ ನಾಯಕಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಷಯ. ಶ್ರೀಲೀಲಾ ಆಫರ್​ನ ಕಿತ್ತುಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಪೂಜಾ ಹೆಗ್ಡೆ ಫ್ಯಾನ್ಸ್ ಮಾಡುತ್ತಿದ್ದಾರೆ.

ಗೋಪಿಚಂದ್ ಮಲಿನೇನಿ ಹಾಗೂ ರವಿ ತೇಜಾ ಅವರ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ ಆಗಬೇಕಿತ್ತು. ಆದರೆ, ಗೋಪಿಚಂದ್ ಅವರು ಪೂಜಾ ಬದಲು ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ‘ಸೀತಾ ರಾಮಂ’ ಸಿನಿಮಾ ಯಶಸ್ಸಿನ ಬಳಿಕ ಮೃಣಾಲ್ ಯಶಸ್ಸು ಹೆಚ್ಚಿದೆ. ಈ ಕಾರಣಕ್ಕೆ ಅವರಿಗೆ ಮಣೆ ಹಾಕಲಾಗಿದೆ.

ಈ ಮೊದಲು ರಶ್ಮಿಕಾ ಮಂದಣ್ಣ ಹಾಗೂ ಪೂಜಾ ಹೆಗ್ಡೆ ಮಧ್ಯೆ ಭರ್ಜರಿ ಕಾಂಪಿಟೇಷನ್ ಇತ್ತು. ಪೂಜಾ ಹೆಗ್ಡೆಗೆ ಸಿಗೋ ಆಫರ್​ಗಳು ರಶ್ಮಿಕಾ ಪಾಲಾಗಿವೆ ಎನ್ನುವ ಮಾತಿದೆ. ಅವರು ಕೂಡ ಪೂಜಾ ವೇಗಕ್ಕೆ ಬ್ರೇಕ್ ಹಾಕಿದ್ದಾರೆ ಎಂಬ ಮಾತಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುತ್ತಿದ್ದ ನಕಲಿ ಸೆನ್ಸಾರ್ ಸದಸ್ಯನಿಗೆ ನೊಟೀಸ್ ಕಳಿಸಿದ ನಟಿ ಪೂಜಾ ಹೆಗ್ಡೆ

ಇತ್ತೀಚೆಗೆ ರಿಲೀಸ್ ಆದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಟಿಸಿದ್ದರು. ಆದರೆ, ಸಿನಿಮಾ ಗೆಲ್ಲಲಿಲ್ಲ. ಇದಕ್ಕೂ ಮೊದಲು ರಿಲೀಸ್ ಆದ ಅವರ ನಟನೆಯ ಹಲವು ಸಿನಿಮಾಗಳು ಸೋತಿವೆ. ಇದು ಕೂಡ ಪೂಜಾ ಹೆಗ್ಡೆ ವೇಗಕ್ಕೆ ಬ್ರೇಕ್ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ಫುಟ್‌ಪಾತ್ ಅಂಗಡಿಗಳ ತೆರವು ವೇಳೆ ಇಳಕಲ್​​ನಲ್ಲಿ ಹೈಡ್ರಾಮಾ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ